nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು
    • ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!
    • ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್
    • ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
    • ತುಮಕೂರು: ಅಂತರಸನಹಳ್ಳಿ ಸೇತುವೆ ಬಳಿ ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ವಾಹನ ಸವಾರರ ಪರದಾಟ
    • ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು
    • ನಡೆಯುವ ದೇವರು, ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನದ ಹಾರ್ದಿಕ ಶುಭಾಶಯಗಳು
    • ಇಂದು ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಸ್ವಾಮೀಜಿ 119ನೇ ಜನ್ಮದಿನೋತ್ಸವ ಸಂಭ್ರಮ: ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉಳ್ಳವರ ಪಾಲಾಗುತ್ತಿರುವ ಸರ್ಕಾರಿ ಭೂಮಿ ಉಳಿಸಿ: ನಗರಸಭಾ ಸದಸ್ಯ ಮಹೇಶ್ ಗಂಭೀರ ಆರೋಪ
    ತಿಪಟೂರು February 9, 2023

    ಉಳ್ಳವರ ಪಾಲಾಗುತ್ತಿರುವ ಸರ್ಕಾರಿ ಭೂಮಿ ಉಳಿಸಿ: ನಗರಸಭಾ ಸದಸ್ಯ ಮಹೇಶ್ ಗಂಭೀರ ಆರೋಪ

    By adminFebruary 9, 2023No Comments2 Mins Read
    tipaturu

    ತಿಪಟೂರು: ನಗರದ ಇಂದಿರಾನಗರದಲ್ಲಿರುವ ಸರ್ಕಾರಿ ಜಾಗ ಹದ್ದಿ ಹದುಹಿಡಿದ ಹಳ್ಳದ ಸುಮಾರು ಕೋಟ್ಯಾಂತರ ರೂ ಬೆಲೆಬಾಳುವ ಜಾಗವನ್ನು ಜಿ.ಬಿ.ಗಂಗಯ್ಯನವರ ಮಕ್ಕಳಾದ ಪುಷ್ಪಾವತಿ ಮತ್ತು ಮೋಹನ ಕುಮಾರಿ ಎಂಬುವವರು ಒತ್ತುವರಿ ಮಾಡಿಕೊಂಡಿದ್ದರು ಈ ಬಗ್ಗೆ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಕ್ರಮ ಜರುಗಿಸಲು ಮೀನಾಮೇಷ ಎಣಿಸುತ್ತಿದ್ದಾರೆಂದು ವಾರ್ಡ್ ನಂ 18ರ ನಗರಸಭಾ ಸದಸ್ಯ ಮಹೇಶ್ ಆರೋಪಿಸಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದಿನಗರದಲ್ಲಿ ಅನೇಕ ಬಡವರು ವಾಸಿಸುತ್ತಿದ್ದಾರೆ. ಸರ್ಕಾರಿ ಜಾಗವನ್ನು ಮಂಜೂರು ಮಾಡಿಸಿಕೊಂಡು ಮನೆಕಟ್ಟಿಕೊಂಡು ವಾಸಿಸುತ್ತಿದ್ದು, ಇನ್ನು ಅನೇಕ ನಿರ್ಗತಿಕರು ನಿವೇಶನವಿಲ್ಲದೇ ಹೋರಾಡುತ್ತಿದ್ದಾರೆ. ಆದರೆ ಪ್ರಭಲ ಗಾಣಿಗ ಸಮುದಾಯಕ್ಕೆ ಸೇರಿದ ಮೋಹನ ಕುಮಾರಿ ಮತ್ತು ಪುಷ್ಪಾವತಿ ಎಂಬುವವರು ಒತ್ತುವರಿ ಮಾಡುತ್ತಿದ್ದು, ಸರ್ಕಾರ ನೋಟಿಸ್ ನೀಡಿದರು ಅದನ್ನು ತೆಗೆದುಕೊಳ್ಳದೇ ಕಟ್ಟಡದ ಕಾಮಗಾರಿಯನ್ನು ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗು ನಿವೇಶನ ರಹಿತರಿಗೆ ತುಂಬಾ ಅನ್ಯಾಯವಾಗುತ್ತಿದೆ ಎಂದು ಅವರು ದೂರಿದರು.


    Provided by
    Provided by

    ಮಾರನಗೆರೆ ಗ್ರಾಮದ ಸರ್ವೇ ನಂ 11/2ರ ಜಮೀನನ್ನು ದಿನಾಂಕ: 14-09-2018ರಂದು ಮಾರನಗೆರೆ ಗಡಿಯನ್ನು ನಿರ್ಧರಿಸಿದ್ದರು. ಆದರೆ ತಿಪಟೂರು ಗಡಿಯನ್ನು ಇದುವರೆಗೂ ಗುರುತಿಸಿ ಸರ್ಕಾರಿ ಜಾಗವನ್ನು ಬಿಡಿಸಿಕೊಳ್ಳಲು ತಾಲ್ಲೂಕು ಕಂದಾಯ ಇಲಾಖೆಗೆ ಇದುವರೆಗೂ ಸಾಧ್ಯವಾಗಿಲ್ಲ. ಇಂತಹ ಸಮಯದಲ್ಲಿ ಇಲ್ಲಿ ಎಂಟು ಅಡಿಗೂ ಎತ್ತರದ ಗೋಡೆಯನ್ನು ನಿರ್ಮಿಸಿ ಅದರೊಳಗೆ ಕಟ್ಟಡವನ್ನು ಕಟ್ಟುವ ಹುನ್ನಾರವನ್ನು ನಡೆಸಿದ್ದಾರೆ ಎಂದು ಆರೋಪಿಸಿದರು.

    ಇವರು ಗಾಣಿಗ ಸಮುದಾಯದವರಾಗಿದ್ದು, ಇವರಿಗೆ ಇಡೀ ಸಮುದಾಯದ ಬೆಂಬಲ, ರಾಜಕೀಯ ಬೆಂಬಲವೂ ದೊರೆತಿದ್ದು, ಸರ್ಕಾರಿ ನೋಟೀಸ್ ನೀಡಿದರೂ, ಅದನ್ನು ತೆಗೆದುಕೊಳ್ಳುವುದಿಲ್ಲವೆಂದು ಹೇಳುವ ಮಟ್ಟಿಗೆ ತಲುಪಿದ್ದಾರೆ. ಮನೆಯ ಬಾಗಿಲಿಗೆ ನೋಟೀಸ್ ಅಂಟಿಸಿದರು ಯಾವುದಕ್ಕೂ ಕ್ಯಾರೆ ಎನ್ನದೇ ಕಟ್ಟಡದ ಕಾಮಗಾರಿಯನ್ನು ಮುಂದುವರೆಸುತ್ತಲೇ ಇದ್ದಾರೆ ಎಂದರು.

    ಈ ಭೂ ಕಬಳಿಕೆಯ ಬಗ್ಗೆ ಹಿಂದಿನ ತಹಸೀಲ್ದಾರ್ ಆಗಿದ್ದ ಆರತಿಯವರಿಗೂ ದೂರು ನೀಡಿದ್ದರು. ಅವರು ಕ್ರಮ ಕೈಗೊಳ್ಳದೇ ಇದ್ದಾಗ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದೆ. ಆಗ ಜಿಲ್ಲಾಧಿಕಾರಿಗಳು ಗಡಿಯನ್ನು ಗುರುತಿಸಿ ಸೂಕ್ತ ಬಂದೂ ಬಸ್ತ್ ಮಾಡಲು ಆದೇಶಿಸಿದಾಗ ತನ್ನ ಜನರಿಗೆ ತೊಂದರೆಯಾಗುತ್ತದೆಂದು ತಿಳಿದ ತಹಸೀಲ್ದಾರ್ ಆರತಿ, ಸರಣಿ ರಜೆ ಇರುವ ದಿನಾಂಕವನ್ನು ನೋಡಿ ಸರ್ವೆಗೆ ತಿಳಿಸಿದರು. ಆದರೆ ಸರಣಿ ರಜೆ ಇದ್ದಿದ್ದರಿಂದ ಸರ್ವೇ ಆಗಲೇ ಇಲ್ಲ. ಇನ್ನು ಈಗಿನ ತಹಸೀಲ್ದಾರ್‌ ಗೂ ಅರ್ಜಿಯನ್ನು ನೀಡಿದರು, ಅವರು ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ವರ್ಗಾವಣೆಗೊಂಡು ಹೋಗುತ್ತಾರೆ ಮುಂದೆ ಬರುವವರು ಏನು ಕ್ರಮ ತೆಗೆದುಕೊಳ್ಳುತ್ತಾರೋ ಗೊತ್ತಿಲ್ಲ. ಇದೇ ವೇಳೆ ಕಟ್ಟಡವನ್ನು ನಿರ್ಮಿಸಿ ಮುಂದಿನ ದಿನಗಳಲ್ಲಿ ನಾವೇ ಅನುಭೋಗದಲ್ಲಿದ್ಧೇವೆಂದು ತೋರಿಸಲು ಒತ್ತುವರಿದಾರರು ನಿರ್ಧರಿಸಿದಂತೆ ಕಾಣುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಒತ್ತುವರಿಯನ್ನು ತೆರವು ಗೊಳಿಸಿ ಕೋಟ್ಯಾತಂರ ರೂ. ಮೌಲ್ಯದ ಸರ್ಕಾರಿ ಜಾಗವನ್ನು ಉಳಿಸಿಕೊಟ್ಟು ಬಡ ಜನರಿಗೆ ನಿವೇಶನವನ್ನು ಕೊಡಬೇಕೆಂದು ಆಗ್ರಹಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಸದಸ್ಯ ಯೋಗೀಶ್, ತಿಲಕ್‌ಕುಮಾರ್, ವಾರ್ಡ್ ನ ನಾಗರಿಕರಾದ ತುಳಸಿ ರಾಮ್, ಜಯಣ್ಣ, ಮತ್ತಿತರರು ಹಾಜರಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಸಮಾಜ ಕಲ್ಯಾಣ ಕಚೇರಿಯಲ್ಲಿ ಆತ್ಮಹತ್ಯೆ ಪ್ರಕರಣ: ಪರಿಶೀಲನೆ ಮಾಡದೆ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬಾರದು: ಯಗಚಿ ಕಟ್ಟೆ ರಾಘವೇಂದ್ರ ಒತ್ತಾಯ

    March 25, 2026

    ತಿಪಟೂರು: ಸಾರ್ವಜನಿಕ ಶೌಚಾಲಯಗಳಿಗೆ ಬೀಗ; ಬಯಲು ವಿಸರ್ಜನೆಗೆ ಮೊರೆ ಹೋದ ಜನತೆ

    March 25, 2026

    ದೇವನಹಳ್ಳಿ ಬಳಿ ಭೀಕರ ಅಪಘಾತ: ವಾರಾಣಸಿಗೆ ತೆರಳುತ್ತಿದ್ದ ತಿಪಟೂರಿನ ಮೂವರು ಮಹಿಳೆಯರ ಸಾವು

    March 22, 2026

    Comments are closed.

    Our Picks

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026

    ನಮ್ಮೊಂದಿಗೆ ಪ್ರೇಮ, ಆದ್ರೆ ಮದುವೆಯಾಗಿದ್ದು ಮೋದಿಯವರನ್ನು: ದೇವೇಗೌಡರ ಕಾಲೆಳೆದ ಮಲ್ಲಿಕಾರ್ಜುನ ಖರ್ಗೆ

    March 18, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರ: ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

    April 1, 2026

    ದಾವಣಗೆರೆ: ಕರ್ನಾಟಕದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದ್ದು, ಜಿಎಸ್‌ಟಿ ಸಂಗ್ರಹ ಮತ್ತು ಹೂಡಿಕೆಯಲ್ಲಿ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ…

    ತುಮಕೂರು: ಅಣ್ಣನಿಂದಲೇ ತಮ್ಮನ ಕೊಲೆ; ಸುಳ್ಳು ಕಥೆ ಕಟ್ಟಿ ಸಿಕ್ಕಿಬಿದ್ದ ತಂದೆ–ಮಗ!

    April 1, 2026

    ಗುಣಮಟ್ಟದ ಹಾಲು ಶೇಖರಣೆ: ತುಮಕೂರು ಜಿಲ್ಲೆ ರಾಜ್ಯದಲ್ಲೇ ಪ್ರಥಮ: ಶಾಸಕ ಎಚ್.ವಿ.ವೆಂಕಟೇಶ್

    April 1, 2026

    ಸಿದ್ದಗಂಗಾ ಮಠವು ಕರುಣಾ ಗಂಗೆಯಾಗಿ ಹರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    April 1, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.