ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೈಕ್ ಸವಾರರನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಬೆಂಗಾವಲು ಪಡೆಯ ವಾಹನದಲ್ಲೇ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ನಗರದ ಶಿರೂರು ಪಾರ್ಕ್ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಸಚಿವರು ಬೆಂಗಾವಲು ಪಡೆ ವಾಹನದೊಂದಿಗೆ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದರು.
ಈ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕ ಅಪಘಾತಕ್ಕೀಡಾಗಿ ತೀವ್ರ ಗಾಯಗೊಂಡಿರುವುದು ಕಂಡುಬಂದಿತ್ತು. ಗಾಯಾಳುಗಳ ಸ್ಥಿತಿ ನೋಡಿದ ಸಚಿವರು, ತಕ್ಷಣವೇ ತಮ್ಮ ಬೆಂಗಾವಲು ಪಡೆಯ ವಾಹನದಲ್ಲಿ ಕಿಮ್ಸ್ಗೆ ಕಳುಹಿಸಿಕೊಟ್ಟರು.
ಅಲ್ಲದೇ, ಕಿಮ್ಸ್ ನಿರ್ದೇಶಕರಿಗೆ ಸ್ವತಃ ಕರೆ ಮಾಡಿದ ಗಾಯಾಳುಗಳಿಗೆ ತ್ವರಿತವಾಗಿ ಚಿಕಿತ್ಸೆ ನೀಡಿ, ಉಪಚರಿಸುವಂತೆ ನಿರ್ದೇಶನ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW