“ಪೌರತ್ವ ತಿದ್ದುಪಡಿ ಕಾಯಿದೆ(ಸಿಎಎ) ಮೂಲಭೂತವಾಗಿ ತಾರತಮ್ಯದ ನಡೆಯಾಗಿದೆ.” ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ. ‘2019ರಲ್ಲಿ ವಿಶ್ವಸಂಸ್ಥೆ ಅಭಿಪ್ರಾಯಪಟ್ಟಂತೆ ಸಿಎಎ ಸ್ವಾಭಾವಿಕವಾಗಿ ತಾರತಮ್ಯ ಭರಿತವಾಗಿದೆ. ಜತೆಗೆ ಇದು ಭಾರತೀಯ ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ,” ಎಂದು ರಾಯಿಟರ್ಸ್ ಸುದ್ದಿಸಂಸ್ಥೆಗೆ ವಿಶ್ವಸಂಸ್ಥೆಯ ಪ್ರಧಾನ ಆಯುಕ್ತರ ಕಚೇರಿಯ ವಕ್ತಾರರು ತಿಳಿಸಿದ್ದಾರೆ.
“ಧಾರ್ಮಿಕ ಸ್ವಾತಂತ್ರ್ಯಕ್ಕೆ ಗೌರವ ಹಾಗೂ ಎಲ್ಲ ಸಮುದಾಯಗಳಿಗೆ ಸಮಾನ ಹಕ್ಕುಗಳು ನೆಲದ ಕಾನೂನು ಅಡಿಯಲ್ಲಿ ದೊರಕಬೇಕು. ಇದು ಪ್ರಜಾಪ್ರಭುತ್ವದ ಭೌಗೋಳಿಕವಾದ ಮೂಲಭೂತ ಸಿದ್ಧಾಂತಗಳಲ್ಲಿ ಪ್ರತಿಪಾದನೆಯಾಗಿದೆ,” ಎಂದು ವಕ್ತಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಶ್ವಸಂಸ್ಥೆಯ ನಿಲುವಿಗೆ ಅಮೆರಿಕ ಸರಕಾರದ ಕೆಲವು ಇಲಾಖೆಗಳು ಬೆಂಬಲ ಸೂಚಿಸಿವೆ ಎಂದು ವರದಿಯಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


