nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ
    ತುಮಕೂರು December 20, 2024

    ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ

    By adminDecember 20, 2024No Comments1 Min Read
    amoghavarsha

    ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ.

    ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.


    Provided by
    Provided by

    ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

    “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬುರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಅಮೋಘ ವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸಂಶೋಧನಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ

    May 14, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ

    May 15, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ದೇಶದಲ್ಲಿ ತೀವ್ರ ಬೇಸಿಗೆಯಿಂದ ಜನ ಹಾಗೂ ಜಾನುವಾರುಗಳು ಸಂಕಷ್ಟ ಅನುಭವಿಸುತ್ತಿದ್ದು, ಮಹಾಶಕ್ತಿ ಮಾರಮ್ಮ ತಾಯಿ…

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.