nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ
    ತುಮಕೂರು December 20, 2024

    ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ

    By adminDecember 20, 2024No Comments1 Min Read
    amoghavarsha

    ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ.

    ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.


    Provided by
    Provided by
    Provided by

    ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

    “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬುರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಅಮೋಘ ವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸಂಶೋಧನಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ತುಮಕೂರು: ಫಿಟ್ವೀಲ್  ಟೂಲ್ಸ್ ಸಂಸ್ಥೆಯಲ್ಲಿ ಕಾರ್ಮಿಕರಿಗಾಗಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ

    September 16, 2025

    ದ್ವೇಷಭಾಷಣ: ಶಾಸಕ ಯತ್ನಾಳ್ ವಿರುದ್ಧ ತುಮಕೂರಿನಲ್ಲಿ ದೂರು ದಾಖಲು

    September 16, 2025

    ಜೈನ್ ಪಿಯು ಕಾಲೇಜು: ವಿಶೇಷ ಶಿಕ್ಷಣ ಮೇಳ, ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.