nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026
    Facebook Twitter Instagram
    ಟ್ರೆಂಡಿಂಗ್
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    • ರಾಜ್ಯದಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಭಾಷಣ ನಿಯಂತ್ರಣಕ್ಕೆ ಎಐ (AI) ತಂತ್ರಾಂಶ ಅಳವಡಿಕೆಗೆ ಸಂಪುಟ ನಿರ್ಧಾರ
    • ಬೆಂಗಳೂರು–ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಅಗ್ನಿಗಾಹುತಿ
    • 18 ತಿಂಗಳಲ್ಲಿ ಬೆಂಗಳೂರು ಬಿಸಿನೆಸ್ ಕಾರಿಡಾರ್ ಮೊದಲ ಹಂತ ಪೂರ್ಣ: ಡಿ.ಕೆ.ಶಿವಕುಮಾರ್
    • ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ
    ತುಮಕೂರು December 20, 2024

    ಕನ್ನಡದ ಅರಸ ಅಮೋಘ ವರ್ಷನ ಅಪ್ರಕಟಿತ ಶಾಸನ ಪತ್ತೆ

    By adminDecember 20, 2024No Comments1 Min Read
    amoghavarsha

    ತುಮಕೂರು: ರಾಯಚೂರು ಜಿಲ್ಲೆಯ ಮಲಿಯಾಬಾದ್ ಪ್ರದೇಶದಲ್ಲಿ ಕನ್ನಡದ ಅರಸ ಅಮೋಘ ವರ್ಷನ ಪ್ರಮುಖ ಶಿಲಾ ಶಾಸನವೊಂದು ಪತ್ತೆಯಾಗಿದೆ.

    ತುಮಕೂರು ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗದ ಅಧ್ಯಕ್ಷ ಪ್ರೊ.ಎಂ.ಕೊಟ್ರೇಶ್‌ ಅವರು ಕ್ಷೇತ್ರ ಕಾರ್ಯ ಮಾಡುವ ಸಂದರ್ಭದಲ್ಲಿ ಈ ಶಾಸನವು ಪತ್ತೆಯಾಗಿದೆ.


    Provided by
    Provided by

    ಆ ಪ್ರದೇಶದ ಗೋಶಾಲೆಯಲ್ಲಿ ಕೆಲಸ ಮಾಡುವ ರಾಜಸ್ಥಾನದ ಮುರಳಿ ಅವರು ಮಲಿಯಾಬಾದ್‌ ಕೋಟೆಯ ಆವರಣದಲ್ಲಿ ಮುಳ್ಳು ಕಂಟಿಗಳನ್ನು ಸ್ವಚ್ಛಗೊಳಿಸುವಾಗ ಈ ಶಾಸನವು ಕಂಡು ಬಂದಿದೆ. ಸಂಶೋಧನೆಯಿಂದ ಶಾಸನದ ವಿವರಗಳು ಬೆಳಕಿಗೆ ಬಂದಿವೆ ಎಂದು ಪ್ರೊ.ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಈ ಶಾಸನವು ರಾಷ್ಟ್ರಕೂಟರ ಅರಸ ಅಮೋಘ ವರ್ಷನ ಆಡಳಿತದ ಅವಧಿಯ ಅಂದರೆ ಸು.ಸಾ.ಶ. 850ರ ಸಂದರ್ಭದ್ದಾಗಿದ್ದು, ಇಪ್ಪತ್ತು ಸಾಲುಗಳನ್ನು ಒಳಗೊಂಡಿದೆ.

    “ಈ ಶಾಸನದಲ್ಲಿ ಬಲ್ಲಾಳೇಶ್ವರಪುರದ ಉಲ್ಲೇಖ ಬರುತ್ತದೆ. ಈ ಬಲ್ಲಾಳೇಶ್ವರಪುರ ಯಾವುದು ಎಂಬುದನ್ನು ಪತ್ತೆ ಹಚ್ಚಬೇಕಾಗಿದೆ. ಪಲ್ಲವಾನ್ವಯ ಎಂಬ ವಿಷಯದ ಪ್ರಸ್ತಾಪವಿದ್ದು ತುಮಕೂರು ಜಿಲ್ಲೆಯ ಸಂಬಂಧವನ್ನು ತೋರಿಸುತ್ತದೆ. ತುಮಕೂರು ಜಿಲ್ಲೆಯ ಅಂಚಿನಲ್ಲಿರುವ ಹೆಂಜೆರು ಅಥವಾ ಹೇಮಾವತಿ ನೊಳಂಬರ ರಾಜಧಾನಿ ಈ ನೊಳಂಬರಿಗೆ ಪಲ್ಲವಾನ್ವಯ ಎಂದು ಕರೆದಿರುವುದು ಈ ಶಾಸನದಲ್ಲಿ ಕಂಡುಬುರುತ್ತದೆ” ಎಂದು ಪ್ರೊ. ಎಂ.ಕೊಟ್ರೇಶ್ ತಿಳಿಸಿದ್ದಾರೆ.

    ಅಮೋಘ ವರ್ಷನ ಆಡಳಿತದ ಅವಧಿಯಲ್ಲಿ ರಾಯಚೂರನ್ನು ಎಡದೊರೆ ನಾಡು, ಎರೆನಾಡು ಸಿರೇಯ ನಾಡೆಂದು ಕರೆಯಲಾಗಿದೆ. ಶಾಸನದಲ್ಲಿ ಮುಳುಗುಂದ ನಾಡಿನ ಉಲ್ಲೇಖವಿದ್ದು, ಯಾವುದೀ ಮುಳುಗುಂದ ಎನ್ನುವುದು ಕುತೂಹಲವಾಗಿ ಉಳಿದಿದೆ. ಶಾಸನದ ಕುರಿತು ಮತ್ತಷ್ಟು ಸಂಶೋಧನೆ ನಡೆಯಬೇಕಿದ್ದು, ಇನ್ನು ಅನೇಕ ಕುತೂಹಲ ಸಂಗತಿಗಳು ಬೆಳಕಿಗೆ ಬರಲಿವೆ ಎಂದು ಪ್ರೊ.ಎಂ.ಕೊಟ್ರೇಶ್‌ ಮಾಹಿತಿ ಹಂಚಿಕೊಂಡಿದ್ದಾರೆ.

    ಸಂಶೋಧನಕಾರ್ಯದಲ್ಲಿ ವಿದ್ಯಾರ್ಥಿ ಶಶಿಕುಮಾರ ನಾಯಕ್ ಹಾಗೂ ತುಮಕೂರು ವಿವಿ ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಡಾ.ಶ್ರೀಪಾದ ಕುಲಕರ್ಣಿ ಸಹಕರಿಸಿದ್ದಾರೆ ಎಂದು ತಿಳಿಸಲಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸರ್ಕಾರಿ ಬಸ್: ತಂಬಾಕು ಜಾಹೀರಾತು ತೆರವಿಗೆ ಅಂಬೇಡ್ಕರ್ ಸಮಿತಿ ಒತ್ತಾಯ

    February 5, 2026

    ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಿ: ಮಕ್ಕಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ

    February 5, 2026

    ತುಮಕೂರು: ಕವಿ ಡಾ.ಸಿದ್ದಲಿಂಗಯ್ಯ ಅವರ ಜನ್ಮ ದಿನಾಚರಣೆ

    February 5, 2026

    Comments are closed.

    Our Picks

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!

    February 6, 2026

    ಶಿರಾ: ಈಡಿಗ ಸಮುದಾಯದ ಕುಲಕಸುಬಾದ ಸೇಂದಿ ಮಾರಾಟವನ್ನು ಈ ಸಮುದಾಯದ ಜೀವನಕ್ಕೆ ಮಾರ್ಗೋಪಾಯಕ್ಕಾಗಿ ಪರ್ಯಾಯ ವ್ಯವಸ್ಥೆ ಮಾಡದೆ ನಿಷೇಧಿಸಿದ್ದು, ಪುನಃ…

    ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ

    February 6, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ

    February 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.