ತಿಪಟೂರು: ಅಸ್ಪೃಶ್ಯತಾ ಆಚರಣೆ, ಮರ್ಯಾದೆಗೇಡು ಹತ್ಯೆಗಳ ವಿರುದ್ಧ ವಿದ್ಯಾರ್ಥಿಗಳು ಅಣಿಯಾಗಬೇಕೆಂದು ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ರಾಜಶೇಖರ್ ಕೆ. ತಿಳಿಸಿದರು.
ಅವರು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಪಿಜೆ ಅಬ್ದುಲ್ ಕಲಾಂ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ತಿಪಟೂರು ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ (ರಿ.) ತಿಪಟೂರು, ಸರ್ಕಾರಿ ಪ್ರಥಮದರ್ಜೆ ಕಾಲೇಜು, ರಾಷ್ಟ್ರೀಯ ಸೇವಾ ಯೋಜನೆ ತಿಪಟೂರು ಸಹಯೋಗದಲ್ಲಿ ನಡೆದ ಡಾ. ಬಿ.ಆರ್. ಅಂಬೇಡ್ಕರ್ ರವರ 135 ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಮ್ಮ ಸುತ್ತ ಮುತ್ತ ಜಾತಿ ಪದ್ಧತಿ ವಿರುದ್ಧ ಜಾಗೃತಿ ಮೂಡಿಸಿ ವಿದ್ಯಾರ್ಥಿಗಳು ಸಮ ಸಮಾಜ ನಿರ್ಮಾಣಕ್ಕೆ ಅಣಿಯಾಗಬೇಕು ಎಂದರು.
ಇದೇ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ನಡೆಸಲಾಗಿದ್ದ ಪ್ರಬಂಧ ಸ್ಪರ್ಧಾ ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಬಿ.ಎ. ತೃತೀಯ ವರ್ಷದ ವಿದ್ಯಾರ್ಥಿನಿ ಅಶ್ವಿನಿ. ಡಿ.ಬಿ. ಪ್ರಥಮ ಸ್ಥಾನ, ಮೋನಿಕಾ ಎಲ್.ಎಸ್. ದ್ವಿತೀಯ ಸ್ಥಾನ ಮತ್ತು ದ್ವಿತೀಯ ವರ್ಷದ ಚಿನು. ಬಿ. ಸಿ. ತೃತೀಯ ಸ್ಥಾನ ಪಡೆದರು.
ಪ್ರಾಶುಪಾಲರಾದ ಡಾ. ಶಶಿಕುಮಾರ್ ಹೆಚ್.ಸಿ. ಮಾತನಾಡಿ, ಅಂಬೇಡ್ಕರ್ ಯಾವುದೇ ಒಂದು ಜಾತಿ, ಸಮುದಾಯಕ್ಕೆ ಮಾತ್ರ ದುಡಿದವರಲ್ಲ. ಅವರು ನಮ್ಮೆಲ್ಲರ ಹಕ್ಕುಗಳಿಗಾಗಿ ಹೋರಾಡಿದವರು. ವಿಪರ್ಯಾಸವೆಂದರೆ ಇಂದು ಅವರನ್ನೇ ಒಂದು ಜಾತಿಗೆ ಸೀಮಿತ ಮಾಡಿಬಿಟ್ಟಿದ್ದೇವೆ. ಮುಂದಿನ ದಿನಗಳಲ್ಲಾದರೂ ಅವರ ಮತ್ತು ಸಂವಿಧಾನದ ಆಶಯಗಳನ್ನು ಅರಿತು ಬಾಳಬೇಕಿದೆ ಎಂದರು.
ಡಾ. ಬಿ.ಆರ್. ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ, ತಿಪಟೂರು ನಿರ್ದೇಶಕ ಅನಿಲ್ ಕುಮಾರ್, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶಿವಕುಮಾರ್. ಸಿ. ಜಿ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಶ್ರೀನಿವಾಸ್. ಇ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅನುಪ್ರಸಾದ್ ಕೆ. ಆರ್, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಾಗಪ್ಪ ಚಲವಾದಿ ಸೇರಿದಂತೆ ವಿವಿಧ ವಿಭಾಗಗಳ ಪ್ರಾಧ್ಯಾಪಕ ವರ್ಗ, ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


