nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ

    February 22, 2026

    ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ

    February 22, 2026

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026
    Facebook Twitter Instagram
    ಟ್ರೆಂಡಿಂಗ್
    • ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ
    • ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ
    • ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ
    • ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ
    • ಫೆ.23ರಂದು ಸಂಪೂರ್ಣ ಒಳ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ
    • ದೇವರು ಬಂದಂತೆ ನಾಟಕವಾಡಿ ದಲಿತ ನವದಂಪತಿಗೆ ಅವಮಾನ:  ಒಬ್ಬನ ಸೆರೆ, ಹಲವರ ವಿರುದ್ಧ ಪ್ರಕರಣ ದಾಖಲು
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ: ಸಚಿವ ಹೆಚ್.ಕೆ ಪಾಟೀಲ್
    ರಾಜ್ಯ ಸುದ್ದಿ December 22, 2024

    ಗೋಲ್ಡನ್ ಚಾರಿಯೇಟ್ ರೈಲು ಪ್ರವಾಸದಲ್ಲಿ ಐತಿಹಾಸಿಕ ಸ್ಥಳಗಳ ಅನಾವರಣ: ಸಚಿವ ಹೆಚ್.ಕೆ ಪಾಟೀಲ್

    By adminDecember 22, 2024No Comments2 Mins Read
    mb patil (1)

    ಬೆಂಗಳೂರು: ಗೋಲ್ಡನ್ ಚಾರಿಯೇಟ್ (ಸುವರ್ಣ ರಥ) ರೈಲು ಪ್ರವಾಸ ದಕ್ಷಿಣ ಭಾರತದ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ಸ್ಥಳಗಳ ಅನಾವರಣಕ್ಕೆ ಮುಕುಟಪ್ರಾಯವೆನಿಸಿದೆ ಎಂದು ಪ್ರವಾಸೋದ್ಯಮ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು.

    ಅವರು ಯಶವಂತಪುರ ರೈಲು ನಿಲ್ದಾಣದ ಫ್ಲಾಟ್ ಫಾರಂ 6 ರಲ್ಲಿ ಗೋಲ್ಡನ್ ಚಾರಿಯೇಟ್ ಐಷಾರಾಮಿ ರೈಲು ಸೇವೆಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಗೋಲ್ಡನ್ ಚಾರಿಯೇಟ್ ರೈಲು ಸೇವೆಗಳು 2018 ರಿಂದ ತಾತ್ಕಾಲಿಕವಾಗಿ ಸ್ಥಗಿತಗೊಂಡಿದ್ದು ಅದನ್ನು ಮರುಚಾಲನೆಗೊಳಿಸಲಾಗಿದೆ. ಈ ರೈಲಿನ ಮಾಲೀಕತ್ವವನ್ನು 50% ಭಾರತೀಯ ರೈಲ್ವೇ, 25% ಪ್ರವಾಸೋದ್ಯಮ ಸಚಿವಾಲಯ ಭಾರತ ಸರ್ಕಾರ ಹಾಗೂ ಕೆಎಸ್ಟಿಡಿಸಿಯ 25% ರಷ್ಟು ಷೇರುಗಳ ಮೂಲಕ ರಾಜ್ಯ ಸರ್ಕಾರ ಹೊಂದಿದೆ. ರೈಲಿನ ಒಳಾಂಗಣವನ್ನು ಕಲಾತ್ಮಕವಾಗಿ ನಿರ್ಮಿಸಲಾಗಿದೆ.


    Provided by
    Provided by

    18 ಕೋಚ್ಗಳಲ್ಲಿ ಕರ್ನಾಟಕ ಆಳಿದ ರಾಜವಂಶಸ್ಥರುಗಳಾದ ಕದಂಬ, ಹೊಯ್ಸಳ, ವಿಜಯನಗರ ಚಾಲುಕ್ಯರ ಹೆಸರನ್ನು ಇಡಲಾಗಿದೆ. ಊಟ, ವಸತಿಗೆ ಐಷಾರಾಮಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಗೋಲ್ಡನ್ ಚಾರಿಯೇಟ್ ಪ್ರವಾಸೋದ್ಯಮ ವಿಶ್ವದ ಪ್ರಸಿದ್ಧ ಪರಂಪರೆಯ ತಾಣಗಳ ಜೊತೆಗೆ ಪಶ್ಚಿಮ ಘಟ್ಟಗಳು, ಪ್ರಾಚೀನ ಕಡಲತೀರಗಳು, ಸಾಂಸ್ಕøತಿಕ ತಾಣಗಳಿಗೆ ಪ್ರವಾಸಿಗರನ್ನು ಕರೆದೊಯ್ಯುತ್ತದೆ. ಇದರಿಂದ ರೈಲು ಹೋಟೆಲ್ಗಳು, ಕುಶಲಕರ್ಮಿಗಳು, ಪ್ರವಾಸ ನಿರ್ವಾಹಕರಿಗೆ ಆದಾಯ ಕಲ್ಪಿಸಿದಂತಾಗುತ್ತದೆ. ಈ ವಿಶೇಷ ರೈಲು ಪ್ರವಾಸ ಜಾಗತಿಕ ಮಟ್ಟದಲ್ಲಿ ವಿಶ್ವದ ಏಳು ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಗುರುತಿಸಲಾಗಿದ್ದು, ಹಲವಾರು ಪ್ರಶಸ್ತಿ ಪಡೆದುಕೊಂಡಿದೆ ಎಂದರು.

    ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್ಗಳು ಭಾರತೀಯ ಮತ್ತು ಅಂತರರಾಷ್ಟ್ರೀಯ ಪಾಕಪದ್ದತಿ ಸೇವೆ ನೀಡುತ್ತದೆ. ಲಾಂಜ್ ಬಾರ್, ಫಿಟ್ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ ಎಂದರು.

    ಎಲ್ಲೆಲ್ಲಿ ಪ್ರವಾಸ:

    ಜೂವೆಲ್ ಆಫ್ ಸೌತ್ ಪ್ರವಾಸ ಇದೇ ಡಿಸೆಂಬರ್ 21 ರಿಂದ 26 ರವರೆಗೆ ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚೀಪುರಂ, ಮಹಾಬಲಿಪುರಂ, ತಂಜಾವೂರು, ಕೊಚ್ಚಿನ್, ಮರಾರಿಕುಲಂಗೆ ತೆರಳಿ ನಂತರ ಬೆಂಗಳೂರಿಗೆ ಹಿಂದಿರುಗುತ್ತದೆ. ಇದು ಐದು ದಿನಗಳ ಪ್ರವಾಸವಾಗಿದ್ದು, ಇದಕ್ಕೆ ತಗಲುವ ವೆಚ್ಚ ಒಬ್ಬರಿಗೆ ರೂ 4,07,700/-, ಪ್ರೈಡ್ ಆಫ್ ಕರ್ನಾಟಕ ಪ್ರವಾಸ ದಿನಾಂಕ: 01-02-2025 ರಿಂದ 06-02-2025 ರವರೆಗೆ ಬೆಂಗಳೂರಿನಿಂದ – ನಂಜನಗೂಡು- ಮೈಸೂರು- ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ-ಗೋವಾ- ಬೆಂಗಳೂರನ್ನು ಒಳಗೊಂಡಿದ್ದು ಇದಕ್ಕೆ ತಗಲುವ ವೆಚ್ಚ 2,71,800 ರೂಪಾಯಿಗಳು. ಸೋಜರ್ನ್ ಆಪ್ ಸೌತ್ ಚಾರ್ಟರ್ಡ್ ಪ್ರವಾಸವನ್ನು 29-12-2024 ರಿಂದ 12-02-2025 ರವರೆಗೆ ಆಯೋಜಿಸಲಾಗಿದೆ.

    ಭಾರತ ಅದರಲ್ಲೂ ದಕ್ಷಿಣ ಭಾರತದ ಪ್ರವಾಸೋದ್ಯಮವನ್ನು ಜಾಗತಿಕವಾಗಿ ಗುರುತಿಸಲು ಈ ಪ್ರವಾಸವು ಹೆಚ್ಚು ಸಹಕಾರಿಯಾಗಿದೆ. 2029 ರ ವೇಳೆಗೆ ಪ್ರವಾಸಿಗರ ಸಂಖ್ಯೆಯನ್ನು ಹೆಚ್ಚಿಸಲು ಕರ್ನಾಟಕ ಭಾರತೀಯ ರಾಜ್ಯಗಳ ಪಟ್ಟಿಯಲ್ಲಿ 3ನೇ ಅಗ್ರಸ್ಥಾನ ಪಡೆಯುವ ಗುರಿ ಸಹ ಹೊಂದಿದೆ. ಅಲ್ಲದೆ ಪ್ರವಾಸಿ ತಾಣದ ಮಹತ್ವವನ್ನು ಜನರಿಗೆ ತಿಳಿಸಲು ಈ ಪ್ರವಾಸ ಹೇಳಿ ಮಾಡಿಸಿದಂತಿದೆ.

    ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್, ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಸಲ್ಮಾ ಕೆ. ಫಾಹಿಮ್, ಕೆಎಸ್ಟಿಡಿಸಿ ಅಧ್ಯಕ್ಷ ಎಂ.ಶ್ರೀನಿವಾಸ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ

    February 22, 2026

    ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 21, 2026

    ಕೆಎಎಸ್ ಅಧಿಕಾರಿ ವಿರುದ್ಧ ನಕಲಿ ದಾಖಲೆ ಸೃಷ್ಟಿ ಆರೋಪ: ಸ್ನೇಹಮಯಿ ಕೃಷ್ಣ ಬಂಧನ

    February 21, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಹಂಪಸಾಗರದಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 287ನೇ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ

    February 22, 2026

    ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹಂಪಸಾಗರ ಗ್ರಾಮದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜರ…

    ಸ್ನೇಹಮಯಿ ಕೃಷ್ಣ ಯೂಟರ್ನ್‌: ಶಾಲಿನ್ ರಜನೀಶ್‌ ಗೆ ಕ್ಷಮೆಯಾಚನೆ

    February 22, 2026

    ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕು, ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಿ: ನಿಖಿಲ್ ಕುಮಾರಸ್ವಾಮಿ ಕರೆ

    February 22, 2026

    ಪ್ರತ್ಯೇಕ ಪ್ರಕರಣ: ರಸ್ತೆ ಅಪಘಾತಕ್ಕೆ ಮಹಿಳೆ ಬಲಿ, ಹಲವರಿಗೆ ಗಾಯ

    February 22, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.