nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025
    Facebook Twitter Instagram
    ಟ್ರೆಂಡಿಂಗ್
    • ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ
    • ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ
    • ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್
    • ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ
    • ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ : ಸಚಿವರಿಂದ ನೀಲನಕ್ಷೆ ಪರಿಶೀಲನೆ
    • ಎಸ್.ಎಸ್.ಎಲ್.ಸಿ. ಪರೀಕ್ಷೆ–2: ವೇಳಾ ಪಟ್ಟಿ ಪ್ರಕಟ
    • ಪರಿಶಿಷ್ಟ ಜಾತಿಯ ಉಪ ಜಾತಿ ಸಮೀಕ್ಷೆಗೆ ಹಾಜರಾಗದ ಗಣತಿದಾರರಿಗೆ ಶೋಕಾಸ್ ನೋಟಿಸ್: ಜಿಲ್ಲಾಧಿಕಾರಿ ಖಡಕ್ ಸೂಚನೆ
    • ಭಾರತ–ಪಾಕಿಸ್ತಾನ ಯುದ್ಧ ಸಂದರ್ಭ : ನಾಗರಿಕರ ರಕ್ಷಣೆಗಾಗಿ 3,000 ಸ್ವಯಂ ಸೇವಕರ ನೇಮಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಂಡೇಟಿನಿಂದ ಸಾಯದಿದ್ದರೂ ಊಟ ಇಲ್ಲದೆ ಸಾಯೋದಂತೂ ಗ್ಯಾರಂಟಿ
    Uncategorized March 3, 2022

    ಗುಂಡೇಟಿನಿಂದ ಸಾಯದಿದ್ದರೂ ಊಟ ಇಲ್ಲದೆ ಸಾಯೋದಂತೂ ಗ್ಯಾರಂಟಿ

    By adminMarch 3, 2022No Comments2 Mins Read
    ukraine

    ಇಲ್ಲ ಸಾರ್ ನಾವು ಜೀವಂತವಾಗಿ ಹಿಂತಿರುಗುತ್ತೇವೆ ಎಂಬ ಆಸೆಯನ್ನೇ ಬಿಟ್ಟಿದ್ದೇವೆ. ಯಾವ ಸಂದರ್ಭದಲ್ಲಾದರೂ ನಮ್ಮ ಮೇಲೆ ಶೆಲ್ ದಾಳಿ ನಡೆಯಬಹುದು. ಒಂದು ವೇಳೆ ನಾವು ಗುಂಡೇಟಿನಿಂದ ಸಾಯದಿದ್ದರೂ ಹೊಟ್ಟೆಗೆ ಊಟ ಇಲ್ಲದೆ ಸಾಯೋದಂತೂ ಗ್ಯಾರಂಟಿ.

    ಇದು ನಿನ್ನೆಯಷ್ಟೆ ಉಕ್ರೇನ್‍ನಲ್ಲಿ ಶೆಲ್ ದಾಳಿಗೆ ಬಲಿಯಾದ ಹಾವೇರಿಯ ನವೀನ್ ಸ್ನೇಹಿತ ಶ್ರೀಕಾಂತ್ ಅವರ ಆಕ್ರಂದನ. ಬೆಂಗಳೂರಿನ ಬಿಎಂಟಿಸಿಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿರುವ ಹರೀಶ್ ಅವರ ಸಹೋದರರಾಗಿರುವ ಶ್ರೀಕಾಂತ್ ದೂರದ ಉಕ್ರೇನ್‍ನಲ್ಲಿ ಎಂಬಿಬಿಎಸ್ ಮಾಡುತ್ತಿದ್ದಾರೆ. ಉಕ್ರೇನಿನ ಬಂಕರ್‍ನಲ್ಲಿ ಜೀವ ಕೈಯಲ್ಲಿಡಿದುಕೊಂಡು ತಮ್ಮ ಮನೆಯವರೊಂದಿಗೆ ಮಾತನಾಡಿದ ಶ್ರಿಕಾಂತ್ ಅವರು, ಅದೃಷ್ಟವಿದ್ದರೆ ಬದುಕಿ ಬರುತ್ತೇವೆ. ನನ್ನಂತೆ ಇಲ್ಲಿ ಸಿಕ್ಕಿಹಾಕಿಕೊಂಡಿರುವ ಸಾವಿರರು ಕನ್ನಡಿಗರು ಹಾಗೂ ಭಾರತೀಯರಿಗಾಗಿ ನೀವು ಅಲ್ಲಿಂದಲ್ಲೇ ಪ್ರಾರ್ಥಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.


    Provided by

    ನನ್ನ ಸ್ನೇಹಿತ ನವೀನ್ ಬಲಿಯಾದ ನಂತರ ನಮಗೆ ಕ್ಷಣ ಕ್ಷಣಕ್ಕೂ ಸಾವಿಗೆ ಹತ್ತಿರವಾಗುತ್ತಿದ್ದೇವೆ ಎನಿಸುತ್ತಿದೆ. ನಮ್ಮನ್ನ ರಕ್ಷಿಸೋಕೆ ಯಾರು ಬರುತ್ತಿಲ್ಲ. ಹೊರಜಗತ್ತಿನ ಸಂಪರ್ಕವೇ ಕಡಿದುಹೋಗುತ್ತಿದೆ. ಬರೀ ಶೆಲ್ ಹಾಗೂ ಬಾಂಬ್ ದಾಳಿಯ ಶಬ್ದ ಮಾತ್ರ ಕೇಳಿಸುತ್ತಿದೆ. ನಾವು ರಕ್ಷಣೆ ಪಡೆದಿರುವ ಬಂಕರ್‍ನಲ್ಲಿ ಆಹಾರ ದಾಸ್ತಾನು ಕರಗುತ್ತಿದೆ. ನಿನ್ನೆ ನಮಗಾಗಿ ಆಹಾರ ತರಲು ಹೋದ ನವೀನ್ ಶೆಲ್ ದಾಳಿಗೆ ಬಲಿಯಾದ ನಂತರ ನಾವು ನಿಂತಿರುವ ಜಗವೇ ಕುಸಿದುಬೀಳುತ್ತಿದೆ ಎಂಬ ಭಾವನೆ ನಮ್ಮಲಿದೆ.ಇನ್ನು ಇಲ್ಲಿ ಯುದ್ಧ ಮುಗಿಯುವ ಹಾಗೆ ಕಾಣುತ್ತಿಲ್ಲ. ಕ್ಷಣ ಕ್ಷಣಕ್ಕೂ ಉಕ್ರೇನ್ ಪರಿಸ್ಥಿತಿ ಬಿಗಾಡಾಯಿಸುತ್ತಿದೆ. ರಷ್ಯನ್ನರ ಯುದ್ಧ ದಾಹ, ಉಕ್ರೇನಿನ ಬಿಗಿಧೋರಣೆಗಾಗಿ ನಮ್ಮ ಜೀವವನ್ನು ಪಣಕ್ಕಿಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನುತ್ತಾರೆ ಶ್ರೀಕಾಂತ್.

    ಲೆಕ್ಕಕ್ಕೆ ಮಾತ್ರ ನವೀನ್ ಸಾವು ತೋರಿಸಲಾಗುತ್ತಿದೆ. ನನಗೆ ತಿಳಿದ ಮಟ್ಟಿಗೆ ಇನ್ನಿತರ ಹಲವಾರು ಅಮಾಯಕ ಭಾರತೀಯ ವಿದ್ಯಾರ್ಥಿಗಳು ಸಾವಿಗೀಡಾಗಿರುವ ಶಂಕೆ ನಮ್ಮಲಿದೆ. ಕೆಲವು ಸಾವು-ನೋವುಗಳನ್ನು ಮುಚ್ಚಿಡಲಾಗುತ್ತಿದೆ ಎಂಬ ಗುಮಾನಿ ಇದೆ ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.ಇಂದು ಆಥವಾ ನಾಳೆ ಬಂಕರ್‍ನಲ್ಲಿರುವ ಆಹಾರ ದಾಸ್ತಾನು ಮುಗಿಯುವ ಸಾಧ್ಯತೆಗಳಿವೆ. ಅಷ್ಟರೊಳಗೆ ನಮನ್ನು ಕಾಪಾಡದಿದ್ದರೆ ನಮ್ಮ ಜೀವವನ್ನು ಆ ದೇವರೇ ಉಳಿಸಿಬೇಕು ಎಂದು ಗದ್ಗದಿತರಾಗುತ್ತಾರೆ ಶ್ರೀಕಾಂತ್.

    ಬಂಕರ್‍ನಿಂದ ಬಚಾವಾಗಿ ನಾವು ರೈಲಿಗೆ ತೆರಳಬೇಕು. ಆದರೆ, ಹೊರ ಹೊದರೆ ಯಾವ ಕ್ಷಣದಲ್ಲಿ ನಮ್ಮ ಮೇಲೆ ಬಾಂಬ್ ಬೀಳುವುದೋ ಎಂಬ ಭಯ ನಮ್ಮನ್ನು ಕಾಡುತ್ತಿದೆ. ಬಂಕರ್‍ನಲ್ಲಿರುವವರ ರಕ್ಷಣೆ ಮಾಡಿದರೂ ಮೊದಲ ಪ್ರಾಶಸ್ತ್ಯ ಉಕ್ರೇನ್ ನಾಗರೀಕರಿಗೆ ನೀಡಲಾಗುತ್ತಿದೆ. ನಂತರ ಉಳಿದವರ ರಕ್ಷಣೆ. ಹೀಗಾಗಿ ದೂರದ ದೇಶಗಳಿಂದ ಬಂದು ಇಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದೇಶಿಗರು ಪ್ರಾಣಭಯದಿಂದ ತತ್ತರಿಸಿಹೋಗಿದ್ದಾರೆ.

    ನನ್ನಂತೆ ಸಾವಿರಾರು ಭಾರತೀಯರು ಬಂಕರ್‍ಗಳಲ್ಲಿ ರಕ್ಷಣೆ ಪಡೆದಿದ್ದಾರೆ. ಅವರಲ್ಲಿ ಎಷ್ಟು ಮಂದಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೋ ಆ ದೇವರೆ ಬಲ್ಲ. ಎಲ್ಲಿ ನೋಡಿದರೂ ರಾಶಿ ರಾಶಿ ಹೆಣಗಳೇ. ಎಲ್ಲರ ಆರೈಕೆಯಿಂದ ಬದುಕಿ ಬಂದರೆ ಮತ್ತೆ ಸಿಗೋಣ ಇಲ್ಲದಿದ್ದರೆ, ಇದೇ ನನ್ನ ಕೊನೆಯ ಮಾತಾಗಲಿದೆ ಎಂದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬಸ್ ಫ್ರೀ ಅಂತ ಟಿಕೆಟ್ ಇಲ್ಲದೇ ಪ್ರಯಾಣಿಸುವಂತಿಲ್ಲ: ಕೆಎಸ್ ಆರ್ ಟಿಸಿ ವಿಧಿಸಿದ ದಂಡದ ಮೊತ್ತ ಎಷ್ಟು ಗೊತ್ತಾ?

    May 10, 2025

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಚೈತ್ರಾ ಕುಂದಾಪುರ: ಅಣ್ಣ ಸ್ಥಾನದಲ್ಲಿ ನಿಂತ ರಜತ್‌ ಬುಜ್ಜಿ

    May 9, 2025

    ಆರ್ಯ ವೈಶ್ಯ ಸಂಘದಿಂದ ಶಾಸಕ ಹೆಚ್.ವಿ.ವೆಂಕಟೇಶ್, ಮಾಜಿ ಸಚಿವ ವೆಂಕಟರಮಣಪ್ಪನವರಿಗೆ ಸನ್ಮಾನ

    April 1, 2025
    Our Picks

    ವಾಯುನೆಲೆ ಮೇಲೆ ಭಾರತ ಕ್ಷಿಪಣಿ, ಡ್ರೋನ್ ದಾಳಿ ನಡೆಸಿದೆ: ಪಾಕಿಸ್ತಾನದ ಮಿಲಿಟರಿ ವಕ್ತಾರ

    May 10, 2025

    ಶ್ರೀನಗರ, ಪಠಾಣ್ ಕೋಟ್ ನಲ್ಲಿ ಹಲವು ಕಡೆ ಸ್ಫೋಟ: ಅಮೃತಸರದಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಭಾರತ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ: ಒಂದೇ ಕುಟುಂಬದ ಮೂವರಿಗೆ ಗಾಯ: ಒಬ್ಬರ ಸ್ಥಿತಿ ಗಂಭೀರ

    May 10, 2025

    ಪಾಕಿಸ್ತಾನದ ಡ್ರೋನ್ ದಾಳಿ ವಿಫಲ, ಭಾರೀ ಶೆಲ್ ದಾಳಿ: ಮಹಿಳೆ ಸಾವು

    May 9, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ

    May 13, 2025

    ತುಮಕೂರು: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಡೆಂಗ್ಯೂ, ಚಿಕುಂಗುನ್ಯಾ, ಮೆದುಳುಜ್ವರ, ಆನೆ ಕಾಲು ರೋಗ, ಮಲೇರಿಯಾ ನಿಯಂತ್ರಣದ ಬಗ್ಗೆ ಸಾರ್ವಜನಿಕರಲ್ಲಿ…

    ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಕೋರ್ಸ್ ಗೆ ಅರ್ಜಿ ಆಹ್ವಾನ

    May 13, 2025

    ಬೌದ್ಧ ಧರ್ಮದಲ್ಲಿ ವಿಜ್ಞಾನ, ವೈಚಾರಿಕತೆಗೆ ಒತ್ತು: ಡಾ.ರವಿಕುಮಾರ್

    May 13, 2025

    ನೀನು ದಲಿತ ದೇವಸ್ಥಾನದೊಳಗೆ ಬರಬಾರದು: ಸಚಿವ ಕೆ.ಎನ್.ರಾಜಣ್ಣ ತವರಿನಲ್ಲಿ ಅಸ್ಪೃಶ್ಯತೆ ಜೀವಂತ

    May 12, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.