nammatumakuru

    Subscribe to Updates

    Get the latest creative news from FooBar about art, design and business.

    What's Hot

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026
    Facebook Twitter Instagram
    ಟ್ರೆಂಡಿಂಗ್
    • ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ
    • ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!
    • ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ
    • ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ
    • ‘ಸೇ ನೋ ಡ್ರಗ್ಸ್ — ಯಸ್ ಟೂ ಸ್ಪೋರ್ಟ್ಸ್: ಫೆ.1 ರಂದು 2ನೇ ತುಮಕೂರು ಮ್ಯಾರಥಾನ್
    • ಶಿಕ್ಷಣದ ಜೊತೆಗೆ ಕಲೆಗೆ ಮಹತ್ವ ನೀಡಿದಾಗಲೇ ಸಂಪೂರ್ಣ ವ್ಯಕ್ತಿತ್ವ ನಿರ್ಮಾಣ
    • ಸರಗೂರು:  ಗುರುವಂದನಾ ಕಾರ್ಯಕ್ರಮ ಶ್ಲಾಘನೀಯ: ಮಹದೇವಸ್ವಾಮೀಜಿ
    • ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಗಳ 7ನೇ ವರ್ಷದ ಪುಣ್ಯಸ್ಮರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತರ ಕರ್ನಾಟಕದ ಚರ್ಚೆಗೆ ಎರಡು ದಿನ ಮೀಸಲಿಡಲು ಒತ್ತಾಯ
    ರಾಜ್ಯ ಸುದ್ದಿ December 27, 2022

    ಉತ್ತರ ಕರ್ನಾಟಕದ ಚರ್ಚೆಗೆ ಎರಡು ದಿನ ಮೀಸಲಿಡಲು ಒತ್ತಾಯ

    By adminDecember 27, 2022No Comments3 Mins Read
    utarakarnataka

    ಕರ್ನಾಟಕ ವಿಧಾನಮಂಡಲಗಳ 148ನೇ ಅಧಿವೇಶನವನ್ನು ಉತ್ತರ ಕರ್ನಾಟಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಕಾರಣಕ್ಕೆ ಸಹ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲಾಗುತ್ತದೆ.ಅಂತೆಯೇ ಉತ್ತರ ಕರ್ನಾಟಕ ಭಾಗದ ಹತ್ತಾರು ಸಮಸ್ಯೆ ಸವಾಲುಗಳ ಬಗ್ಗೆ ವಿಶೇಷ ಚರ್ಚೆಗೆ ಅವಕಾಶ ಮಾಡಿಕೊಡಲು ಎರಡು ದಿನ ಮೀಸಲಿಡಬೇಕು ಎಂದು ಇದೆ ವೇಳೆ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಬಿ.ಕೆ.ಹರಿಪ್ರಸಾದ್ ಅವರು ಸಭಾಪತಿಗಳಿಗೆ ಕೋರಿದರು.

    ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅವಕಾಶ ಮಾಡಿಕೊಡುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಪರಿಷತ್ ಸಭಾ ನಾಯಕ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.ಗಡಿ ಪ್ರದೇಶದಲ್ಲಿನ ಸಾರ್ವಜನಿಕ ಹಿತರಕ್ಷಣೆ ಉದ್ದೇಶದಿಂದಾಗಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ತಿದ್ದುಪಡಿ ವಿಧೇಯಕ-2022ಕ್ಕೆ ವಿಧಾನ ಪರಿಷತ್ತ್ತಿನಲ್ಲಿ ಇಂದು ಅನುಮೋದನೆ ದೊರೆಯಿತು.


    Provided by
    Provided by

    ರಾಜ್ಯ ಸರ್ಕಾರವು ನೆಲ ಜಲ ಸಂರಕ್ಷಣೆ ವಿಷಯದಲ್ಲಿ, ಕನ್ನಡಿಗರು ಮತ್ತು ಕನ್ನಡಿಗರ ಬದುಕಿನ ರಕ್ಷಣಗೆ ಸರ್ಕಾರ ಬದ್ಧವಾಗಿದೆ. ಅವಶ್ಯಕತೆ ಇದೆ ಎಂಬುದು ಕಂಡುಬಂದಲ್ಲಿ ತಾಲೂಕಿನ ಹೆಸರನ್ನು ಸೇರಿಸುವ ರಚನೆಗೆ ಅವಕಾಶವಿದೆ. ಅಂಗೀಕಾರ ರೂಪದಲ್ಲಿರುವ ಕಾಯಿದೆಯನ್ನುಪರ್ಯಾಲೋಚಿಸಬೇಕು ಎಂದು ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ ಬಳಿಕ ಸಭಾಪತಿಗಳು ಪ್ರಸ್ತಾವನೆಯನ್ನು ಮಂಡಿಸಿ ಚರ್ಚೆಗೆ ಅವಕಾಶ ಕಲ್ಪಿಸಿದರು. ವಿಧೇಯಕವನ್ನು ಅಂಗೀಕರಿಸಲು ಸಭಾ ನಾಯಕರು ಕೋರಿದರು. ಬಳಿಕ ಸದನವು ಸರ್ವಾನುಮತದಿಂದ ವಿಧೇಯಕಕ್ಕೆ ಅನುಮೋದನೆ ನೀಡಿತು.

    ಪರಿಷತ್ತಿನ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ತಿದ್ದುಪಡಿ ವಿಧೇಯಕದ ಚರ್ಚೆಯ ಮೇಲೆ ಮಾತನಾಡಿ ಗಡಿಭಾಗದ ಪ್ರದೇಶದಲ್ಲಿ ಹೊಸದಾಗಿ ತಾಲೂಕುಗಳನ್ನು ರಚನೆ ಮಾಡುವಾಗ ಕೆಲವು ಹಳ್ಳಿಗಳ ಜನರು ತ್ರಿಶಂಕು ಸ್ಥಿತಿಗೆ ಸಿಲುಕುತ್ತಾರೆ. ಕಾಸರಗೋಡು, ಸೊಲ್ಲಾಪುರ ಸೇರಿದಂತೆ ಗಡಿಭಾಗದಲ್ಲಿ ಕನ್ನಡ ಮಾತನಾಡುವ ಜನರಿಗೆ ಸಹಾಯವಾಗುವ ಕೆಲಸ ಈ ವಿಧೇಯಕದಿಂದಾಗಬೇಕು. ಇನ್ನಷ್ಟು ಅಧ್ಯಯನ ಮಾಡಿ ಕಾಯಿದೆಗೆ ಶಕ್ತಿ ತುಂಬಬೇಕು ಎಂದು ಸರ್ಕಾರದ ನಿರ್ಣಯವನ್ನು ಸ್ವಾಗತಿಸಿದರು.

    ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅತಿ ಕಡಿಮೆ ಹಣ ಮೀಸಲಿಡುತ್ತಿರುವ ಕಾರಣಕ್ಕೆ ಹೊಸ ಬಿಲ್ಲಿನ ಉದ್ದೇಶ ಈಡೇರಿಸುವಲ್ಲಿ ವಿಫಲರಾಗಿದ್ದೇವೆ. ಕಾಸರಗೋಡು ಭಾಗದಲ್ಲಿ 100 ಕನ್ನಡ ಶಾಲೆಗಳು ಮುಚ್ಚಿವೆ. ಸೊಲ್ಲಾಪುರ ಸುತ್ತಲಿನ ಪ್ರದೇಶದಲ್ಲಿ ಮಕ್ಕಳು ಹೊರಗಡೆ ಕುಳಿತು ಕಲಿಯುವ ದುಸ್ಥಿತಿಯಿದೆ. ಪ್ರಾಧಿಕಾರಕ್ಕೆ 100 ಕೋಟಿ ಅನುದಾನ ಮೀಸಲಿಟ್ಟು ಗಡಿ ಪ್ರದೇಶದಲ್ಲಿ ಶಿಕ್ಷಣ, ಪಠ್ಯ, ಗ್ರಂಥಾಲಯ ಮತ್ತು ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಉತ್ತೇಜನ ನೀಡಬೇಕು ಎಂದು ವಿರೋಧ ಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಥೋಡ್ ಸಲಹೆ ಮಾಡಿದರು.

    ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮಾತನಾಡಿ, ಈ ವಿಧೇಯಕ್ಕೆ ಬರೀ ತಿದ್ದುಪಡಿ ಮಾತ್ರ ಸಾಲದು, ಹೊರದೇಶದಲ್ಲಿರುವ ಸಂಘ ಸಂಸ್ಥೆಗಳಿಗೆ ಕೊಡುವಷ್ಟೇ, ಅನುದಾನವನ್ನು ಗಡಿಯಲ್ಲಿರುವ ಕನ್ನಡಿಗರ ಹಿತ ಕಾಪಾಡುವ ನೆರೆ ರಾಜ್ಯದ ಸಂಘ ಸಂಸ್ಥೆಗಳಿಗೆ ನೀಡುಬೇಕು. ಮಸೂದೆಯಿಂದ ಗಡಿಭಾಗದ ಹಳ್ಳಿಗಳ ಅಭಿವೃದ್ಧಿಗೆ ಗಮನ ಕೊಡುವ ಕಾರ್ಯವಾಗಬೇಕು. ಕನ್ನಡದ ಬಗ್ಗೆ ಕಾಳಜಿ ಇರುವ ಸರ್ಕಾರ ಜವಾಬ್ದಾರಿ ವಹಿಸಿ ಕನ್ನಡ ಕಾವಲು ಪಡೆಯನ್ನು ಪುನರ್ರಚಿಸಬೇಕು ಎಂದು ಸಲಹೆ ಮಾಡಿದರು.

    ಬರೀ ಭಾಷಾಭಿವೃದ್ಧಿಯಾದರೆ ಸಾಲದು, 100 ಕೋಟಿ ಅನುದಾನ ಜೊತೆಗೆ ಎಲ್ಲಾ ಇಲಾಖೆಗಳಲ್ಲಿ ತಲಾ ಶೇ.5ರಷ್ಟು ಹಣ ಮೀಸಲಿಟ್ಟು ಗಡಿಭಾಗದ ಪ್ರದೇಶದಲ್ಲಿ ಶಾಲೆ, ಆಸ್ಪತ್ರೆ, ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಕ್ಕೆ ಒತ್ತು ಕೊಡಬೇಕು. 371 ಜೆ ಮಾದರಿಯಲ್ಲಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಗಡಿಭಾಗದ ಕನ್ನಡಿಗರಿಗೆ ಕೂಡಲೇ ಮೀಸಲು ನಿಗದಿ ಮಾಡಬೇಕು ಎಂದು ಸದಸ್ಯ ನಾಗರಾಜ ಅವರು ಸಲಹೆ ಮಾಡಿದರು.

    ಸದಸ್ಯ ಮರಿತಿಬ್ಬೇಗೌಡ ಅವರು ಮಾತನಾಡಿ, ಈ ಕಾಯಿದೆಯನ್ನು ಇನ್ನೊಮ್ಮೆ ಪರಿಶೀಲಿಸಿ, ಸರಳೀಕರಿಸಿ, ಗಡಿಭಾಗದ ವ್ಯಾಪ್ತಿಯಲ್ಲಿನ ಹಳ್ಳಿಗಳಲ್ಲಿ ವಾಸ ಮಾಡುವ ಜನರಿಗೆ ಹಣಕಾಸಿನ ನೆರವು ಸಿಗಬೇಕು. ಅಲ್ಲಿನ ಮಕ್ಕಳು ಶೈಕ್ಷಣ ಕವಾಗಿ ಮತ್ತು ಔದ್ಯೋಗಿಕವಾಗಿ ಬೆಳೆಯುವಂತಾಗಬೇಕು ಎಂದರು.

    ಗಡಿಭಾಗದ ಜನರಿಗೆ ನಾವು ಕನ್ನಡಿಗರು ಎನ್ನುವ ಭಾವನೆ ಇದೆ. ಇದು ಹೆಮ್ಮೆಯ ವಿಷಯ. ಅವರಿಗೆ ನಾವು ಕರ್ನಾಟಕ ರಾಜ್ಯಕ್ಕೆ ಸೇರಿದವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವಂತಾಗಲು, ಗಡಿಭಾಗದಲ್ಲಿ ನಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರಿಗೆ ಮೂಲಭೂತ ಸೌಕರ್ಯ ಒದಗಿಸಬೇಕು. ಅಂದಾಗ ಮಾತ್ರ ಅವರಲ್ಲಿ ಸುರಕ್ಷತಾ ಭಾವನೆ ಬರಲು ಸಾಧ್ಯವಾಗುತ್ತದೆ ಎಂದು ಸದಸ್ಯೆ ತೇಜಸ್ವಿನಿಗೌಡ ತಿಳಿಸಿದರು.

    ಗಡಿಭಾಗದಲ್ಲಿ ಶಾಲೆಗಳ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಬೇಕು. ಅಲ್ಲಿನ ಅಕ್ರಮ ಚಟುವಟಿಕೆಗಳ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ವಿಶೇಷ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಬೇಕು ಎಂದು ಸದಸ್ಯರಾದ ಕೆ.ಎಸ್.ನವೀನ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿಗ್ ಬಾಸ್ ಕನ್ನಡ 12ರ ಕಿರೀಟ ಮುಡಿಗೇರಿಸಿಕೊಂಡ ಗಿಲ್ಲಿ ನಟ; ರಕ್ಷಿತಾ ಶೆಟ್ಟಿ ರನ್ನರ್ ಅಪ್!

    January 19, 2026

    ಅಸ್ಸಾಂನಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಗ್ಯಾರಂಟಿ: ಡಿ.ಕೆ. ಶಿವಕುಮಾರ್ ವಿಶ್ವಾಸ

    January 17, 2026

    ಮುಂದಿನ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಕಟ್ಟುನಿಟ್ಟು: ಸಿಎಂ ಸಿದ್ದರಾಮಯ್ಯ ಸುಳಿವು

    January 17, 2026

    Comments are closed.

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಇತಿಹಾಸಕ್ಕೆ ಸಾಕ್ಷಿಯಾದ ಕ್ಯಾಮೇನಹಳ್ಳಿ ರಾಸುಗಳ ಜಾತ್ರೆ |  ಕಮನೀಯ ಕ್ಷೇತ್ರದಲ್ಲಿ ಕಾಮಧೇನುಗಳ ಜಾತ್ರೆ ಹಬ್ಬ

    January 19, 2026

    ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ರಥೋತ್ಸವಕ್ಕೂ ಮೊದಲು ಮಕರ ಸಂಕ್ರಾತಿ…

    ಕುಡಿದು ಸುತ್ತಾಡುತ್ತಿದ್ದ ಕಾರ್ಮಿಕ ಏಕಾಏಕಿ ಸಾವು!

    January 19, 2026

    ವಿದ್ಯಾರ್ಥಿನಿಯರ ಸ್ಕಾಲರ್ ಶಿಪ್‌ ಗೆ ಅರ್ಜಿ ಆಹ್ವಾನ

    January 19, 2026

    ಗಣರಾಜ್ಯೋತ್ಸವ ದಿನದಂದು ತಮಟೆ ಚಳುವಳಿಗೆ ಮನವಿ

    January 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.