ಮಧುಗಿರಿ : ಶ್ರೀ ಬಸವೇಶ್ವರ ವಿದ್ಯಾಸಂಸ್ಥೆ, ಪ್ರಾರ್ಥನಾ ಪಬ್ಲಿಕ್ ಸ್ಕೂಲ್, ದಂಡಿನ ದಿಬ್ಬ ಶಾಲೆಯಲ್ಲಿ 2022-23 ನೇ ಸಾಲಿನ ಕಲಿನಲಿ ಸಮಾರಂಭ ಶನಿವಾರ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಜಯ್ ಪ್ರಕಾಶ್, ಕರ್ನಾಟಕದಲ್ಲಿ ಬದುಕಲು ಕನ್ನಡ ಭಾಷೆ ಚೆಂದ, ಆದರೆ ನಮ್ಮ ಕರ್ನಾಟಕದಲ್ಲೂ ಉತ್ತಮವಾದ ಹುದ್ದೆಗಳಿಗೆ ಆಯ್ಕೆಯಾಗಲು ತುಂಬ ಆಂಗ್ಲ ಭಾಷೆಯು ಮುಖ್ಯವಾಗಿದೆ ಎಂದು ತಿಳಿಸಿದರು
ಅಧ್ಯಕ್ಷತೆಯ ಡಿ.ವಿ.ದ್ವಾರಕೀಶ್ ರವರು ವಹಿಸಿದರು, ಮುಖ್ಯ ಅತಿಥಿಗಳಾಗಿ ಚನ್ನಬಸಪ್ಪ, ದೊಡ್ಡೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗಮಣಿ ರಂಗಸ್ವಾಮಿ, ಉಪಾಧ್ಯಕ್ಷರಾದ ಹರೀಶ್, ಸದಸ್ಯರು ಶೈಲಕುಮಾರ ವರದರಾಜು, ಕಲಾವತಿ ವೆಂಕಟಪ್ಪ, ಗೋಪಾಲಕೃಷ್ಣ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ದೊಡ್ಡೇರಿ ಕ್ಲಸ್ಟರ್ ಬಸವೇಶ್ವರ, ಆಡಳಿತ ಮಂಡಳಿಯ ಸದಸ್ಯರುಗಳು ಹಾಗೂ ಪೋಷಕರು ಭಾಗವಹಿಸಿದರು.
ಅಧ್ಯಕ್ಷರು ಹೊನ್ನೇಶಪ್ಪ, ಮುಖ್ಯೋಪಾದ್ಯರಾದ ಲಕ್ಷ್ಮಮ್ಮ, ಈ ಶಾಲೆಯ ಸಂಸ್ಥಾಪಕರಾದ ಕಾರ್ಯದರ್ಶಿ ಎಂ.ಎಸ್.ವಿಜಯಪ್ರಕಾಶ್ ರವರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಂದ ನೃತ್ಯ ಪ್ರದರ್ಶನ ನಡೆಯಿತು.
ವರದಿ: ದೊಡ್ಡೇರಿ ಮಹಾಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA