nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026
    Facebook Twitter Instagram
    ಟ್ರೆಂಡಿಂಗ್
    • ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ
    • ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ
    • ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ
    • ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ
    • ಸಿಂಗಾಪುರ ಗ್ರಾಮಕ್ಕೆ ಸರ್ಕಾರಿ ಬಸ್‌ ಸೌಲಭ್ಯ ಕಲ್ಪಿಸಲು ಮಹಿಳೆಯರ ಆಗ್ರಹ: ಕೆಎಸ್‌ ಆರ್‌ ಟಿಸಿ ಅಧಿಕಾರಿಗೆ ಮನವಿ
    • ಹುಳಿಯಾರಿನ ವಾರದ ತರಕಾರಿ ಸಂತೆ ಸ್ಥಳಾಂತರ: ಏಪ್ರಿಲ್ 23ರಿಂದ ಹೊಸ ವ್ಯವಸ್ಥೆ ಜಾರಿ
    • ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    • ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಗೆ ಟೆಸ್ಟ್ ಡ್ರೈವ್‌ ಕಾರು ನೀಡಿದ ಶೋರೂಂ ಸಿಬ್ಬಂದಿ; ಸರಣಿ ಅಪಘಾತ, ಪಾದಚಾರಿಗೆ ಗಂಭೀರ ಗಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉತ್ತಮ ಸಮಾಜ ಸೃಷ್ಟಿಸುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಬೇಕು | ಸಚಿವ ಬಿ.ಸಿ.ನಾಗೇಶ್
    ತುಮಕೂರು December 19, 2021

    ಉತ್ತಮ ಸಮಾಜ ಸೃಷ್ಟಿಸುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಶ್ರಮಿಸಬೇಕು | ಸಚಿವ ಬಿ.ಸಿ.ನಾಗೇಶ್

    By adminDecember 19, 2021No Comments2 Mins Read
    b c nagesh

    ತುಮಕೂರು: ಉತ್ತಮ ಸಮಾಜವನ್ನು  ಸೃಷ್ಟಿಸುವಲ್ಲಿ ಶಿಕ್ಷಕರು, ಅಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆಯ ಎಲ್ಲಾ  ಸಿಬ್ಬಂದಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಪ್ರಾಥಮಿಕ  ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

    ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಜಿಲ್ಲಾ  ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ  ಕಚೇರಿ ಸಹಯೋಗದಲ್ಲಿಂದು ಆಯೋಜಿಸಿದ್ದ ನಗರದ ಎಸ್‌.ಬಿ.ಎಂ. ಮುಖ್ಯ ರಸ್ತೆಯಲ್ಲಿರುವ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ  ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಳಿತು-ಕೆಡುಕು  ಎರಡನ್ನೂ ಗುರುತಿಸುವ ಹಾಗೂ ಒಳ್ಳೆಯದನ್ನು ಸೃಷ್ಟಿಸಿ ಕೆಟ್ಟದ್ದನ್ನು ಶಿಕ್ಷಿಸುವ ಜವಾಬ್ದಾರಿ ಮತ್ತು ಶಕ್ತಿ ಎರಡೂ ಕೇವಲ ಶಿಕ್ಷಕನಿಗೆ ಮಾತ್ರ  ಇರುವಂಥದ್ದು. ಪುರಾತನ ಕಾಲದಲ್ಲಿ ಚಾಲ್ತಿಯಲ್ಲಿದ್ದ ಗುರುಕುಲ ಶಿಕ್ಷಣ  ಪದ್ಧತಿಯಿಂದ ಈಗಿನವರೆಗೂ ಗುರುವಿಗೆ ತನ್ನದೇ ಆದ ಸ್ಥಾನ-ಮಾನವಿದೆ. ಪ್ರತಿಯೊಂದು ಮಗುವು ಒಬ್ಬ ಶಿಕ್ಷಕನಲ್ಲಿ ಜ್ಞಾನ ಮತ್ತು  ಚಾರಿತ್ರ್ಯಗಳೆರಡನ್ನೂ ಗುರುತಿಸುತ್ತಿರುತ್ತದೆ. ಅಂತಹ ಶ್ರೇಷ್ಟ  ಸ್ಥಾನದಲ್ಲಿರುವಾತ ಮಗುವಿಗೆ ಮಾದರಿಯಾಗಿ ಮುಂದಿನ ಭವಿಷ್ಯಕ್ಕೆ  ದಾರಿದೀಪವಾಗಬೇಕು ಎಂದರು.


    Provided by
    Provided by

    ಗುರುತರ ಜವಾಬ್ದಾರಿಯನ್ನು ನಿರ್ವಹಿಸುವುದು ಅತ್ಯಂತ ಸೂಕ್ಷ್ಮ ಕೆಲಸವಾಗಿದೆ. ದೇಶದಲ್ಲಿ ಗಡಿ ಕಾಯುವ ಯೋಧನ ಪಾತ್ರ ಎಷ್ಟು  ಪ್ರಾಮುಖ್ಯತೆ ಹೊಂದಿದೆಯೋ ಸಮಾಜದಲ್ಲಿ ಭವಿಷ್ಯದ ಉತ್ತಮ ನಾಗರಿಕರನ್ನು  ಮಾನಸಿಕವಾಗಿ ತಯಾರು ಮಾಡುವಲ್ಲಿ ಶಿಕ್ಷಕರ ಪಾತ್ರವೂ ಅಷ್ಟೇ  ಪ್ರಮುಖವಾಗಿದೆ ಎಂದು ತಿಳಿಸಿದರು.

    ಸಮಾಜದಲ್ಲಿ ಮಾನವೀಯ ಮತ್ತು ಪ್ರಾಮಾಣಿಕವಾಗಿ ಕಾರ್ಯ  ನಿರ್ವಹಿಸುತ್ತಿರುವವರಿಗೆ ಸಹಾಯಕ್ಕಿಂತ ಪ್ರೋತ್ಸಾಹ ಮುಖ್ಯ. ಈ ನಿಟ್ಟಿನಲ್ಲಿ  ಸರ್ಕಾರವು ಪಾಲಿಕೆಯಲ್ಲಿ ಕರ್ಮಚಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೂ  ರಾಜ್ಯೋತ್ಸವ ಪ್ರಶಸ್ತಿ ನೀಡಲು ಮುಂದಾಗಿದೆ ಎಂದು ತಿಳಿಸಿದರು.

    ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾತನಾಡಿ, ಗುರುವಿನ ಸ್ಥಾನವು ಸೃಷ್ಟಿಕರ್ತ  ಬ್ರಹ್ಮನಿಗೂ ಮಿಗಿಲಾದದ್ದು. ಸೃಷ್ಟಿಯಲ್ಲಿ ಹೆಚ್ಚು ಗೌರವಕ್ಕೆ ಪಾತ್ರವಾಗುವ  ಸ್ಥಾನ ಗುರುವಿನದ್ದು. ಗುರುವು ಕೇವಲ ಅಕ್ಷರ ಜ್ಞಾನವನ್ನಷ್ಟೇ ಅಲ್ಲದೆ,

    ಜೀವನದ ಮಹತ್ವ, ಅರಿವು, ಕತ್ತಲೆಯಲ್ಲಿರುವವರಿಗೆ ಬೆಳಕು ತೋರಿಸುವ  ಮಾರ್ಗದರ್ಶಿಯಾಗಿರುತ್ತಾನೆ ಎಂದರಲ್ಲದೆ, ಶಿಕ್ಷಣ ಇಲಾಖೆ ಎಂಬುದು ರಾಷ್ಟ್ರದ ಮೊದಲ ಪ್ರಜೆಯಿಂದ ಹಿಡಿದು ಸಮಾಜದ ಕಟ್ಟಕಡೆಯ ವ್ಯಕ್ತಿಯ ವ್ಯಕ್ತಿತ್ವದ  ನಿರ್ಮಾತೃ. ಪ್ರತೀ ತಾಲೂಕಿನಲ್ಲಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳ  ಕಾರ್ಯಾಲಯವು ತನ್ನ ವ್ಯಾಪ್ತಿಯ ಶಿಕ್ಷಕರ ಸಮಸ್ಯೆಗಳನ್ನು  ಬಗೆಹರಿಸಬೇಕು.  ಶಿಕ್ಷಕನೆಂದರೆ ಮಕ್ಕಳೊಡಗೂಡಿ ಸಮಾಜದ ನಾಗರಿಕರಿಗೂ  ಮಾದರಿಯಾಗಬೇಕು. ಶಿಕ್ಷಕರು, ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ  ನಿರ್ವಹಿಸಬೇಕಾದರೆ ಅವರ ಮೇಲಾಧಿಕಾರಿಗಳು ಅಷ್ಟೇ ಪ್ರಾಮಾಣಿಕವಾಗಿದ್ದು, ಸ್ಪೂರ್ತಿ ನೀಡುವಂತಹ ಪರಿಸರ ಸೃಷ್ಟಿಮಾಡಬೇಕು ಎಂದರು.

    ನಂತರ ಕಾರ್ಯಕ್ರಮದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮನಾಯ್ಕ, ಇಲಾಖೆ ಉಪನಿರ್ದೇಶಕ ಸಿ. ನಂಜಯ್ಯ,  ಉಪನಿರ್ದೇಶಕ ಹಾಗೂ ಡಯಟ್ ಪ್ರಾಂಶುಪಾಲ ಮಂಜುನಾಥ್ ಕೆ, ಬಸವರಾಜು,  ಕುಮುದಮ್ಮ ಹಾಗೂ ರಂಗಧಾಮಪ್ಪರಿಗೆ ಸನ್ಮಾನ ಮಾಡಲಾಯಿತು.

    ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ  ಡಾ.ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ ಷಹಪುರವಾಡ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನರಸಿಂಹರಾಜು ಎನ್. ಸೇರಿದಂತೆ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

    ವರದಿ: ರಾಜೇಶ್ ರಂಗನಾಥ್, ತುಮಕೂರು

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

     

    admin
    • Website

    Related Posts

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ

    April 18, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಎತ್ತಿನಹೊಳೆ ಯೋಜನೆಗೆ ಅರಣ್ಯ ಇಲಾಖೆ ಅನುಮತಿ: ಕಾಮಗಾರಿ ವೇಗ, ಅಧಿಕಾರಿಗಳಿಗೆ ಅಭಿನಂದನೆ

    April 19, 2026

    ತುಮಕೂರು: ಬರಪೀಡಿತ ಬಯಲು ಸೀಮೆಯ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇನ್ನಿತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಗಾಗಿ…

    ವಿದ್ಯಾವಂತರಲ್ಲೇ ಹೆಚ್ಚುತ್ತಿರುವ ಜಾತಿ ಪ್ರಜ್ಞೆ: ಲೇಖಕಿ ಎಂ.ಸಿ.ಲಲಿತ ವಿಷಾದ

    April 19, 2026

    ತಿಪಟೂರು: ಬೆಡ್‌ ಶೀಟ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; ಪಕ್ಕದ ಪೊರಕೆ ತಯಾರಿಕಾ ಘಟಕಕ್ಕೂ ಬೆಂಕಿ ಕೆನ್ನಾಲಿಗೆ

    April 18, 2026

    ಅವೈಜ್ಞಾನಿಕ ಅಂಡರ್‌ ಪಾಸ್; ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಜಯಂತಿ ಗ್ರಾಮಸ್ಥರಿಂದ ಧರಣಿ

    April 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.