ತುಮಕೂರು: “ಬಿಜೆಪಿ ಅಭ್ಯರ್ಥಿ ಸೋಮಣ್ಣ ಪರವಾಗಿ ಕೆಲಸ ಮಾಡುವುದಿಲ್ಲ” ಎಂಬ ಹೇಳಿಕೆಗಳನ್ನು ಪದೇಪದೇ ಕೊಡುತ್ತಲೇ ಇರುವ ಮಾಜಿ ಸಚಿವ ಮಾಧುಸ್ವಾಮಿ ಅವರ ಮನವೊಲಿಸುವ ಪ್ರಯತ್ನ ಮುಂದುವರಿದಿದೆ.
ಇಂದು ಬೆಳಗ್ಗೆ ಅಭ್ಯರ್ಥಿ ವಿ. ಸೋಮಣ್ಣ, ಚಿಕ್ಕನಾಯಕನಹಳ್ಳಿಯ ಅವರ ಮನೆಗೆ ಮಾಜಿ ಸಚಿವ ಬಿಸಿ ನಾಗೇಶ್ ಅವರೊಂದಿಗೆ ತೆರಳಿ ಸುದೀರ್ಘ ಕಾಲ ಮಾತುಕತೆ ನಡೆಸಿದರು.
ಮಾತುಕತೆಯ ನಂತರ ಮಾಧುಸ್ವಾಮಿ ಕುದ್ದು ಇಬ್ಬರನ್ನು ಕಳುಹಿಸಿಕೊಡಲು ಮನೆಯವರೆಗೂ ಬಂದು ಸಂಭಾಷಣೆಯಲ್ಲಿ ತೊಡಗಿದರು.
ಈ ಮೂಲಕ ಮಾಜಿ ಸಚಿವ ಮಾಧುಸ್ವಾಮಿ ಅವರಿಗೆ ಪರಿಸ್ಥಿತಿಯ ಮನವರಿಕೆ ಮಾಡಿಕೊಡುವಂತಹ ಸರ್ವ ಪ್ರಯತ್ನಗಳು ಮುಂದುವರಿದಿದೆ ಎಂದು ಹೇಳಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296