ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತುಮಕೂರು ಮೈತ್ರಿ ಪಕ್ಷದ ಬಿಜೆಪಿ ಅಭ್ಯರ್ಥಿಯಿಂದ ಭರ್ಜರಿ ಮತ ಬೇಟೆ ನಡೆಯಿತು. ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ರೋಡ್ ಶೋ ಮೂಲಕ ವಿ. ಸೋಮಣ್ಣ ಮತದಾರರ ಮನಸೆಳೆದರು.
ಬಳಿಕ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಪ್ರತಿ ಪಂಚಾಯತಿಯಲ್ಲೂ ಕಾರ್ಯಕರ್ತರೊಂದಿಗೆ ಮತದಾರರ ಬಳಿ ಮತಯಾಚನೆ ಮಾಡಿದರು. ಹೊಳವನಹಳ್ಳಿ ಗ್ರಾಮದಲ್ಲಿ ಶ್ರೀ ರಾಮನವಮಿಯ ಹಬ್ಬದ ಪ್ರಯುಕ್ತ ಭಕ್ತಾದಿಗಳು ಮಾಡಿದಂತಹ ಶ್ರೀ ರಾಮನ ಪ್ರಸಾದ ವಿ.ಸೋಮಣ್ಣ ರವರು ಸವಿದರು.
ಮೈತ್ರಿ ಪಕ್ಷದ ಅಭ್ಯರ್ಥಿ ವಿ. ಸೋಮಣ್ಣನಿಗೆ ಜೆಡಿಎಸ್ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಮತದಾರರಿಂದ ಭರ್ಜರಿ ಸ್ವಾಗತ ದೊರಕಿತು. ಕಾರ್ಯಕರ್ತರು ಸಿಡಿ ಮದ್ದುಗಳನ್ನು ಸಿಡಿಸಿ, ಬೃಹತ್ ಹಾರಗಳನ್ನು ಹಾಕುವ ಮುಖೇನ ನೆಚ್ಚಿನ ನಾಯಕನಿಗೆ ಸ್ವಾಗತ ಕೋರಿದರು.
ಮೈತ್ರಿ ಪಕ್ಷದ ಲೋಕಸಭಾ ಅಭ್ಯರ್ಥಿ ವಿ. ಸೋಮಣ್ಣನಿಗೆ ಪಿ.ಆರ್. ಸುಧಾಕರ್ ಲಾಲ್ ಮತ್ತು ಬಿ.ಹೆಚ್. ಅನಿಲ್ ಕುಮಾರ್ ಸಾತ್ ಕೊಟ್ಟರು.
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296