ತುಮಕೂರು: ವಾಹನ ತಪಾಸಣೆ ವೇಳೆ ಎ.ಎಸ್.ಐಗೆ ಬೈಕ್ ಸವಾರನೊಬ್ಬ ಗುದ್ದಿದ ಘಟನೆ ನಡೆದಿದ್ದು, ಪರಿಣಾಮವಾಗಿ ಎ.ಎಸ್. ಐ ನಂಜೇಗೌಡ ಹಾಗೂ ಬೈಕ್ ಸವಾರನಿಗೆ ಗಾಯವಾಗಿದೆ.
ಬೆಳ್ಳಾವಿ ಬಳಿಯ ಚನ್ನೆನಹಳ್ಳಿ ಗೇಟ್ ಬಳಿ ಎ.ಎಸ್. ಐ ನಂಜೇಗೌಡ ಹಾಗೂ ಸಿಬ್ಬಂದಿ ವಾಹನ ತಪಾಸಣೆ ಮಾಡುತ್ತಿದ್ದ ವೇಳೆ ವೇಗವಾಗಿ ಬಂದ ಬೈಕ್ ಸವಾರನೊಬ್ಬ ಪೊಲೀಸರನ್ನು ಕಂಡು ಗಾಬರಿಗೊಂಡಿದ್ದು, ಪರಿಣಾಮವಾಗಿ ಬೈಕ್ ನಿಯಂತ್ರಣ ಕಳೆದುಕೊಂಡು ನಂಜೇಗೌಡ ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮವಾಗಿ ಎ.ಎಸ್.ಐ ನಂಜೇಗೌಡ ಹಾಗೂ ಬೈಕ್ ಸವಾರ ಇಬ್ಬರು ಕೂಡ ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಎ.ಎಸ್. ಐ ನಂಜೇಗೌಡ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಅವರನ್ನು ತುಮಕೂರು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಬೈಕ್ ಸವಾರ ಕೂಡ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿ: ಉದಯ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB