nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಲ್ಮೀಕಿ ನಾಯಕ ಸಮುದಾಯದ ಮೀಸಲಾತಿ 7.5%ಕ್ಕೆ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ
    ತಿಪಟೂರು May 20, 2022

    ವಾಲ್ಮೀಕಿ ನಾಯಕ ಸಮುದಾಯದ ಮೀಸಲಾತಿ 7.5%ಕ್ಕೆ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ

    By adminMay 20, 2022No Comments2 Mins Read

    ತಿಪಟೂರು:  ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲಾತಿ ಹೆಚ್ಚಳ ಮಾಡಬೇಕು ಸಂವಿಧಾನ ಬದ್ದವಾಗಿ ದೊರೆಯಬೇಕಾದ ಮೀಸಲಾತಿಯನ್ನ ಸರ್ಕಾರ ಕೂಡಲೇ ಜಾರಿಗೊಳಿಸಬೇಕು ಎಂದು ತಿಪಟೂರಿನಲ್ಲಿ ಮಹಶ್ರೀವಾಲ್ಮೀಕಿ ಸಂಘ ಹಾಗೂ ಮದಕರಿ ನಾಯಕ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

    ನಗರದ ನಗರಸಭಾ ವೃತ್ತದಿಂದ ಹೊರಟ ಪ್ರತಿಭಟನಾ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ಸಾಗಿ ತಿಪಟೂರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು


    Provided by
    Provided by
    Provided by

    ಪತ್ರಿಭಟನಾಕಾರರನ್ನುದ್ದೇಶಿಸಿ  ಮಾತನಾಡಿದ ಮದಕರಿ ನಾಯಕ ಸಂಘದ ಅಧ್ಯಕ್ಷ ಮಹೇಶ್,  ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮುದಾಯ ಆರ್ಥಿಕವಾಗಿ ಹಾಗೂ ರಾಜಕೀಯವಾಗಿ ಸಾಮಾಜಿಕವಾಗಿ ಹಿಂದುಳಿದಿದ್ದು ಪರಿಶಿಷ್ಠ ಪಂಗಡಗಳಲ್ಲಿಯೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ವಾಲ್ಮೀಕಿನಾಯಕ ಸಮುದಾಯಕ್ಕೆ ಜನಸಂಖ್ಯೆ ಆಧಾರದಲ್ಲಿ 3% ಮೀಸಲಾತಿಯನ್ನು 7.5%ಕ್ಕೆ ಹೆಚ್ಚಳ ಮಾಡಬೇಕು ಹಾಗೂ ಪರಿಶಿಷ್ಟ ಜಾತಿ ಮೀಸಲಾಯಿಯನ್ನ ಶೇಕಡ 15ರಿಂದ 17ಕ್ಕೆ ಹೆಚ್ಚಿಸಬೇಕು  ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿ ಯಥವತ್ ಜಾರಿಗೊಳಿಸಬೇಕು   ಎಂದು ಒತ್ತಾಯಿಸಿದರು.

    ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಮೀಸಲು ಹಣ ಕಾಯ್ದೆ 2017 ಕಲಂ 7ಡಿ ಯನ್ನು ಕೂಡಲೇ ರದ್ದುಗೊಳಿಸಬೇಕು.  ಪರಿಶಿಷ್ಠ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ವಾಲ್ಮಿಕಿ ಗುರುಪೀಠದ ಪೂಜ್ಯರಾದ ಪ್ರಸನ್ನಾನಂದಪುರಿ ಮಹಾಸ್ವಾಮಿಗಳ ಅನಿರ್ಥಿಷ್ಟಾವಧಿ ಮುಷ್ಕರ ಆರಂಭಿಸಿದ್ದು  ಸರ್ಕಾರ ಆರಂಭದಲ್ಲಿ ಬೇಷರತ್ ಆಗಿ ಮೀಸಲಾಯಿ ಹೆಚ್ಚಿಸುವ ಭರವಸೆ ನೀಡಿತ್ತು ಆದರೆ  ಕೊಟ್ಟ ಮಾತನ್ನು ತಪ್ಪುವ ಮೂಲಕ ವಚನ ಭ್ರಷ್ಠವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

    ಸರ್ಕಾರ ನಾಯಕ ಸಮುದಾಯದ ಶಕ್ತಿಯನ್ನ ಲಘುವಾಗಿ ಪರಿಗಣಿಸಿದರೆ ದಂಗೆಳುವ ಸಂದರ್ಭ ಬರುತ್ತದೆ. ಯಾವುದೇ ಕಾರಣಕ್ಕೂ ನಮ್ಮ ಸಮುದಾಯಕ್ಕೆ ಅನ್ಯಾಯವಾದರೇ ಯಾವ ತ್ಯಾಗಕ್ಕೂ ಇಂಜರಿಯುವುದ್ದಿಲ್ಲ. ಸರ್ಕಾರ ಕೂಡಲೇ ಕೊಟ್ಟ ಮಾತಿನಂತೆ ಮೀಸಲಾತಿ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು

    ತಾಲ್ಲೂಕು ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಜಯಸಿಂಹ ಮಾತನಾಡಿ,  ನಾಯಕ ಸಮುದಾಯ ಸ್ವಾಮಿ ನಿಷ್ಟೆ ಹೆಸರಾದ ಸಮುದಾಯವಾಗಿದ್ದು, ತಲತಲಾಂತರದಿಂದ ದೇಶಸೇವೆಗೆ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿದರು. ಒಂದು ಕಾಲದಲ್ಲಿ ಆಳುವ ಸಮುದಾಯವಾಗಿದ್ದ ವಾಲ್ಮೀಕಿ ನಾಯಕ ಸಮುದಾಯ. ಇಂದು ಸಾಮಾಜಿಕ ಆರ್ಥಿಕ ರಾಜಕೀಯವಾಗಿ   ತೀರಾ ಹಿಂದುಳಿದಿದ್ದು,  ಅನೇಕ ಜ್ವಲಂತ ಸಮಸ್ಯೆಗಳನ್ನ ಎದುರಿಸುತ್ತಿದೆ. ಕೇಂದ್ರ ಸರ್ಕಾರ ಶೇಕಡ  7.5ರಷ್ಟು ಮೀಸಲಾತಿ ಹೆಚ್ಚಳ ಮಾಡದೆ ಮೀನಾಮೇಷ ಎಣಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

    ರಾಜ್ಯ ಸರ್ಕಾರ ಪರಿಶಿಷ್ಠ ಪಂಗಡದ ಮೀಸಲಾತಿ ಹೆಚ್ವಿಸುವುದಾಗಿ ಮಾತುಕೊಟ್ಟು ಮಾತು ಮರೆತಿದೆ  ಸರ್ಕರ ಕೊಟ್ಟಮಾತಿನಂತೆ ಮೀಸಲಾತಿ ಹೆಚ್ಚಿಸಬೇಕು  ಸರ್ಕಾರ ಮೀಸಲಾತಿ ಹೆಚ್ಚಿಸದಿದ್ದರೇ ಉಗ್ರಹೋರಾಟ ಮಾಡಲಾಗುವುದು ಎಂದು  ತಿಳಿಸಿದರು.

    ದಲಿತ ಮುಖಂಡ ಕೊಪ್ಪಶಾಂತಪ್ಪ ಮಾತನಾಡಿ, ರಾಜ್ಯ ಪರಿಶಿಷ್ಟ ಜಾತಿ ವರ್ಗಗಳನ್ನ ನಿರ್ಲಕ್ಷ್ಯ ಮಾಡಿವೇ ಪರಿಶಿಷ್ಟ ಜಾತಿಗೆ ಶೇಖಡ17.5 ಹಾಗೂ ಪರಿಶಿಷ್ಠ ವರ್ಗಕ್ಕೆ 7.5 ಮೀಸಲಾತಿ ಮೀಸಲಾತಿ ನೀಡಬೇಕು. ಸರ್ಕಾರ ಪರಿಶಿಷ್ಟರಿಗೆ ನೀಡುವ ಅನುದಾನವನ್ನು ಕಡಿತಗೊಳಿಸುವ ಮೂಲಕ  ಅನ್ಯಾಯವೆಸಗುತ್ತಿದೆ  ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪ್ರತಿಭಟನೆಯಲ್ಲಿ ವಾಲ್ಮೀಕಿ ನಾಯಕ ಸಂಘದ ಉಪಾಧ್ಯಕ್ಷ ನಾಗರಾಜು, ಪ್ರಧಾನಕಾರ್ಯದರ್ಶಿ ಮಂಜುನಾಥ್, ನಾರಾಯಣಪ್ಪ, ಸುಧಾಕರ್ ಗೋವಿಂದಪ್ಪ, ನಾಗಣ್ಣ ಮದಕರಿ ನಾಯಕ ಸಂಘದ ಉಪಾಧ್ಯಕ್ಷ ಲಿಂಗರಾಜು, ಮಂಜುನಾಥ್, ಗೌರಾವಧ್ಯಕ್ಷ  ಸಿದ್ದಯ್ಯ, ಪರುಶುರಾಮ್ ನಾಯಕ್, ಪ್ರಧಾನಕಾರ್ಯದರ್ಶಿ ಮಹಲಿಂಗಯ್ಯ, ಸಿದ್ದೇಶ್ ಖಜಾಂಚಿ,  ಕೃಷ್ಣಮೂರ್ತಿ,  ವಿನಯ್,  ಶ್ರೀನಿವಾಸ್ , ರಾಜುಮದಕರಿ, ಸೀತಾನಾಯಕ್ ಮುಂತಾದವರು ಉಪಸ್ಥಿತರಿದರು.

    ವರದಿ: ಆನಂದ, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆರ್ಥಿಕ ವ್ಯವಹಾರ ಮಾದರಿ ಮತ್ತು ಪಾರದರ್ಶಕ: ನಿರಂಜನ್

    September 15, 2025

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಆರೋಗ್ಯ ತಪಾಸಣಾ ಶಿಬಿರ

    September 13, 2025

    ಪಿ.ಯು.ಸಿ. ನಂತರ ಮುಂದೇನು ಎಂಬ ಪ್ರಶ್ನೆಗೆ ವಿದ್ಯಾರ್ಥಿಗಳಲ್ಲಿ ಉತ್ತರವಿರುವುದಿಲ್ಲ: ಎಂ.ಡಿ.ಶಿವಕುಮಾರ್

    September 13, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.