nammatumakuru

    Subscribe to Updates

    Get the latest creative news from FooBar about art, design and business.

    What's Hot

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025
    Facebook Twitter Instagram
    ಟ್ರೆಂಡಿಂಗ್
    • ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ
    • ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ
    • 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
    • ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ
    • ಕಾನೂನು ಬಾಹಿರ ಚಟುವಟಿಕೆ ಗಮನಕ್ಕೆ ಬಂದ್ರೆ ಗಮನಕ್ಕೆ ತನ್ನಿ: ಪತ್ರಕರ್ತರಿಗೆ ವೃತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
    • ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ: ಸಚಿವ ಸಂತೋಷ್ ಲಾಡ್
    • ಕೊಳೆತು ನಾರುತ್ತಿದ್ದ ನಾಯಿಯ ಜೊತೆಗೆ ಮಹಿಳೆ ವಾಸ:  ಪ್ಲಾಟ್ ನೊಳಗೆ ಹೋದ ಪೊಲೀಸರಿಗೆ ಶಾಕ್
    • ಪತ್ರಕರ್ತನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆ ಮೆರೆದ ಶಾಸಕ ಸಿ.ಬಿ.ಸುರೇಶ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕ್ಕೆ ಮಾದರಿಯಾದ ಬಂಗಾರನಾಯಕನಬೆಟ್ಟ: ಏಕ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ
    ಪಾವಗಡ November 24, 2024

    ವಿಶ್ವಕ್ಕೆ ಮಾದರಿಯಾದ ಬಂಗಾರನಾಯಕನಬೆಟ್ಟ: ಏಕ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ

    By adminNovember 24, 2024No Comments2 Mins Read
    valmiki and ambedkar statues

    ಪಾವಗಡ: ತಾಲ್ಲೂಕಿನ ಬಂಗಾರನಾಯಕನಬೆಟ್ಟದ ಗ್ರಾಮಸ್ಥರ ನೇತೃತ್ವದಲ್ಲಿ ಭಾನುವಾರ ಒಂದೇ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿ ವಿಶ್ವಕ್ಕೆ ಮಾದರಿಯಾದ ಘಟನೆ ನಡೆದಿದೆ.

    ಇಲ್ಲಿಯವರೆಗೂ ಒಂದೇ ಸ್ಥಳದಲ್ಲಿ ಈ ಮಹಾನ್ ಚೇತನಗಳ ಮೂರ್ತಿ ನೆಲೆಗೊಂಡಿರಲಿಲ್ಲ. ಆದರೆ ವಿಶೇಷವಾಗಿ ನಾಯಕ ಸಮುದಾಯವೇ ಇರುವ ಗ್ರಾಮದಲ್ಲಿ ವಾಲ್ಮೀಕಿ ಮಹರ್ಷಿ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್  ಅವರ ಪುತ್ಥಳಿ ಪ್ರತಿಷ್ಠಾಪಿಸಿ ನಾಗರೀಕ ಸಮಾಜದಲ್ಲಿ ಸಮಾನತೆಯನ್ನು ತೋರಿದ್ದಾರೆ.


    Provided by

    ಜಾತಿ ಜಾತಿಗಳ ಕೋಮು ಸೃಷ್ಟಿಸುವ ಸಮಾಜದಲ್ಲಿ ಈ ಬಂಗಾರನಾಯಕನಬೆಟ್ಟದ ಗ್ರಾಮಸ್ಥರು ತದ್ವಿರುದ್ದವಾಗಿ ನೋಡುಗರನ್ನು  ಸೂಜಿಗಲ್ಲಿನಂತೆ ಸೆಳೆದಿದ್ದಾರೆ. ವೈಶಿಷ್ಟ್ಯತೆ, ಭ್ರಾತೃತ್ವಭಾವನೆ, ಸಾಮರಸ್ಯ, ನಾವೆಲ್ಲರೂ ಒಂದು ಎಂಬ ವಿಭಿನ್ನಾತ್ಮಕ ಕಾರ್ಯದ ಮೂಲಕ ಸಾರಿ ಹೇಳಿ ಪ್ರೇರಣೆಯೆನಿಸಿದ್ದಾರೆ.

    ಈ ಇಬ್ಬರು ಮಹಾನ್ ಪುಣ್ಯ ಪುರುಷರ ಪುತ್ಥಳಿಗಳನ್ನು ಅನಾವರಣಗೊಳಿಸಿದ ನಿಡಗಲ್ ವಾಲ್ಮೀಕಿ ಸಂಸ್ಥಾನದ ಪೀಠಾಧ್ಯಕ್ಷರು ಶ್ರೀ ಸಂಜಯ ಕುಮಾರ ಸ್ವಾಮೀಜಿಯವರು ಆನಂತರ ಮಾತನಾಡಿದರು.

    ಏಕಸ್ಥಳದಲ್ಲಿ ರಾಮಾಯಣ ಕತೃ ವಾಲ್ಮೀಕಿ ಮಹರ್ಷಿ, ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿರುವ ಗ್ರಾಮದ ಜನರು ಪುಣ್ಯವಂತರು. ನಮಗೆ ಬದುಕನ್ನು ಕಟ್ಟಿಕೊಳ್ಳಲಿಕ್ಕೆ ಈ ಮಹಾತ್ಮರು  ಸ್ಪೂರ್ತಿಯಾಗಿದ್ದಾರೆ. ಹಾಗಾಗಿ  ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉಳಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

    ಪ್ರೊ. ಡಾ.ಕರಿಯಣ್ಣ (ಕರಿಯ ನಿಷಾದ ) ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹರ್ಷಿ ವಾಲ್ಮೀಕಿ ತಳಸಮುದಾಯದ ಹರಿಕಾರರು. ವಾಲ್ಮೀಕಿ ರಾಮಾಯಣ ಜ್ಞಾನದ ಪ್ರತೀಕವಾದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಜ್ಞಾನದ ಜೊತೆಗೆ ಸಮಾಜದಲ್ಲಿನ ನಾಗರೀಕರ ಬದುಕನ್ನು ಹಸನುಗೊಳಿಸಿದ ಮಾಣಿಕ್ಯ ಎಂದು ಬಣ್ಣಿಸಿದರು.

    ಬಂಗಾರನಾಯಕನ ಬೆಟ್ಟ ಸ್ವಾತಂತ್ರ್ಯ ಪೂರ್ವದ ಇತಿಹಾಸ ತುಂಬಾ ಕೌತುಕತೆ ಹೊಂದಿದೆ. ಆ ನಿಟ್ಟಿನಲ್ಲಿ ಇಂದು ಅನಾವರಣಗೊಂಡ  ಈ ಮಹನೀಯರ ಪುತ್ಥಳಿಗಳು ಇತಿಹಾಸದ ಸಂಕೇತದ ಜತೆಗೆ ಪ್ರೀತಿ, ಸಾಮರಸ್ಯ, ಸಮಾನತೆ, ಸೋದರತೆಯ ಸಂಕೇತವಾಗಿವೆ. ಆ ಹಿನ್ನೆಲೆ ನಾಗರಿಕರು ಸ್ವಯಂ ಪ್ರೇರಣೆಯೊಂದಿಗೆ ಇಂತಹ ಕಾರ್ಯಗಳನ್ನು ಮಾಡುವ ಮೂಲಕ ಮಾದರಿಯಾಗಬೇಕು ಎಂದು ಸಹಕರಿಸಿದ ಗ್ರಾಮಸ್ಥರು, ಪಂಚಾಯಿತಿಯವರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

    ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಮದ ಮುಖಂಡ ಮಂಜುನಾಥ್ ಅವರು ಮಾತನಾಡಿ, ಇದೊಂದು ಅಲೋಚನಾ ಕಾರ್ಯ ನಮ್ಮ ಬದುಕಿನಲ್ಲಿ ಮಹತ್ತರವಾದದ್ದು. ಇಂತಹ ಕೆಲಸ ನಾಡಿನ ಉದ್ದಕ್ಕೂ ಆದಾಗ ನಮ್ಮಲ್ಲಿನ ಸಂಕುಚಿತ ಮನೋಭಾವನೆ ಕೊನೆಯಾಗಿ ವಿಶಾಲತೆ ಮೈಗೂಡುತ್ತದೆ ಎಂದು ತಿಳಿಸಿದರು.

    ಗ್ರಾಮದಲ್ಲಿ ಮಹಿಳೆಯರು ಕುಂಭ ಹೊತ್ತು ಮೆರವಣಿಗೆ ನಡೆಸಿ ಗಮನಸೆಳೆದರು.  ಈ ಸಂದರ್ಭದಲ್ಲಿ  ವಕೀಲರಾದ ನರಸಿಂಹಪ್ಪ, ನಿವೃತ್ತ ಸೂಪರಿಡೆಂಟ್ ಜೈಲರ್ ತಿಮ್ಮಯ್ಯ, ಗ್ರಾ.ಪಂ. ಸದಸ್ಯರಾದ ಶಿವಣ್ಣ ಎಸ್, ಜಗದೀಶ್ , ಮಾಜಿ ಸದಸ್ಯರ ಗಳಾದ ಕಾವಲಪ್ಪ, ಓಬಯ್ಯ ಜಿ. ಹಾಗೂ ನಾಗರಾಜು,  ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಆಗಸ್ಟ್ 1 ರಿಂದ ಆಟೋ ದಾಖಲಾತಿಗಳು ಕಡ್ಡಾಯ: ಸಿ.ಐ.ಸುರೇಶ್ ಖಡಕ್ ಎಚ್ಚರಿಕೆ

    June 16, 2025

    ಗಡಿನಾಡ ಕನ್ನಡಿಗರಿಗೆ ರಾಜ್ಯ ಸರ್ಕಾರ ಸವಲತ್ತು ಒದಗಿಸಿ: ಸಾಹಿತ್ಯ ಸಮ್ಮೇಳನದಲ್ಲಿ ಅಂಜನ್ ಕುಮಾರ್ ಆಗ್ರಹ

    June 2, 2025

    ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಹುಟ್ಟುಹಬ್ಬ ಆಚರಣೆ

    June 2, 2025
    Our Picks

    ಇಸ್ರೇಲ್ ಪರ ಬೇಹುಗಾರಿಕೆ: ಮೂವರನ್ನು ಗಲ್ಲಿಗೇರಿಸಿದ ಇರಾನ್

    June 25, 2025

    ಕೆಲವರಿಗೆ ಮೋದಿಯೇ ಮೊದಲು: ಶಶಿ ತರೂರ್ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಟೀಕೆ

    June 25, 2025

    ಏಳು ಪ್ರಮುಖ ಮಸೂದೆಗಳಿಗೆ ಅನುಮೋದನೆ ನೀಡಲು ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

    June 24, 2025

    24 ಬಾಲಕಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ

    June 24, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಟೈಯರ್ ಸ್ಫೋಟಗೊಂಡು ಮನೆಗೆ ನುಗ್ಗಿದ ಬಸ್: 10 ಕ್ಕೂ ಅಧಿಕ ಮಂದಿಗೆ ಗಾಯ

    June 29, 2025

    ತುಮಕೂರು :  ಟೈಯರ್ ಸ್ಫೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್ ಆರ್ ಟಿ ಸಿ ಬಸ್ ರಸ್ತೆ ಪಕ್ಕದ…

    ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯ ಬರ್ಬರ ಹತ್ಯೆ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಕೃತ್ಯ

    June 29, 2025

    88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

    June 29, 2025

    ಶಿಕ್ಷಣದ ಮಹತ್ವ, ಗುರುವಿನ ಶ್ರೇಷ್ಠತೆಯನ್ನು ತಿಳಿಸುತ್ತವೆ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಅಭಿಪ್ರಾಯ

    June 29, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.