nammatumakuru

    Subscribe to Updates

    Get the latest creative news from FooBar about art, design and business.

    What's Hot

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026
    Facebook Twitter Instagram
    ಟ್ರೆಂಡಿಂಗ್
    • ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
    • ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!
    • ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
    • ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
    • ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
    • ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
    • ಬೇಸಿಗೆ ಕಾಲದಲ್ಲಿ ಲಿಂಬೆಹಣ್ಣುಗಳನ್ನು ದೀರ್ಘಕಾಲದವರೆಗೆ ತಾಜಾವಾಗಿಡುವುದು ಹೇಗೆ?
    • ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಶ್ವಕ್ಕೆ ಮಾದರಿಯಾದ ಬಂಗಾರನಾಯಕನಬೆಟ್ಟ: ಏಕ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ
    ಪಾವಗಡ November 24, 2024

    ವಿಶ್ವಕ್ಕೆ ಮಾದರಿಯಾದ ಬಂಗಾರನಾಯಕನಬೆಟ್ಟ: ಏಕ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಅನಾವರಣ

    By adminNovember 24, 2024No Comments2 Mins Read
    valmiki and ambedkar statues

    ಪಾವಗಡ: ತಾಲ್ಲೂಕಿನ ಬಂಗಾರನಾಯಕನಬೆಟ್ಟದ ಗ್ರಾಮಸ್ಥರ ನೇತೃತ್ವದಲ್ಲಿ ಭಾನುವಾರ ಒಂದೇ ಸ್ಥಳದಲ್ಲಿ ಮಹರ್ಷಿ ವಾಲ್ಮೀಕಿ ಮತ್ತು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಅನಾವರಣಗೊಳಿಸಿ ವಿಶ್ವಕ್ಕೆ ಮಾದರಿಯಾದ ಘಟನೆ ನಡೆದಿದೆ.

    ಇಲ್ಲಿಯವರೆಗೂ ಒಂದೇ ಸ್ಥಳದಲ್ಲಿ ಈ ಮಹಾನ್ ಚೇತನಗಳ ಮೂರ್ತಿ ನೆಲೆಗೊಂಡಿರಲಿಲ್ಲ. ಆದರೆ ವಿಶೇಷವಾಗಿ ನಾಯಕ ಸಮುದಾಯವೇ ಇರುವ ಗ್ರಾಮದಲ್ಲಿ ವಾಲ್ಮೀಕಿ ಮಹರ್ಷಿ ಜೊತೆಗೆ ಡಾ.ಬಿ.ಆರ್.ಅಂಬೇಡ್ಕರ್  ಅವರ ಪುತ್ಥಳಿ ಪ್ರತಿಷ್ಠಾಪಿಸಿ ನಾಗರೀಕ ಸಮಾಜದಲ್ಲಿ ಸಮಾನತೆಯನ್ನು ತೋರಿದ್ದಾರೆ.


    Provided by
    Provided by

    ಜಾತಿ ಜಾತಿಗಳ ಕೋಮು ಸೃಷ್ಟಿಸುವ ಸಮಾಜದಲ್ಲಿ ಈ ಬಂಗಾರನಾಯಕನಬೆಟ್ಟದ ಗ್ರಾಮಸ್ಥರು ತದ್ವಿರುದ್ದವಾಗಿ ನೋಡುಗರನ್ನು  ಸೂಜಿಗಲ್ಲಿನಂತೆ ಸೆಳೆದಿದ್ದಾರೆ. ವೈಶಿಷ್ಟ್ಯತೆ, ಭ್ರಾತೃತ್ವಭಾವನೆ, ಸಾಮರಸ್ಯ, ನಾವೆಲ್ಲರೂ ಒಂದು ಎಂಬ ವಿಭಿನ್ನಾತ್ಮಕ ಕಾರ್ಯದ ಮೂಲಕ ಸಾರಿ ಹೇಳಿ ಪ್ರೇರಣೆಯೆನಿಸಿದ್ದಾರೆ.

    ಈ ಇಬ್ಬರು ಮಹಾನ್ ಪುಣ್ಯ ಪುರುಷರ ಪುತ್ಥಳಿಗಳನ್ನು ಅನಾವರಣಗೊಳಿಸಿದ ನಿಡಗಲ್ ವಾಲ್ಮೀಕಿ ಸಂಸ್ಥಾನದ ಪೀಠಾಧ್ಯಕ್ಷರು ಶ್ರೀ ಸಂಜಯ ಕುಮಾರ ಸ್ವಾಮೀಜಿಯವರು ಆನಂತರ ಮಾತನಾಡಿದರು.

    ಏಕಸ್ಥಳದಲ್ಲಿ ರಾಮಾಯಣ ಕತೃ ವಾಲ್ಮೀಕಿ ಮಹರ್ಷಿ, ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿರುವ ಗ್ರಾಮದ ಜನರು ಪುಣ್ಯವಂತರು. ನಮಗೆ ಬದುಕನ್ನು ಕಟ್ಟಿಕೊಳ್ಳಲಿಕ್ಕೆ ಈ ಮಹಾತ್ಮರು  ಸ್ಪೂರ್ತಿಯಾಗಿದ್ದಾರೆ. ಹಾಗಾಗಿ  ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಂಡು ಉಳಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

    ಪ್ರೊ. ಡಾ.ಕರಿಯಣ್ಣ (ಕರಿಯ ನಿಷಾದ ) ಅವರು ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಮಹರ್ಷಿ ವಾಲ್ಮೀಕಿ ತಳಸಮುದಾಯದ ಹರಿಕಾರರು. ವಾಲ್ಮೀಕಿ ರಾಮಾಯಣ ಜ್ಞಾನದ ಪ್ರತೀಕವಾದರೆ, ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನ ಜ್ಞಾನದ ಜೊತೆಗೆ ಸಮಾಜದಲ್ಲಿನ ನಾಗರೀಕರ ಬದುಕನ್ನು ಹಸನುಗೊಳಿಸಿದ ಮಾಣಿಕ್ಯ ಎಂದು ಬಣ್ಣಿಸಿದರು.

    ಬಂಗಾರನಾಯಕನ ಬೆಟ್ಟ ಸ್ವಾತಂತ್ರ್ಯ ಪೂರ್ವದ ಇತಿಹಾಸ ತುಂಬಾ ಕೌತುಕತೆ ಹೊಂದಿದೆ. ಆ ನಿಟ್ಟಿನಲ್ಲಿ ಇಂದು ಅನಾವರಣಗೊಂಡ  ಈ ಮಹನೀಯರ ಪುತ್ಥಳಿಗಳು ಇತಿಹಾಸದ ಸಂಕೇತದ ಜತೆಗೆ ಪ್ರೀತಿ, ಸಾಮರಸ್ಯ, ಸಮಾನತೆ, ಸೋದರತೆಯ ಸಂಕೇತವಾಗಿವೆ. ಆ ಹಿನ್ನೆಲೆ ನಾಗರಿಕರು ಸ್ವಯಂ ಪ್ರೇರಣೆಯೊಂದಿಗೆ ಇಂತಹ ಕಾರ್ಯಗಳನ್ನು ಮಾಡುವ ಮೂಲಕ ಮಾದರಿಯಾಗಬೇಕು ಎಂದು ಸಹಕರಿಸಿದ ಗ್ರಾಮಸ್ಥರು, ಪಂಚಾಯಿತಿಯವರನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಿದರು.

    ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಹಾಗೂ ಗ್ರಾಮದ ಮುಖಂಡ ಮಂಜುನಾಥ್ ಅವರು ಮಾತನಾಡಿ, ಇದೊಂದು ಅಲೋಚನಾ ಕಾರ್ಯ ನಮ್ಮ ಬದುಕಿನಲ್ಲಿ ಮಹತ್ತರವಾದದ್ದು. ಇಂತಹ ಕೆಲಸ ನಾಡಿನ ಉದ್ದಕ್ಕೂ ಆದಾಗ ನಮ್ಮಲ್ಲಿನ ಸಂಕುಚಿತ ಮನೋಭಾವನೆ ಕೊನೆಯಾಗಿ ವಿಶಾಲತೆ ಮೈಗೂಡುತ್ತದೆ ಎಂದು ತಿಳಿಸಿದರು.

    ಗ್ರಾಮದಲ್ಲಿ ಮಹಿಳೆಯರು ಕುಂಭ ಹೊತ್ತು ಮೆರವಣಿಗೆ ನಡೆಸಿ ಗಮನಸೆಳೆದರು.  ಈ ಸಂದರ್ಭದಲ್ಲಿ  ವಕೀಲರಾದ ನರಸಿಂಹಪ್ಪ, ನಿವೃತ್ತ ಸೂಪರಿಡೆಂಟ್ ಜೈಲರ್ ತಿಮ್ಮಯ್ಯ, ಗ್ರಾ.ಪಂ. ಸದಸ್ಯರಾದ ಶಿವಣ್ಣ ಎಸ್, ಜಗದೀಶ್ , ಮಾಜಿ ಸದಸ್ಯರ ಗಳಾದ ಕಾವಲಪ್ಪ, ಓಬಯ್ಯ ಜಿ. ಹಾಗೂ ನಾಗರಾಜು,  ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.

    ವರದಿ: ನಂದೀಶ್ ನಾಯ್ಕ, ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಪಾವಗಡ ಗಡಿ ಗ್ರಾಮಗಳಲ್ಲಿ ಜಾನುವಾರು, ಕೇಬಲ್ ಕಳ್ಳರ ಹಾವಳಿ: ರೈತರು ಕಂಗಾಲು!

    May 25, 2026

    ಪಾವಗಡ: ದೊಡ್ಡಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 2026–27ನೇ ಸಾಲಿನ ದಾಖಲಾತಿ ಆರಂಭ

    May 24, 2026

    ಪಾವಗಡ: ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಪ್ರಾಂಶುಪಾಲರಿಗೆ ಬೀಳ್ಕೊಡುಗೆ ಸಮಾರಂಭ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ನವದೆಹಲಿ/ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ತಡೆ ಮಸೂದೆ’ಗೆ ಕೇಂದ್ರ ಗೃಹ ಸಚಿವಾಲಯ…

    ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್‌ ಪಾರು!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ

    May 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.