nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025
    Facebook Twitter Instagram
    ಟ್ರೆಂಡಿಂಗ್
    • ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ
    • ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ
    • ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್
    • ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ
    • ಭೂಕಂಪನದ ಅನುಭವ: ಬೆಚ್ಚಿಬಿದ್ದ ವಿಜಯಪುರ ಜಿಲ್ಲೆ ಜನ
    • ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ: ಆರ್.ಅಶೋಕ್ ವಾಗ್ದಾಳಿ
    • ಅಪ್ರಾಪ್ತ ಬಾಲಕಿ ಸಹಿತ 8 ಮಂದಿ ಮಹಿಳೆಯರ ಮೇಲೆ ಅತ್ಯಾಚಾರ: ಯೋಗ ಗುರು ಬಂಧನ
    • ಮೈಸೂರು ದಸರಾ: ಪ್ರತಿಭಟನೆ, ಗೊಂದಲ ನಡೆಯದಂತೆ ಕಟ್ಟೆಚ್ಚರ ವಹಿಸಲು ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೋರಾಟ ಬೆಂಬಲಿಸಿ ಬೃಹತ್ ಪ್ರತಿಭಟನೆ
    ಗುಬ್ಬಿ May 21, 2022

    ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಹೋರಾಟ ಬೆಂಬಲಿಸಿ ಬೃಹತ್ ಪ್ರತಿಭಟನೆ

    By adminMay 21, 2022No Comments3 Mins Read
    gubbi

    ಗುಬ್ಬಿ:  ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಆಯೋಗದ ವರದಿ ತಕ್ಷಣವೇ ಜಾರಿಗೊಳಿಸಿ ಎಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಸಮಿತಿ ಸರ್ಕಾರಕ್ಕೆ ಒತ್ತಾಯಿಸಲಾಯಿತು.

    ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ವಾಲ್ಮೀಕಿ ಸಮಾಜದ ಗುರುಗಳಾದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಯವರು ನಿವೃತ್ತ ನ್ಯಾಯಮೂರ್ತಿ ಹೆಚ್ .ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಇಂದಿಗೆ ಮೂರು ದಿವಸಗಳು ಕಳೆದರೂ ಇದುವರೆಗೂ ಸರ್ಕಾರ ನಮ್ಮ ಸಮುದಾಯದ ಬೇಡಿಕೆ ಈಡೇರಿಸುವಲ್ಲಿ ಮುಂದಾಗದಿರುವುದು ದುರಂತವೇ ಸರಿ ಎಂದು ಶಿಕ್ಷಣ ಇಲಾಖೆಯ ನಿವೃತ್ತ ಉಪ ನಿರ್ದೇಶಕ ನರಸಿಂಹಮೂರ್ತಿ ಬೇಸರ ವ್ಯಕ್ತಪಡಿಸಿದರು.


    Provided by
    Provided by
    Provided by

    ನಮ್ಮ ರಾಜ್ಯದಲ್ಲಿ ಸುಮಾರು ಪರಿಶಿಷ್ಟ ಪಂಗಡಕ್ಕೆ ಸೇರಿದ ನಾವುಗಳು ಸುಮಾರು 50 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದ್ದರೂ ಪ್ರಸ್ತುತ ದಿನದಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇವೆ. ಸರ್ಕಾರಗಳು ಚುನಾವಣೆ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಮುದಾಯದ ಹಿತ ಕಾಯುವ ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದ ಮೇಲೆ ಈ ಸಮುದಾಯಗಳ ನಿರ್ಲಕ್ಷ ತಾಳುತ್ತಿರುವುದು ಎಷ್ಟು ಸರಿ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಹೆಚ್. ಎನ್ ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು 2019ರಲ್ಲಿ ರಚನೆ ಮಾಡಿದ್ದು ಆ ಅವಧಿಯಲ್ಲಿ ಇದ್ದ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರು ಪರಿಶಿಷ್ಟ ಜಾತಿಗೆ ಶೇಕಡ 15 ರಿಂದ 17 ಪರಿಶಿಷ್ಟ ಪಂಗಡಕ್ಕೆ ಶೇಕಡ 3 ರಿಂದ 7.5 ಹೆಚ್ಚಿಸುವುದಾಗಿ ಭರವಸೆ ನೀಡಿದರು. ಇದುವರೆವಿಗೂ ಮೀಸಲಾತಿ ಹೆಚ್ಚಳದ ಬಗ್ಗೆ ಸರ್ಕಾರಗಳು ಪ್ರಸ್ತಾಪ ಮಾಡುತ್ತಿಲ್ಲ ಇಂದು ನಮ್ಮ ಸಮುದಾಯದ ಹೆಸರು ಹೇಳಿಕೊಂಡು ನಕಲಿ ಜಾತಿ ಪ್ರಮಾಣ ಸೃಷ್ಟಿಸಿ ಪ್ರಭಾವಿ ಅಧಿಕಾರಿಗಳು ಅಧಿಕಾರ ಪಡೆದುಕೊಂಡಿದ್ದಾರೆ ಎಂದರು.

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸಂವಿಧಾನದ ಹಕ್ಕುಗಳನ್ನು ಪಡೆಯಲು ಒಟ್ಟಾಗಿ ಹೋರಾಡುವ ಅನಿವಾರ್ಯತೆ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಿ.ಎನ್. ಅಣ್ಣಪ್ಪಸ್ವಾಮಿ ಮಾತನಾಡಿ, ಇಂದು ರಾಜ್ಯಾದ್ಯಂತ ಮೀಸಲಾತಿ ಹೆಚ್ಚಳ ಪಡಿಸುವ ನಿಟ್ಟಿನಲ್ಲಿ ವಾಲ್ಮೀಕಿ ಸಮುದಾಯದ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹವನ್ನು ಹಮ್ಮಿಕೊಂಡಿರುವುದನ್ನು ಬೆಂಬಲಿಸಿ ಇಂದು ರಾಜ್ಯದ ಎಲ್ಲಾ ತಾಲೂಕು ಕಚೇರಿಗಳ ಮುಂಭಾಗ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಬೃಹತ್ ಪ್ರತಿಭಟನೆಯನ್ನು ಏಕಕಾಲದಲ್ಲಿ ನಡೆಸಿ ಮನವಿಯನ್ನು ಸಲ್ಲಿಸುತ್ತಿದ್ದು, ಕೂಡಲೇ ಮುಖ್ಯಮಂತ್ರಿಗಳು ಶ್ರೀಗಳು ಧರಣಿ ಮಾಡುತ್ತಿರುವ ಸ್ಥಳಕ್ಕೆ ತೆರಳಿ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಿ ಪರಿಶಿಷ್ಟ ಜಾತಿಗೆ ಇರುವ ಮೀಸಲಾತಿಯನ್ನು 17ಕ್ಕೆ ಹೆಚ್ಚಿಸುವುದು ಹಾಗೂ ಪರಿಶಿಷ್ಟ ಪಂಗಡಕ್ಕೆ 7.5 ಮೀಸಲಾತಿ ಯನ್ನು ಹೆಚ್ಚಿಸುವ ಬಗ್ಗೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

    ಈ ಹಿಂದೆ ಸಂವಿಧಾನದ ರಚನೆಯಲ್ಲಿ ನೀಡಿರುವ ಮೀಸಲಾತಿಯನ್ನು ನೀಡುತ್ತಿದ್ದಾರೆ. ವಿನಃ ಇದುವರೆಗೂ ಹೆಚ್ಚುವರಿ ಮಾಡಲು ಸರ್ಕಾರ ಮುಂದಾಗುತ್ತಿಲ್ಲ. ಬದಲಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಜಾತಿಗಳನ್ನು ಸೇರ್ಪಡೆ ಮಾಡುತ್ತಿದ್ದಾರೆ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಸರ್ಕಾರ ನೀಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಶ್ರೀಗಳ ಮಾರ್ಗದರ್ಶನದಲ್ಲಿ ರಾಜ್ಯಾದ್ಯಂತ ಪಾದಯಾತ್ರೆಯನ್ನು ಕೊಳ್ಳುವ ಮೂಲಕ ವಿಧಾನಸೌಧ ಮುತ್ತಿಗೆ ಹಾಕಲು ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

    ದಲಿತ ಮುಖಂಡ ಮಂಜೇಶ್ ಮಾತನಾಡಿ, ಇಂದು ಸರ್ಕಾರಗಳು ಪರಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕಲ್ಪಿಸುವಲ್ಲಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯುವಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಾಕಷ್ಟು ಅನ್ಯಾಯವಾಗುತ್ತಿದೆ. ಕೇವಲ 2 ರಿಂದ 3ರಷ್ಟು ಇರುವಂತಹ ಸಮುದಾಯಕ್ಕೆ ಶೇ.10ರಷ್ಟು ಮೀಸಲಾತಿ ನೀಡಿದ್ದೀರಿ.40 ರಿಂದ 50 ರಷ್ಟು ಇರುವ ನಮಗೆ ಕೇವಲ 15 ಮತ್ತು 3 ರಷ್ಟು ಮಾತ್ರ ಮೀಸಲಾತಿ ಕಲ್ಪಿಸಲಾಗಿದೆ. ಮೂಲ ವೃತ್ತಿ ಮಾಡುತ್ತಿದ್ದ ಚಪ್ಪಲಿ ಹೊಲೆಯುವ, ಚಮ್ಮಾರಿಕೆ ಮಾಡುವ, ಸತ್ತ ಹೆಣ ಹೊರುತ್ತಿದ್ದ ಅಂತಹ ಸಮುದಾಯಗಳಿಗೆ ಸೌಲಭ್ಯಗಳು ಮರೀಚಿಕೆಯಾಗಿದೆ. ಕೇವಲ ರಾಜಕೀಯ ದುರುದ್ದೇಶದಿಂದ ಎಲ್ಲಾ ಸಮುದಾಯದವರನ್ನು ಪರಿಶಿಷ್ಟ ಜಾತಿಗೆ ಸೇರಿಸುವ ಮೂಲಕ ಮುಂದುವರಿದ ಸಮುದಾಯದವರಿಗೆ ಮಾತ್ರ ಸೌಲಭ್ಯಗಳ ದೊರಕುವಂತಾಗಿದೆ. ದಲಿತರು ಅಸ್ಪೃಶ್ಯರಾಗಿ  ಇಂದಿಗೂ ಸಹ ಸಮಾಜದಲ್ಲಿ ಬದುಕುವಂತಹ ಸ್ಥಿತಿ ನಿರ್ಮಾಣವಾಗಿರುವುದು ನಮ್ಮ ದೇಶದ ದುರಂತವಾಗಿದೆ. ಇನ್ನಾದರೂ ಸರ್ಕಾರಗಳು ಮೀಸಲಾತಿ ಹೆಚ್ಚಿಸುವ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಸರ್ಕಾರವನ್ನು ಒತ್ತಾಯಿಸಿದರು.

    ಈ ವೇಳೆಯಲ್ಲಿ ಮುಖಂಡರಾದ ನಿವೃತ್ತ ಕೃಷಿ ಅಧಿಕಾರಿ ರಾಮಚಂದ್ರಪ್ಪ ಹಾಗೂ ಇತರ ಮುಖಂಡರುಗಳು ತಾಲೂಕು ದಂಡಾಧಿಕಾರಿಗಳಿಗೆ ಮನವಿ ಸಲ್ಲಿಸುವ ವೇಳೆ ತಾಲ್ಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಮೀಸಲಾತಿ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಇದ್ದು ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಸೂಕ್ತ ದಾಖಲಾತಿಗಳನ್ನು ಸ್ಥಳ ಪರಿಶೀಲನೆ ನಡೆಸಿ ಪ್ರಮಾಣಪತ್ರಗಳನ್ನು ವಿತರಣೆ ನೀಡುವಂತೆ ಕಂದಾಯ ಇಲಾಖೆ ಅಧಿಕಾರಿಗಳು ಸೂಕ್ತ ನಿರ್ದೇಶನ ನೀಡಬೇಕಾಗಿ ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಲಕ್ಷ್ಮೀ ರಂಗಯ್ಯ,  ಹೇರೂರು ನಾಗಣ್ಣ, ಸಾಗಸಂದ್ರ ದೇವರಾಜು, ರಘು, ಶೆಟ್ಟಿಹಳ್ಳಿ ಲಕ್ಷ್ಮಣ್, ಹಾಗಲವಾಡಿ ಶಂಕರ್, ನರಸಿಂಹ ಮೂರ್ತಪ್ಪ, ದೊಡ್ಡಗುಣಿ ಕೀರ್ತಿ, ಕುಮಾರ್, ಶ್ರೀನಿವಾಸ್, ಭಾಗ್ಯಮ್ಮ ಹಾಗೂ ವಾಲ್ಮೀಕಿ ಸಮುದಾಯದ ಮುಖಂಡರು ಮತ್ತು ದಲಿತ ಮುಖಂಡರುಗಳು ಹಾಗೂ ಇನ್ನಿತರರು ಹಾಜರಿದ್ದರು.

    ವರದಿ: ಮಂಜುನಾಥ್, ಗುಬ್ಬಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಜಿಎಸ್ ಟಿ ದರ ಪರಿಷ್ಕರಣೆ: ಕೇಂದ್ರ ಸರ್ಕಾರ ತೆರಿಗೆ ಭಾರ ಇಳಿಸಿದೆ: ಸಚಿವ ವಿ.ಸೋಮಣ್ಣ

    September 19, 2025

    ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ…

    ತುಮಕೂರು: ಕಲುಶಿತ ನೀರು ಸೇವನೆ: 12 ವಿದ್ಯಾರ್ಥಿನಿಯರು ಅಸ್ವಸ್ಥ

    September 19, 2025

    ಧರ್ಮಸ್ಥಳ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ ತಲೆಬುರುಡೆ ಕೇಸ್ ಗೆ ಟ್ವಿಸ್ಟ್

    September 19, 2025

    ಮನೆ ಬಾಗಿಲಿನಲ್ಲಿ ಸಿದ್ದರಾಮಯ್ಯ ಚಿತ್ರ ಕೆತ್ತಿಸಿದ ಮಹಿಳೆ

    September 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.