nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಾಣಿ ವಿಲಾಸ ಸಾಗರಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಗಂಗಾಪೂಜೆ: ಮೈಸೂರು ಅರಸರ ಕೊಡುಗೆಗಳ ಗುಣಗಾನ
    ಜಿಲ್ಲಾ ಸುದ್ದಿ September 4, 2022

    ವಾಣಿ ವಿಲಾಸ ಸಾಗರಕ್ಕೆ ಮಾಜಿ ಶಾಸಕರಾದ ಡಿ.ಸುಧಾಕರ್ ಗಂಗಾಪೂಜೆ: ಮೈಸೂರು ಅರಸರ ಕೊಡುಗೆಗಳ ಗುಣಗಾನ

    By adminSeptember 4, 2022No Comments2 Mins Read

    ಹಿರಿಯೂರು: ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಅಣೆಕಟ್ಟು ಎಂದು ಕರೆಸಿಕೊಳ್ಳುವ ವಾಣಿ ವಿಲಾಸ ಸಾಗರ 88 ವರ್ಷಗಳ ನಂತರ ಐತಿಹಾಸಿಕ 2ನೇ ಬಾರಿಗೆ ಗುರುವಾರ ರಾತ್ರಿ ಕೋಡಿ ಬೀಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಸಂದರ್ಭದಲ್ಲಿ ಮೈಸೂರು ಮಹಾರಾಜರ ಕೊಡುಗೆಯನ್ನು ಸ್ಮರಿಸಬೇಕಿದೆ ಎಂದು ಮಾಜಿ ಶಾಸಕರಾದ ಡಿ.ಸುಧಾಕರ್ ಹೇಳಿದರು.

    ವಿಲಾಸ ಸಾಗರಕ್ಕೆ ಗಂಗಾ ಪೂಜೆ ಸಲ್ಲಿಸಿದ ಮಾತನಾಡಿದ ಅವರು, ವಾಣಿ ವಿಳಾಸ ಸಾಗರ ಕೋಡಿ ಹರಿಯುವ ಮೂಲಕ ಚಿತ್ರದುರ್ಗ ಜಿಲ್ಲೆಯ ಜನತೆಯ ಮೊಗದಲ್ಲಿ ಹೊಸ ಚೈತನ್ಯ ಮೂಡಿಸಿದೆ ಎಂದರು.

    ಈ ಜಿಲ್ಲೆಗೆ ಭದ್ರಾ ಮೇಲ್ದಾಂಡನೆ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಜಿಲ್ಲೆಯ ರೈತ ಸಂಘಟನೆಗಳು ಸೇರಿದಂತೆ ಹಲವಾರು ಸಂಘಟನೆಗಳು ಶ್ರಮಿಸಿದ್ದವು. ಕೋದಂಡರಾಮ ಅವರು ಭದ್ರಾ ಮೇಲ್ದಾಂಡ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಶ್ರಮಿಸಿದ್ದರು ಎಂದು ಇದೇ ವೇಳೆ ಸುಧಾಕರ್ ತಿಳಿಸಿದರು.

    ಹಿರಿಯೂರು ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್ ಮಾತನಾಡಿ, ಬರದ ನಾಡಾಗಿದ್ದ ಚಿತ್ರದುರ್ಗ ಜಿಲ್ಲೆಯು ಇಂದು ಹಚ್ಚ ಹಸಿರಿನ ಕ್ರಾಂತಿಯಿಂದ ಕೂಡಿರಲು ಕಾರಣಕರ್ತರಾದ ಮೈಸೂರು ನಾಲ್ವಾಡಿ ರಾಜರ ವಂಶಸ್ಥರಿಗೆ ಅಭಿನಂದನೆ ಸಲ್ಲಿಸಿದರು.

    2013 ರಲ್ಲಿ ಮುಖ್ಯಮಂತ್ರಿ ಯಾಗಿ ಅಧಿಕಾರ ಸ್ವೀಕರಿದ್ದಂತಹ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಸಿದ್ದರಾಮಯ್ಯ ನವರು ಅಧಿಕಾರಕ್ಕೆ ಬಂದ ನಂತರ ಹನ್ನೆರಡು ಸಾವಿರದ ಮುನ್ನೂರ ಐವತ್ತು ಕೋಟಿಯನ್ನು ಈ ಭದ್ರಾ ಮೇಲ್ದಾಂಡಣೆಗೆ ಮೀಸಲಿಟ್ಟಿದ್ದರು. ಈ ಭದ್ರಾ ಮೇಲ್ದಾಂಡೆ ಯೋಜನೆಯ ಕಾರ್ಯಕ್ಕೆ ಅಂದಿನ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿದ್ದ ಡಿ.ಸುಧಾಕರ್ , ಅವರ ಕೊಡುಗೆ ಮಹತ್ವದ್ದು ಎಂದರು.

    ಆಗಿನ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ,ಕ್ಷೇತ್ರದ ಸಚಿವರು , ಸಂಸದರು ಈ ಭದ್ರಾ ಮೇಲ್ದಾಂಡ ಯೋಜನೆಗೆ ಅಂದು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರ ಮೇಲೆ ಹಲವು ಬಾರಿ ಒತ್ತಡ ತಂದು , ಭದ್ರಾ ಮೇಲ್ದಾಂಡೆ ಯೋಜನೆಯ ನೀರನ್ನು ವಾಣಿ ವಿಲಾಸ ಸಾಗರಕ್ಕೆ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದರು ಎಂದು ರಮೇಶ್ ತಿಳಿಸಿದರು.

    ಕಾಡುಗೊಲ್ಲ ಮುಖಂಡರಾದ ಗೋಪಿಯಾದವ್ ಅವರು ಮಾತನಾಡಿ, ಅಂದಿನ ಮೈಸೂರು ಮಹಾರಾಜರಾಗಿದ್ದ ನಾಲ್ವಾಡಿ ಕೃಷ್ಣರಾಜ ಒಡೆಯರ್ ಅವರು ವಾಣಿ ವಿಲಾಸ ಸಾಗರ ಅಣೆಕಟ್ಟು ಕಟ್ಟಿಸಿದ್ದರು. ಈ ಅಣೆಕಟ್ಟು ಕಟ್ಟಲು ಹಣದ ಕೊರತೆಯಾದಾಗ ತನ್ನ ಒಡವೆಗಳನ್ನು ಅಡವಿಟ್ಟು ಈ ವಾಣಿ ವಿಲಾಸ ಸಾಗರದ ಅಣೆಕಟ್ಟು ಕಟ್ಟಿದರು. ಇದೊಂದು ಐತಿಹಾಸಿಕ ಅಣೆಕಟ್ಟು ಎಂದು ಅವರು ಹೇಳಿದರು.

    ಇದೇ ವೇಳೆ ವಾಣಿ ವಿಲಾಸ ಸಾಗರದ ಜಲಾಶಯದ ಕೋಡಿ ಬಿದ್ದಿರುವ ದೃಶ್ಯವನ್ನು ನೋಡಲು ಬಂದಂತಹ ಪ್ರವಾಸಿಗರು ನಮ್ಮ ತುಮಕೂರು ಮಾಧ್ಯಮದ ಜೊತೆಗೆ ಅಭಿಪ್ರಾಯಗಳನ್ನು ಹಂಚಿಕೊಂಡರು.

    ಈ ಸಂದರ್ಭದಲ್ಲಿ ಈರಲಿಂಗೇಗೌಡ, ಜ್ಯೋತಿಲಕ್ಷ್ಮಿ, ಗೋಪಿಯಾದವ್, ಕಾರ್ಮಿಕ ವಿಭಾಗದ ಎಸ್ ಸಿ ಘಟಕದ ಅಧ್ಯಕ್ಷರಾದ ಶಿವಕುಮಾರ್ ವಿ., ಡಾ.ಸುಜಾತ, ನಗರಸಭೆಯ ಅಧ್ಯಕ್ಷರಾದ ಎಸ್ .ಶಿವರಂಜನಿ ಯಾದವ್ , ಗೀತಾ ಗಂಗಾಧರ್ , ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಅಜ್ಜಯ್ಯ ಯಾನೆ ಅಜಯ್ ಕುಮಾರ್, ಕಾಮರಾಜ್ ಎನ್., ಜ್ಙಾನೇಶ್., ಗುರುಭೋವಿ, ನಗರಸಭೆ ಸದಸ್ಯರುಗಳಾದ ಅಮಲಮೇರಿ, ಜಬಿವುಲ್ಲಾ, ದಾದಾಪೀರ್, ಜಗದೀಶ್, ಸೇರಿದಂತೆ ಎಸ್ ಟಿ ಘಟಕದ ಗೋಪಾಲಪುರ, ಗಿರೀಶ್ ಮಹಿಳಾ ಘಟಕದ ಅಧ್ಯಕ್ಷರಾದ ಗೌರಿ ಎಮ್.ಎಸ್. ಹಿರಿಯೂರು ಹಾಗೂ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಇತರರು ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಚಿತ್ರದುರ್ಗ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಕಾಮಗಾರಿ ಸ್ಥಳಕ್ಕೆ ಜಿ.ಪಂ ಸಿಇಒ ಭೇಟಿ: ಶಾಶ್ವತ ಆಸ್ತಿ ನಿರ್ಮಾಣಕ್ಕೆ ಒತ್ತು ನೀಡಲು ಸೂಚನೆ

    August 8, 2026

    ಸ್ತನ್ಯಪಾನ ಬೆಂಬಲಿಸಿ, ಸದೃಢ ಜಗತ್ತು ನಿರ್ಮಿಸಿ: ಡಾ.ರವಿಕುಮಾರ್ ಕರೆ

    August 7, 2026

    ಆಗಸ್ಟ್ 8ರಂದು ಸರಗೂರಿನಲ್ಲಿ ಹೆಚ್.ಡಿ. ಕೋಟೆ ಹಾಗೂ ಸರಗೂರು ತಾಲೂಕು ಮಾದರ ಮಹಾಸಭಾ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

    August 7, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.