ತಿಪಟೂರು: ಕರ್ನಾಟಕ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ಆಯೋಜಿಸಿದ್ದ ವಿಧಾನಸೌಧ-ಹೈಕೋರ್ಟ್ ಚಲೋ ಬೃಹತ್ ಪ್ರತಿಭಟನೆಯಲ್ಲಿ ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟ ಭಾಗಿಯಾಯಿತು.
ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನಿಸಿದ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನನ್ನು ವಜಾಗೊಳಿಸಿ, ಬಂಧನಕ್ಕೆ ಆಗ್ರಹಿಸಿ ಸಂವಿಧಾನ ಪರ ಸಂಘಟನೆಗಳು ಈ ಬೃಹತ್ ಪ್ರತಿಭಟನೆ ಆಯೋಜಿಸಿದ್ದವು.
ತಿಪಟೂರಿನ ದಲಿತಪರ ಸಂಘಟನೆಗಳ ಒಕ್ಕೂಟದಿಂದ ಎಪಿಎಂಸಿ ಸದಸ್ಯ ಬಜಗೂರು ಮಂಜುನಾಥ್, ಬೆಸ್ಕಾಂ ಸೋಮಶೇಖರ್ ಮತ್ತು ಕಂಚಾಘಟ್ಟ ಕುಮಾರ್ ಸೇರಿದಂತೆ ದಲಿತ ಮುಖಂಡರುಗಳು ಮತ್ತು ಬೆಸ್ಕಾಂ ಸಿಬ್ಬಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದರು.
ವರದಿ: ಆನಂದ, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy