ದಾವಣಗೆರೆ: 22 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ಇದೀಗ ನಿವೃತ್ತಿಹೊಂದಿ ತಾಲೂಕಿಗೆ ಆಗಮಿಸಿದ ಹೆಮ್ಮೆಯ ವೀರಯೋಧ ಬೈರನಾಯಕನಹಳ್ಳಿ ನಾಗರಾಜ್ ಅವರಿಗೆ ಜಗಳೂರು ತಾಲೂಕಿನ ಕನ್ನಡಪರ ಸಂಘಟನೆಗಳು ಅದ್ದೂರಿ ಸ್ವಾಗತ ನೀಡಿತು.
ಜಿಲ್ಲೆಯ ಜಗಳೂರು ತಾಲ್ಲೂಕಿನ ಪಟ್ಟಣದ ಐ.ವಿ.ಯಿಂದ ತಾಲ್ಲೂಕು ಕಚೇರಿ ಮುಂಭಾಗದ ಕುವೆಂಪು ವೃತ್ತದವರೆಗೂ ಮೆರವಣಿಗೆ ಮೂಲಕ ತೆರಳಿ ವೀರ ಯೋಧ ನಾಗರಾಜ್ ಅವರನ್ನು ಸ್ವಾಗತಿಸಲಾಯಿತು.
ಈ ಸಂದರ್ಭದಲ್ಲಿ ಜಗಳೂರು ತಾಲೂಕು ತಹಶೀಲ್ದಾರರಾದ ಸಂತೋಷ್, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮಹೇಶ್, ಪ್ರಗತಿಪರ ಹೋರಾಟಗಾರ ಆರ್.ಒಬಳೇಶ್, ಪಟ್ಟಣ ಪಂಚಾಯಿತಿ ಸದಸ್ಯರಾದ ನವೀನ್ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ರಾಮೇಗೌಡ, ತಾಲೂಕು ಅಧ್ಯಕ್ಷರಾದ ಮಹಾಂತೇಶ್, ಪಟ್ಟಣ ಪಂಚಾಯಿತಿ ಸದಸ್ಯ ಲುಕ್ಮಾನ್ ಉಲ್ಲಾ ಖಾನ್, ಎಚ್ಚೆತ್ತ ಕರ್ನಾಟಕ ನವ ನಿರ್ಮಾಣ ವೇದಿಕೆ ರಾಜ್ಯ ಅಧ್ಯಕ್ಷ ಮಹಾಲಿಂಗಪ್ಪ ಜೆ.ಎಚ್.ಎಮ್. ಹೊಳೆ, ನಿವೃತ್ತ ಯೋಧರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರತಾಪ್ ರೆಡ್ಡಿ, ಕರುನಾಡ ರಕ್ಷಣಾ ಪಡೆಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ಸಿದ್ದಮ್ಮನಹಳ್ಳಿ ಇಂದಿರಾಗುರುಸ್ವಾಮಿ, ಕರ್ನಾಟಕ ರಕ್ಷಣಾ ವೇದಿಕೆಯ ಮಾಧ್ಯಮ ಸಲಹೆಗಾರ ರಕೀಬ್, ರಕ್ಷಣಾ ವೇದಿಕೆಯ ಸಾಮಾಜಿಕ ಮಾಧ್ಯಮದ ಜಿಲ್ಲಾ ಮುಖಂಡ ಲಿಂಗರಾಜ್, ಕಂದಾಯ ನೀರಿಕ್ಷಕರಾದ ಕುಬೇಂದ್ರ ನಾಯ್ಕ್ , ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು. ( ಚಿತ್ರದುರ್ಗ – ದಾವಣಗೆರೆ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5