nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವೀರಶೈವ ಸಮಾಜದ ನೂರಾರು ಯುವಕರು ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆ !
    ತುರುವೇಕೆರೆ February 1, 2023

    ವೀರಶೈವ ಸಮಾಜದ ನೂರಾರು ಯುವಕರು ಬಿಜೆಪಿ ತೊರೆದು ಜೆಡಿಎಸ್ ಗೆ ಸೇರ್ಪಡೆ !

    By adminFebruary 1, 2023No Comments2 Mins Read
    veerashiva

    ತುರುವೇಕೆರೆ:ತಾಲ್ಲೂಕಿನ ಮಾಯಸಂದ್ರ ಹೋಬಳಿ ಚಿಕ್ಕಪುರ ಗ್ರಾಮದಲ್ಲಿ ಜೆ.ಡಿ.ಎಸ್. ಏರ್ಪಡಿಸಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ರಾಜು, ಷಡಕ್ಷರಿ, ನರಸಿಂಹಮೂರ್ತಿ, ವೆಂಕಟೇಶ್ ಎಂ, ಚಂದ್ರಣ್ಣ, ಕುಮಾರ್ ಸಿ.ಎಂ. ವೇದ, ರವಿಕುಮಾರ್, ರಾಜೇಂದ್ರಬಾಬು, ಚಂದ್ರಣ್ಣ, ಜಗದೀಶ್ , ನಾಗರಾಜ್, ರಾಜಪ್ಪ, ಎಲ್ಲಪ್ಪ, ಕಾಂತರಾಜ್, ಕುಮಾರಯ್ಯ ಸದಾಶಿವಯ್ಯ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಬಿ.ಜೆ.ಪಿ. ತೊರೆದು ಮಾಜಿ ಶಾಸಕ ಎಂ. ಟಿ. ಕೃಷ್ಣಪ್ಪನವರ ನೇತೃತ್ವದಲ್ಲಿ ಜೆ.ಡಿ.ಎಸ್. ಪಕ್ಷವನ್ನು ಸೇರ್ಪಡೆಯಾದರು.

    ಮಾಜಿ ಶಾಸಕ ಕೃಷ್ಣಪ್ಪ ಈ ವೇಳೆ ಮಾತನಾಡಿ, ನಮ್ಮನ್ನು ನಂಬಿ ಪಕ್ಷ ಸೇರ್ಪಡೆಯಾಗುತ್ತಿರುವ ಎಲ್ಲರನ್ನು ಚೆನ್ನಾಗಿ ನೋಡಿಕೊಳ್ಳಲಾಗುವುದು. ನಿಮಗೆ ಆತಂಕ ಬೇಡ ಎಂದರು.


    Provided by
    Provided by

    ಕೆಲ ಕಿಡಿಗೇಡಿಗಳು ಜೆ.ಡಿ.ಎಸ್. ಪಕ್ಷದ ಕಾರ್ಯಕ್ರಮದ ಪೋಸ್ಟರ್ ಗಳನ್ನು ಹರಿಯುವುದು ಅವರ ಸಂಸ್ಕೃತಿಯನ್ನು ತೋರುತ್ತದೆ. ನಮ್ಮ ಕಾರ್ಯಕರ್ತರು ಯಾವುದಕ್ಕೂ ತಲೆಕೆಡಿಸಿಕೊಳ್ಳಬೇಡಿ. ಅವರು ಮಾಡಿದಂಥ ಕೆಲಸವನ್ನು ನೀವು ಮಾಡಬೇಡಿ. ಆ ರೀತಿ ಮಾಡಿದರೆ ನಿಮಗೂ ಅವರಿಗೂ ವ್ಯತ್ಯಾಸ ವಿರುವುದಿಲ್ಲ. ಇನ್ನು 45 ದಿನಗಳಲ್ಲಿ ಅವರ ಬಲ ಗೊತ್ತಾಗುತ್ತದೆ. ತುರುವೇಕೆರೆ ಕ್ಷೇತ್ರದಲ್ಲಿ ವೀರಶೈವರು ಜೆ.ಡಿ.ಎಸ್. ಪಕ್ಷಕ್ಕೆ ಭಾರೀ ಬೆಂಬಲ ತೋರುತ್ತಿರುವುದರಿಂದ ಹತಾಶೆಯಿಂದ ಮಾತನಾಡುತ್ತಿದ್ದಾರೆ ಎಂದರು.

    ಮೊದಲು ನಮ್ಮ ಕ್ಷೇತ್ರ ಚೆನ್ನಾಗಿತ್ತು. ಯಾವುದೇ ಭ್ರಷ್ಟಾಚಾರವಿರಲಿಲ್ಲ, ಬಿ.ಜೆ.ಪಿ. ಸರ್ಕಾರ ಬಂದ ಮೇಲೆ ಇದೆಲ್ಲ ಜಾಸ್ತಿಯಾಗಿದೆ. ನನ್ನ ಅಧಿಕಾರದ ಅವಧಿಯಲ್ಲಿ ಯಾರಿಂದಲೂ ಒಂದು ರೂಪಾಯಿಯೂ ಲಂಚ ಸ್ವೀಕರಿಸಿಲ್ಲ, ಇವತ್ತು ಪ್ರತಿ ಭೂಮಿ ಪೂಜೆ ಮಾಡಲೂ ಸಹ 30 ರಿಂದ 40% ಕಮಿಷನ್ ಕೊಟ್ಟರೆ ಪೂಜೆ ನಡೆಯುತ್ತದೆ. ಇದು ಭ್ರಷ್ಟಾಚಾರದ ಪರಮಾವಧಿ. ಮತದಾರ ಓಟನ್ನು ಕೊಡುವುದು ನಿಮ್ಮ ಸೇವೆಯನ್ನು ಮಾಡಲು ಶೋಕಿಮಾಡಲು ಅಲ್ಲ, ಚುನಾವಣೆ ದಿನಾಂಕ ನಿಗದಿಯಾದ ಮೇಲೆ ಅವರ ಹತ್ತಿರ ಯಾರು ಇರುತ್ತಾರೆಂದು ಕಾದುನೋಡ ಬೇಕಿದೆ. ಗುತ್ತಿಗೆದಾರರು ಯಾರೂ ಅಲ್ಲಿ ಉಳಿಯುವುದಿಲ್ಲ ಎಂದರು.

    ವೀರಶೈವ ಸಮಾಜದವರಾರೂ ಅವರ ಹತ್ತಿರ ಉಳಿಯುವುದಿಲ್ಲ, ಅವರು ಆ ಸಮಾಜದ ಯಾರನ್ನು ಬೆಳೆಯಲು ಬಿಟ್ಟಿಲ್ಲ, ಇದು ನನ್ನ ಕೊನೆಯ ಚುನಾವಣೆ ನನಗೆ ಆಶೀರ್ವದಿಸಿ, ಒಂದು ಸಾವಿರ ಒಟ್ಟಿನಲ್ಲಿ ನಾನು ಸೋತಿದ್ದೆ ಅವು ಇವತ್ತು ವಾಪಸ್ ಬಂದಿದೆ. ಸ್ವಲ್ಪ ವ್ಯತ್ಯಾಸಗಳಾಗಿ ಕಳೆದ ಸಲ ನಾನು ಸೋತಿದ್ದೆ. ಈ ಸಲ ನನನ್ನು ಗೆಲ್ಲಿಸುತ್ತೀರಾ ಎಂಬ ನಂಬಿಕೆ ನನಗಿದೆ, ಎಲ್ಲ ಊರುಗಳಲ್ಲಿ ಪಕ್ಷಕ್ಕೆ ಸೇರುತ್ತಿದ್ದಾರೆ ಪಕ್ಷ ಬಿಟ್ಟಂತಹವರು ಮರಳಿದ್ದಾರೆ. ನಾನು 5 ಸಾವಿರ ಜನರಿಗೆ ಜಾಮೀನು ಮಂಜೂರು ಮಾಡಿದ್ದೇನೆ. ನನ್ನ ಮಾತು ಸ್ವಲ್ಪ ಒರಟು ಇಲ್ಲವಾದರೆ ಅಧಿಕಾರಿಗಳ ಹತ್ತಿರ ಕೆಲಸ ತೆಗೆಯುವುದಕ್ಕಾಗುವುದಿಲ್ಲ ಎಂದು ಹೇಳಿ ಮುಂದಿನ ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ ಎಂದು ಮನವಿ ಮಾಡಿದರು.

    ಕಾರ್ಯಕರ್ತರನ್ನುದ್ದೇಶಿಸಿ ಜೆ.ಡಿ.ಎಸ್. ರಾಜ್ಯ ಯುವ ಕಾರ್ಯದರ್ಶಿ ಚಂದ್ರೇಶ್ ಮಾತನಾಡಿ, ನೀವೆಲ್ಲ ಪಕ್ಷ ಸೇರುತ್ತಿರುವುದು ಸಂತಸದ ವಿಷಯವಾಗಿದೆ. ಜೆ.ಡಿ.ಎಸ್. ಪಕ್ಷ ಗಟ್ಟಿಯಾಗಿದೆ, ಕಾರ್ಯಕರ್ತರು ಪ್ರಾಮಾಣಿಕವಾಗಿದ್ದಾರೆ. ಇವತ್ತು ಕೃಷ್ಣಪ್ಪನವರು ಮಾಡಿದಂತಹ ಕೆಲಸಗಳು ಮಾತನಾಡುತ್ತಿವೆ, ಈ ಪಕ್ಷ ಶ್ರೀಮಂತರ ಪಕ್ಷವಲ್ಲ ರೈತರ ಪಕ್ಷ ತಾಲ್ಲೂಕಿನಾದ್ಯಂತ ಕೃಷ್ಣಪ್ಪನವರ ಮೇಲೆ ನಂಬಿಕೆ ವಿಶ್ವಾಸವನ್ನಿಟ್ಟು ವೀರಶೈವರು ಪಕ್ಷ ಸೇರುತ್ತಿದ್ದಾರೆ ಇದಕ್ಕಿಂತ ಇನ್ನೇನು ಬೇಕು ಗೆಲ್ಲಲಿಕ್ಕೆ ಎಂದರು.

    ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟೇಶ್, ಡಿ.ಸಿ.ಸಿ. ಬ್ಯಾಂಕ್ ಮಾಜಿ ನಿರ್ದೇಶಕ ದೇವರಾಜ್, ಬಾಣಸಂದ್ರರಮೇಶ್, ಒಬ್ಬೆನಾಗಸಂದ್ರ ಸೋಮಣ್ಣ, ವೆಂಕಟಾಪುರ ಯೋಗೀಶ್, ಬಸವರಾಜು, ಚಿಕ್ಕಪುರ ಗಂಗಣ್ಣ, ವಿಜಯೇಂದ್ರ ಸೇರಿದಂತೆ ಹಲವರು ಹಾಜರಿದ್ದರು.

    ವರದಿ: ಸುರೇಶ್ ಬಾಬು ಎಂ. ತುರುವೇಕೆರೆ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರಗೂರು:  ತಾಲೂಕಿನ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಡೆಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ಅಂಗವಾಗಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಲಿ…

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.