ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ವಾಹನಗಳ ಟೋಯಿಂಗ್ ಮತ್ತೆ ಆರಂಭವಾಗಲಿದೆ. ಈ ಬಗ್ಗೆ ಬೆಂಗಳೂರು ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಸುರಂಗ ರಸ್ತೆ ನಿರ್ಮಾಣ ಹಾಗೂ ಕಾವೇರಿ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಸ್ತೆ ಮೇಲೆ ವಾಹನ ನಿಲ್ಲಿಸುವವರಿಗೆ ಖಡಕ್ ಎಚ್ಚರಿಕೆ ನೀಡಿದರು.
ರಸ್ತೆಗಳ ಮೇಲೆ ನಿಲ್ಲಿಸಿದ ವಾಹನಗಳನ್ನು ಟೋಯಿಂಗ್ ಮಾಡುತ್ತೇವೆ. 21 ದಿನಗಳಲ್ಲಿ ಆ ವಾಹನಗಳನ್ನು ಹರಾಜು ಹಾಕುತ್ತೇವೆ ಎಂದು ಸ್ಪಷ್ಟಪಡಿಸಿದರು.
ಜನಾಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ 2022ರ ಫೆಬ್ರವರಿಯಲ್ಲಿ ಟೋಯಿಂಗ್ ಬಂದ್ ಆಗಿತ್ತು. ಕೆಲವು ಹೊಸ ನಿಯಮ, ಗೈಡ್ ಲೈನ್ಸ್ನೊಂದಿಗೆ ಟೋಯಿಂಗ್ ಪ್ರಾರಂಭಿಸಲಾಗುವುದು ಎಂದು ಈ ಹಿಂದಿನ ಸರ್ಕಾರ ಹೇಳಿತ್ತು. ಆದರೆ, ಮತ್ತೆ ಟೋಯಿಂಗ್ ಪ್ರಾರಂಭವಾಗಿರಲಿಲ್ಲ. ಇದೀಗ ಮತ್ತೆ ಟೋಯಿಂಗ್ ಆರಂಭಿಸುವ ಬಗ್ಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW