ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಹೋಬಳಿಯ ಹೂವಿನಹಳ್ಳಿ ಗ್ರಾಮದ ವಸಂತರಾಜ್ ಅವರು ಸೇನೆಯಲ್ಲಿ ಸುಬೇದಾರ್ ಹಾಗಿ ಕೆಲಸ ಮಾಡುತ್ತಿದ್ದು, ಶುಕ್ರವಾರ ಅಪಘಾತದಲ್ಲಿ ನಿಧನರಾಗಿದ್ದಾರೆ.
ತಾಯಿ ನಾಡಿಗೆ 25 ವರ್ಷಗಳ ಸೇವೆ ಸಲ್ಲಿಸಿರುವ ಇವರು ಇನ್ನೂ ಎರಡು ವರ್ಷ ಸೇವೆಯನ್ನು ಸಲ್ಲಿಸಬೇಕಿತ್ತು. ಆದರೆ ಧಾರವಾಡ ಹೈವೆಯಲ್ಲಿ ಶುಕ್ರವಾರ ಲಾರಿ ಮತ್ತು ಕಾರು ಅಪಘಾತದಲ್ಲಿ ವೀರ ಮರಣವನ್ನು ಹೊಂದಿದ್ದಾರೆ. ಅವರ ಅಂತ್ಯ ಸಂಸ್ಕಾರ ಮೃತರ ಗ್ರಾಮವಾದ ಹೂವಿನಹಳ್ಳಿಯಲ್ಲಿ ನಡೆಯಿತು.
ಇನ್ನೂ ಅಗಲಿದ ವೀರಯೋಧ ವಸಂತರಾಜ್ ಅವರ ಅಂತಿಮ ದರ್ಶನ ಪಡೆದ ಸಮಾಜ ಸೇವಕ ಜಿ ಡಿ ಪಾಳ್ಯಮಧು , ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.
ವರದಿ: ಅಬಿದ್ ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy