ಸರಗೂರು : ಜನಧ್ವನಿ ಸಮುದಾಯ ಬಾನುಲಿ ಕೇಂದ್ರದಲ್ಲಿ ವಿಶೇಷಚೇತನರಿಗಾಗಿ ಸಮಗ್ರ ಆರೈಕೆ, ಬೆಂಬಲ ಮತ್ತು ಚಿಕಿತ್ಸೆ ನೇರ ಫೋನ್ ಇನ್ ಕಾರ್ಯಕ್ರಮ ನಡೆಯಿತು.
ಎಸ್.ವಿ.ವೈ.ಎಮ್ ನ ಜೀವನಾಧಾರ ಆಯ್ಕೆಗಳು ಮತ್ತು ಸಮನ್ವಯತೆಯ ಸಂಯೋಜಕಿ ಮಮತ ಅವರು ಮಾತನಾಡಿ, ವಿಶೇಷ ಚೇತನರನ್ನು ಸಬಲೀಕರಣಗೊಳಿಸುವ ಸಲುವಾಗಿ ತರಬೇತಿ ಮಾಡಲಾಗುತ್ತದೆ. ಹೆಚ್. ಡಿ.ಕೋಟೆ ತಾಲೂಕಿನ ಕೆಂಚನಹಳ್ಳಿ ಗ್ರಾಮದಲ್ಲಿ ತರಬೇತಿ ನಡೆಸಲಾಗುತ್ತದೆ. ಒಟ್ಟು 3 ರೀತಿಯಲ್ಲಿ ವಿಶೇಷ ಚೇತನರಿಗೆ ವೃತ್ತಿಪರ ತರಬೇತಿಯನ್ನು ನೀಡಲಾಗುತ್ತಿದೆ. ವಿಶೇಷ ಚೇತನರು ಈ ತರಬೇತಿಯನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಲ್ಲಿ ಮುಂದಾಗಬೇಕು ಎಂದು ಮನವಿ ಮಾಡಿಕೊಂಡರು.
ಇದೇವೇಳೆ ಸಿ.ಸಿ.ಎಸ್.ಟಿ. ಕಾರ್ಯಕ್ರಮದ ವ್ಯವಸ್ಥಾಪಕರಾದ ಎಂ.ಪಿ. ರಮೇಶ್, ವಿ.ಆರ್.ಎಲ್.ಸಿ ವ್ಯವಸ್ಥಾಪಕ ಪಿ.ಡಿ ನಾಯಕ್ ಹಾಗೂ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ವ್ಯವಸ್ಥಾಪಕ ನಿಂಗರಾಜು ಹಾಗೂ ಇನ್ನಿತರರು ಇದ್ದರು.
ವರದಿ: ಚಂದ್ರಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy