ಕೊರಟಗೆರೆ : ಕರ್ನಾಟಕದಲ್ಲಿ ನಮ್ಮ ಸಂಘಟನೆಯು ಸಮುದಾಯದ ಸಮಸ್ಯೆಗಳಿಗೆ ಹೋರಾಟದ ಮೂಲಕ ನ್ಯಾಯ ದೊರಕಿಸಿ ಕಷ್ಟಗಳಿಗೆ ಸ್ಪಂದಿಸುತ್ತಾ ಬಂದಿದೆ, ಆಹಾರ ಮತ್ತು ನಾಗರಿಕ ಖಾತೆ ಸಚಿವ ಮತ್ತು ಕರ್ನಾಟಕ ಮಾದರ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಹೆಚ್ಮುನಿಯಪ್ಪನವರ ಮಾರ್ಗದರ್ಶನದಲ್ಲಿ ಸಂಘಟನೆ ಚಟುವಟಿಕೆಗಳು ಯಶಸ್ವಿಯಾಗಿ ನಡೆಯುತ್ತಿದೆ ಎಂದು ಕರ್ನಾಟಕ ಮಾದರ ಮಹಾಸಭಾ (ರಿ) ನೂತನ ತಾ.ಅಧ್ಯಕ್ಷ ಸಿದ್ದೇಶ್ ಟಿ.ಸಿ (ವಿಭೂತಿ ಸಿದ್ದಪ್ಪ) ತಿಳಿಸಿದರು.
ಕರ್ನಾಟಕ ಮಾದರ ಮಹಾಸಭಾ ತಾ.ಘಟಕ ಕೊರಟಗೆರೆ ಇವರ ವತಿಯಿಂದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಳ್ಳಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಸಂಘಟನೆ ೨೦೧೫ ರಿಂದಲೂ ಸಕ್ರಿಯವಾಗಿ ಕಾರ್ಯನಿರ್ವಹಿಸಿಕೊಂಡು ಬಂದಿದೆ. ರಾಜ್ಯಾಧ್ಯಕ್ಷರ ಸೂಚನೆಯಂತೆ ತಾ.ಘಟಕದ ನೂತನ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ ಎಂದು ತೋವಿನಕೆರೆಯ ವಿಭೂತಿ ಸಿದ್ದಪ್ಪ ಹೇಳಿದರು.
ಸಮುದಾಯ ಅಭಿವೃದ್ಧಿ ನಿಟ್ಟಿನಲ್ಲಿ ಸುಮಾರು ಎರಡು ಸಾವಿರ ಸದಸ್ಯರನ್ನು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕಮಿಟಿ ಮತ್ತು ರಾಜ್ಯ ಕಮಿಟಿ ಸೂಚಿಸಿದೆ. ತಾ.ಘಟಕ ಜವಬ್ದಾರಿ ಹೊತ್ತು ಸದಸ್ಯರ ಜೊತೆಗೂಡಿ ಹೋಬಳಿವಾರು ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಸದಸ್ಯರ ಸೇರ್ಪಡೆ ಕಾರ್ಯಾಗಾರ ಈಗಾಗಲೇ ಆರಂಭವಾಗಿದೆ ಎಂದು ಹೇಳಿದರು.
ಜಿಲ್ಲಾ ಸಮಿತಿ ಸದಸ್ಯ ದಾಡಿ ವೆಂಕಟೇಶ್ ಮಾತನಾಡಿ, ಜಿಲ್ಲಾಧ್ಯಕ್ಷ ವೈ.ಎಚ್.ಹುಚ್ಚಯ್ಯನವರ ಮಾರ್ಗಸೂಚಿಯಂತೆ ತಾ.ಘಟಕಕ್ಕೆ ನೂತನ ಪಧಾದಿಕಾರಿಗಳನ್ನು ಆಯ್ಕೆ ಮಾಡಿದೆ. ಮಾದರ ಮಹಾಸಭಾ ರಾಜ್ಯ ಸಮಿತಿ, ಜನಾಂಗದ ಅಭಿವೃದ್ಧಿಗಾಗಿ ನೊಂದಾಯಿತ ಮಹಾಸಭಾ. ಒಳ ಮೀಸಲಾತಿ ಹೋರಾಟ ಈಗಾಗಲೇ ತಾರ್ಕಿಕ ಅಂತ್ಯ ಕಂಡಿದೆ. ಸುಪ್ರಿಂಕೋರ್ಟ್ ಆದೇಶದಂತೆ ಒಳಮೀಸಲಾತಿ ಜಾರಿಯಾಗಿದೆ, ರಾಜ್ಯಪಾಲರು ಒಳಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ತೆಗೆದುಕೊಂಡ ತೀರ್ಮಾನವನ್ನು ನಾವೆಲ್ಲರೂ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಕಾರ್ಯದರ್ಶಿ ಲಕ್ಷ್ಮಿನರಸಯ್ಯ ಮಾತನಾಡಿ, ಮಾದಿಗ ಜನಾಂಗವನ್ನು ಒಗ್ಗೂಡಿಸಿ ಶಿಕ್ಷಣ, ಸಂಘಟನೆ, ಹೋರಾಟ, ಅರಿವನ್ನು ಮೂಡಿಸಿಕೊಂಡು ಬಂದಿದೆ. ಸಮುದಾಯ ಮಕ್ಕಳ ಶಿಕ್ಷಣಕ್ಕೆ ಸರ್ಕಾರದಿಂದ ವಿಶೇಷ ಸೌಲಭ್ಯಗಳನ್ನು ಕೊಡಿಸುವಂತಹ ನಿಟ್ಟಿನಲ್ಲಿ ಈ ಸಂಘಟನೆ ಪ್ರಾರಂಭಗೊಂಡಿದೆ. ರಾಜ್ಯದ ಗ್ರಾಮೀಣ ಪ್ರದೇಶ ಜನರು ಹೆಚ್ಚು ಹೆಚ್ಚಾಗಿ ಸಂಘದ ಸದಸ್ಯರಾಗಿ ಸೇರ್ಪಡೆಗೊಂಡು ಸಂಘಟನೆ ಇನ್ನಷ್ಟು ಬಲಪಡಿಸಬೇಕಿದೆ ಎಂದರು.
ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದಗಂಗಯ್ಯ ಮಾತನಾಡಿ, ರಾಜ್ಯದಲ್ಲಿ ಅತಿಹೆಚ್ಚು ಜನಸಂಖೈ ಹೊಂದಿರುವ ಮಾದಿಗ ಸಮುದಾಯ ತಲಾ ತಲಾಂತರದಿಂದ ಮೇಲ್ವರ್ಗದ ಸಮುದಾಯದ ತುಳಿತಕ್ಕೆ ಒಳಗಾಗಿ ಆರ್ಥಿಕ ಮತ್ತು ಶೈಕ್ಷಣಿಕವಾಗಿ ಹಿಂದೆ ಉಳಿದಿದೆ. ಸಂವಿಧಾನ ಜಾರಿಗೆ ಬಂದ ದಿನಗಳಿಂದ ಸಮುದಾಯ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕತೆಯಲ್ಲಿ ಸುಧಾರಣೆ ಕಂಡಿದೆ ಎಂದರು.
ಪದಾಧಿಕಾರಿಗಳ ಆಯ್ಕೆ: ರಾಜ್ಯಾಧ್ಯಕ್ಷ ಕೆ.ಎಚ್ ಮುನಿಯಪ್ಪ ಆದೇಶದಂತೆ ಜಿಲ್ಲಾದ್ಯಕ್ಷ ವೈ.ಎಚ್.ಹುಚ್ಚಯ್ಯನವರ ಅನುಮೋದನೆಯಂತೆ ಮಾದರ ಮಹಾಸಭಾ ತಾ.ಘಟಕಕ್ಕೆ ನೂತನ ಅಧ್ಯಕ್ಷರಾಗಿ ಸಿದ್ದೇಶ್ ಟಿ.ಸಿ (ವಿಭೂತಿ ಸಿದ್ದಪ್ಪ) ಅಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ದಾಸರಹಳ್ಳಿ ಮಂಜುನಾಥ್, ಕಾರ್ಯದರ್ಶಿಯಾಗಿ ಆರ್.ಲಕ್ಷ್ಮಿನರಸಯ್ಯ, ಖಚಾಂಚಿ ವೀರಕ್ಯಾತರಾಯ, ಸಂಘಟನಾ ಕಾರ್ಯದರ್ಶಿ ಸಿದ್ದೇಶ್, ಕಸಬಾ ಹೋಬಳಿ ಅಧ್ಯಕ್ಷ ರಂಗನಾಥ್, ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಹನುಮಂತರಾಜು, ಸಿ.ಎನ್ ದುರ್ಗಾ ಹೋಬಳಿ ಅಧ್ಯಕ್ಷ ದೊಡ್ಡಯ್ಯ, ಕೋಳಾಲ ಹೋಬಳಿ ಅಧ್ಯಕ್ಷ ಸಿದ್ದಲಿಂಗಯ್ಯ, ಕಾರ್ಯಕಾರಿ ಸಮಿತಿ ಶಿವರಾಮ್ ಡಿ.ಎಲ್, ದೊಡ್ಡಯ್ಯ ಬಿ.ಎಸ್, ಮಾರುತಿ ಎನ್.ಸಿ ಒಳಗೊಂಡಂತೆ ಸಲಹಾ ಸಮಿತಿ ಸದಸ್ಯರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಸಮಿತಿ ಸದಸ್ಯ ದಾಡಿ ವೆಂಕಟೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕಸಬಾ ಹೋಬಳಿ ಅಧ್ಯಕ್ಷ ರಂಗನಾಥ್, ಹೊಳವನಹಳ್ಳಿ ಹೋಬಳಿ ಅಧ್ಯಕ್ಷ ಹನುಮಂತರಾಜು, ಸಿ.ಎನ್ ದುರ್ಗಾ ಹೋಬಳಿ ಅಧ್ಯಕ್ಷ ದೊಡ್ಡಯ್ಯ, ಕೋಳಾಲ ಹೋಬಳಿ ಅಧ್ಯಕ್ಷ ಸಿದ್ದಲಿಂಗಯ್ಯ, ಶಿವರಾಮಯ್ಯ, ಮಂಜುನಾಥ್ ಕೆ.ಆರ್, ಸಿದ್ದಗಂಗಯ್ಯ, ವೀರಕ್ಯಾತರಾಯ, ಹನುಮಂತರಾಯಪ್ಪ, ರಂಗನಾಥ್, ಸುಬ್ಬರಾಯ್, ಕೃಷ್ಣಪ್ಪ, ಮಾರುತಿ ಎನ್.ಸಿ., ಶಿವದರ್ಶನ್, ಸುರೇಶ್, ರಾಮಾಂಜಿನಯ್ಯ, ಭೀಮರಾಜ್ ಸೇರಿದಂತೆ ಇತರರು ಇದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


