nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026
    Facebook Twitter Instagram
    ಟ್ರೆಂಡಿಂಗ್
    • ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ
    • ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು
    • ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ
    • ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!
    • ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
    • ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
    • ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
    • ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಧಾನಸಭೆ ಕಲಾಪ ವ್ಯರ್ಥ, ಮುಂದೂಡಿಕೆ; ಮಾರ್ಚ್ 4ಕ್ಕೆ ಬಜೆಟ್ ಅಧಿವೇಶನ
    Uncategorized February 23, 2022

    ವಿಧಾನಸಭೆ ಕಲಾಪ ವ್ಯರ್ಥ, ಮುಂದೂಡಿಕೆ; ಮಾರ್ಚ್ 4ಕ್ಕೆ ಬಜೆಟ್ ಅಧಿವೇಶನ

    By adminFebruary 23, 2022No Comments2 Mins Read
    basavaraj bommai

    ಮಾರ್ಚ್ 4ಕ್ಕೆ ಮತ್ತೆ ಅಧಿವೇಶನ(Karnataka Assembly Session) ಪ್ರಾರಂಭವಾಗಲಿದೆ. ಇದರ ಬಗ್ಗೆ ಪೂರ್ವ ತಯಾರಿಗಳನ್ನು ನಡೆಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ತಿಳಿಸಿದ್ದಾರೆ.
    ಸಮಯ-ಹಣ ವ್ಯರ್ಥ; ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆಯಿಲ್ಲ!

    ಸದನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ಆಗಬೇಕಾಗಿತ್ತು. ಪ್ರತಿಭಟನೆಯಿಂದಾಗಿ ಸದನವನ್ನು ಮೊಟಕುಗೊಳಿಸಬೇಕಾಯಿತು. ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ, ನೆರೆ ಹಾಗೂ ಬೆಳೆ ಪರಿಹಾರದ ವಿತರಣೆ ಬಗ್ಗೆ ಚರ್ಚೆ ಆಗಬೇಕಿತ್ತು. ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆಯೇ ಆಗದೆ ರಾಜಕೀಯ ನಾಯಕರು ಸಮಯ ಮತ್ತು ಹಣ ವ್ಯರ್ಥ ಮಾಡಿದ್ದಾರೆ.


    Provided by
    Provided by

    ಕಲಾಪದಲ್ಲಿ ‘ಕೈ’ ನಾಯಕರ ಅಹೋರಾತ್ರಿ ಧರಣಿ

    ಈ ಭಾರಿಯ ಜಂಟಿ ಅಧಿವೇಶನ ಕೇವಲ ಕಾಂಗ್ರೆಸ್ ಶಾಸಕರ ಧರಣಿಯಿಂದ ಕೂಡಿತ್ತು. ಸಚಿವ ಈಶ್ವರಪ್ಪ(KS Eshwarappa)ನವರ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಶಾಸಕರು ಹಾಗೂ ಪರಿಷತ್ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದರು. ಈ ಮೂಲಕ ಸದನದ ಕಲಾಪ ನಡೆಯಲು ಬಿಡದೆ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದರು.

    ಕಾಂಗ್ರೆಸ್ ನಡೆಸಿದ ಈ ಧರಣಿಗೆ ಆಡಳಿತ ಪಕ್ಷದ ನಾಯಕರು ಸೇರಿದಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ(Vishweshwar Hegde Kageri) ಕೂಡ ಆಕ್ಷೇಪ ವ್ಯಕ್ತಪಡಿಸಿದರು. ಮಂಗಳವಾರ ಉಭಯ ಸದನಗಳ ಕಲಾಪ ಮುಂದೂಡಿಕೆ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ, ‘ಶುಕ್ರವಾರದವರೆಗೂ ಸದನ ನಡೆಯಬೇಕಿತ್ತು, ಆದರೆ ಇವತ್ತೇ ಮೊಟಕುಗೊಳಿಸಬೇಕಾಯಿತು. ಬೇರೆ ಸಮಯದಲ್ಲಿ ಸದನ ಕರೆಯಿರಿ ಅಂತಾರೆ, ಕರೆದರೆ ಚರ್ಚೆಯನ್ನೇ ಮಾಡುವುದಿಲ್ಲ’ವೆಂದು ವಿಪಕ್ಷ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದರು.

    ಮುಂದೊಂದು ದಿನ ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜದ ಬದಲು ಕೇಸರಿ ಧ್ವಜ ಹಾರಿಸುತ್ತೇವೆಂಬ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸದನದಲ್ಲಿ ಸತತ 5 ದಿನಗಳ ಕಾಲ ಅಹೋರಾತ್ರಿ ಧರಣಿ ನಡೆಸಿತು. ಈಶ್ವರಪ್ಪ ವಿರುದ್ಧ ರಾಷ್ಟ್ರದ್ರೋಹ ಆರೋಪ ಪ್ರಕರಣ ದಾಖಲಿಸಬೇಕು ಹಾಗೂ ಮಂತ್ರಿಮಂಡಲದಿಂದ ವಿಸರ್ಜನೆ ಮಾಡಬೇಕು ಎಂದು ಆಗ್ರಹಿಸಿ ‘ಕೈ’ನಾಯಕರು ಧರಣಿ ನಡೆಸಿದರು.

    ಧರಣಿ ಮಧ್ಯೆಯೂ ಬಿಲ್ ಪಾಸ್; ಮಂತ್ರಿ, ಶಾಸಕರ ಭತ್ಯೆ ಹೆಚ್ಚಳ

    ಆರೋಗ್ಯಕರ ಚರ್ಚೆಗೆ ಅವಕಾಶ ನೀಡದ ಕಾಂಗ್ರೆಸ್ ಧರಣಿಯ ಮಧ್ಯೆಯೂ ಕರ್ನಾಟಕ ವಿಧಾನಮಂಡಲದವರ ಸಂಬಳಗಳು, ನಿವೃತ್ತಿ ವೇತನಗಳು ಮತ್ತು ಭತ್ಯೆಗಳ (ತಿದ್ದುಪಡಿ) ವಿಧೇಯಕ-2022 ಮಂಡನೆ ಮಾಡುವ ಮೂಲಕ ಸಿಎಂ ಸೇರಿದಂತೆ ಮಂತ್ರಿಗಳು, ಶಾಸಕರು ತಮ್ಮ ಭತ್ಯೆಯನ್ನು ಹೆಚ್ಚಳ ಮಾಡಿಕೊಂಡರು. ಇದರಿಂದ ಅಂದಾಜು ಶೇ.50ರಷ್ಟು ಭತ್ಯೆ ಹೆಚ್ಚಳವಾದಂತಾಗಿದೆ. ಇದಲ್ಲದೆ ಕ್ರಿಮಿನಲ್ ಕಾನೂನು ತಿದ್ದುಪಡಿ, ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕಗಳಿಗೆ ಅನುಮೋದನೆ ಪಡೆಯಲಾಯಿತು.

    ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್(DK Shivakumar) ಹಿರಿಯರು. ಅವರ ಅನುಭವ ಎಲ್ಲಿ ಹೊಯಿತು? ರಾಜಕಾರಣದ ಮುಸುಕು ಅವರ ಮುಖದ ಮೇಲೆ ಬಿದ್ದಿದೆ. ಖಂಡಿತವಾಗಿ ಮುಂದೆ ಅವರಿಗೆ ರಾಜಕೀಯ ಭವಿಷ್ಯವಿಲ್ಲ. ಆಡಳಿತ ಪಕ್ಷವಾಗಿ ಅವರು ವಿಫಲವಾಗಿದ್ರು, ರಾಜ್ಯದ ಜನರು ಅವರನ್ನು ತಿರಸ್ಕರಿಸಿದ್ದರು. ಈಗ ವಿಪಕ್ಷವಾಗಿಯೂ ಅವರು ವಿಫಲವಾಗಿದ್ದಾರೆ ಅಂತಾ ಬೊಮ್ಮಾಯಿ ಕಿಡಿಕಾರಿದರು.

    ಈಶ್ವರಪ್ಪನವರ ಹೇಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ(JP Nadda) ಖಂಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಪ್ರತಿಭಟನೆ ಸರಿ ಇದೆ ಎಂದು ‘ಕೈ’ ನಾಯಕರು ಹೇಳುತ್ತಿದ್ದಾರೆ. ಹೀಗಾಗಿ ಯಾವುದೇ ಕಾರಣಕ್ಕೂ ಈಶ್ವರಪ್ಪ ಹೇಳಿಕೆಯನ್ನು ಸೈಡ್ ಲೈನ್ ಮಾಡಬಾರದು, ಜಿಲ್ಲಾ ಮಟ್ಟದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಒಳ ಮೀಸಲಾತಿ ಜಾರಿಗೆ ಆಗ್ರಹ: ಮಾದರ ಮಹಾಸಭಾವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ

    March 10, 2026

    ಕೊರಟಗೆರೆ: ಸುಪ್ರೀಂ ಕೋರ್ಟ್ ಆದೇಶವಿದ್ದರೂ ಒಳ ಮೀಸಲಾತಿ ಜಾರಿಗೊಳಿಸದೆ, ಹಳೆಯ ಪದ್ಧತಿಯಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು…

    ಔರಾದ್: ಶಿವಾಜಿ ಮಹಾರಾಜರ ಮೂರ್ತಿ ನಿರ್ಮಾಣಕ್ಕೆ ಭೀಮಸೇನರಾವ್ ಸಿಂದೆ ₹2.50 ಲಕ್ಷ ಆರ್ಥಿಕ ನೆರವು

    March 10, 2026

    ತುಮಕೂರು: ರೈತರ ಭೂಸ್ವಾಧೀನ ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ

    March 10, 2026

    ಮಧುಗಿರಿ: ಅಪ್ರಾಪ್ತೆಯ ಮದುವೆಗೆ ಬ್ರೇಕ್: ಪೊಲೀಸರು ಬರುವಷ್ಟರಲ್ಲಿ ವಧು-ವರ ಎಸ್ಕೇಪ್!

    March 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.