ಕೊರಟಗೆರೆ: ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಂಡೋಣಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ ಅವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸುರಕ್ಷತಾ ಇಲಾಖೆ ಮತ್ತು ಉಪ ನಿರ್ದೇಶಕರ ಕಚೇರಿ ಮಧುಗಿರಿ ಶೈಕ್ಷಣಿಕ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮತ್ತು ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಾರ್ಯಾಲಯ ಕೊರಟಗೆರೆ ಸಮೂಹ ಸಂಪನ್ಮೂಲ ಕೇಂದ್ರ ಬೂದುಗವಿ, ಬೂದಗವಿ ಗ್ರಾಮ ಪಂಚಾಯಿತಿ ಇವರ ಸಂಯುಕ್ತಶ್ರಯದಲ್ಲಿ 2022-23 ನೇ ಸಾಲಿನ ಬೂದಗವಿ ಕ್ಲಸ್ಟರ್ ಹಂತದ ಕಲಿಕಾ ಹಬ್ಬವನ್ನು ಇಂದು ಆಯೋಜಿಸಲಾಗಿತ್ತು.
ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ಇ ಸಿ ಓ ಕಾಮರಾಜು ಮತ್ತು ಎಸ್ ಟಿ ಎಂ ಸಿ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯಿತಿ ಸದಸ್ಯರು ಉದ್ಘಾಟಿಸಿದರು.
ಶಿಕ್ಷಣ ಇಲಾಖೆಯ ಮಂಜುಳಾ ಈ ವೇಳೆ ಮಾತನಾಡಿ, ಕೊರೊನಾ ಸಂದರ್ಭದಲ್ಲಿ ಮಕ್ಕಳಿಗೆ ಶಿಕ್ಷಣದ ಕೊರತೆ ಹೆಚ್ಚಾಗಿ ಕಾಡುತ್ತಿತ್ತು. ಅಂತಹ ಸಂದರ್ಭದಲ್ಲಿಯೂ ಶಿಕ್ಷಕರು ತುಂಬಾ ಶ್ರಮವಹಿಸಿ ಮಕ್ಕಳಿಗೆ ಯಾವುದೇ ಕಾರಣಕ್ಕೂ ತೊಂದರೆ ಆಗದಂತೆ ಶಿಕ್ಷಣ ನೀಡಿದ್ದಾರೆ. ಕಲಿಕೆಯಲ್ಲಿ ಹಿಂದೆ ಉಳಿದಿದ್ದ ಮಕ್ಕಳಿಗೆ ಪರಿಹಾರ ಬೋಧನೆಯಂತಹ ಕಾರ್ಯಕ್ರಮಗಳನ್ನೂ ಅಳವಡಿಸಿ ಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಶಾಲಾ ಶಿಕ್ಷಕ ನಾಗರಾಜು ಮಾತನಾಡಿ, 2022–23 ನೇ ಸಾಲಿನ ಕ್ಲಸ್ಟರ್ ಹಂತದ ಕಲಿಕಾ ಹಬ್ಬದ ಕಾರ್ಯಕ್ರಮಗಳು ಯಶಸ್ಸಿನತ್ತ ಸಾಗಿವೆ ಈ ಕಾರ್ಯಕ್ರಮಕ್ಕೆ ಕಳೆದ ಮೂರು ನಾಲ್ಕು ದಿನಗಳಿಂದ ಬಹಳ ಶ್ರಮವಹಿಸಿ ಕಾರ್ಯಕ್ರಮವನ್ನು ಯಶಸ್ಸಿನತ್ತ ಕೊಂಡೊಯ್ಯುತ್ತಿರುವ ನಮ್ಮೆಲ್ಲ ಶಿಕ್ಷಕರಿಗೆ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಕೇಂದ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳಾದ ಮೋಹನ್ ಚಾರ್, ಇ ಸಿ ಓ ಕಾಮರಾಜು, ಪರಮೇಶ್ವರ್, ಬೂದಗವಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಆಖಂಡರಾದ್ಯ ಸದಸ್ಯರಾದ ರವಿಕುಮಾರ್, ನಾಗಮಣಿ, ಆಯುಷ್ ಇಲಾಖೆಯ ಡಾಕ್ಟರ್ ಭವ್ಯ, ಶಿಕ್ಷಕರಾದ ಗ್ರಾಮಸ್ಥರಾದ ರಂಗನಾಥ್, ಸಿದ್ದರಾಜು,ಮಂಗಳ, ರಮೇಶ್,ನಾಗರಾಜು, ಇತರೆ ಶಿಕ್ಷಕರುಗಳು ಮತ್ತು ಸಾರ್ವಜನಿಕರು ವಿದ್ಯಾರ್ಥಿಗಳು ಹಾಜರಿದ್ದರು.
ವರದಿ: ಮಂಜುಸ್ವಾಮಿ. ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy