ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಕ್ಯಾತಗಾನಹಳ್ಳಿ ಗ್ರಾಮದ ರಂಗಪ್ಪನ ಮಗ ಮಹೇಶ್ ಎನ್ನುವ 35 ವರ್ಷದ ರೈತ ನಿನ್ನೆ ಸಂಜೆ ಮನೆಯಿಂದ ತನ್ನ ತೋಟಕ್ಕೆ ಹೋಗಿ ಬರುವುದಾಗಿ ತಿಳಿಸಿ ಹೊರಟಿದ್ದ ಮಹೇಶ್ ರಾತ್ರಿ 8ಗಂಟೆಯಾದರೂ ಮನೆಗೆ ಬರಲಿಲ್ಲ .
ಮಹೇಶ್ ಪತ್ನಿ ಅನೇಕ ಬಾರಿ ಮಹೇಶ್ ಫೋನ್ ಗೆ ಕರೆ ಮಾಡಿದರೂ ಫೋನ್ ಸ್ವೀಕರಿಸದ ಕಾರಣ ಅನುಮಾನಗೊಂಡ ಕುಟುಂಬಸ್ಥರು . ತೋಟದ ಕಡೆ ಹುಡುಕಾಟ ನಡೆಸಿದ್ದು, ಅವರಿಗೆ ಅಕ್ಕಪಕ್ಕದ ಮನೆಯವರೂ ಹುಡುಕಾಟಕ್ಕೆ ಸಹಕಾರ ಮಾಡಿದ್ದಾರೆ. ತೋಟದ ಬಳಿ ಹೋಗಿ ನೋಡಿದಾಗ ಮಹೇಶ್ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವುದು ಕಂಡು ಬಂದಿತ್ತು.
ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಬೆಸ್ಕಾಂ ಇಲಾಖೆಗೆ ಫೋನ್ ಮಾಡಿ ವಿಷಯ ಮುಟ್ಟಿಸಿದ್ದಾರೆ ವಿಷಯ ತಿಳಿದ ಕೋಳಾಲ ಬೆಸ್ಕಾಂ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಬರದೆ ಕರ್ತವ್ಯ ಲೋಪ ಹಾಗೂ ನಿರ್ಲಕ್ಷ್ಯತನ ತೋರಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಮಹೇಶ್ ಮದುವೆಯಾಗಿ ವರ್ಷ ಕೂಡ ಕಳೆದಿಲ್ಲ ಇದಕ್ಕೆಲ್ಲ ಕಾರಣ ಬೆಸ್ಕಾಂ ಇಲಾಖೆ ಅಧಿಕಾರಿಗಳೆಂದು ಮಹೇಶ್ ಸ್ನೇಹಿತರು ಹಾಗೂ ಸ್ಥಳೀಯ ರೈತರು ಬೆಸ್ಕಾಂ ಇಲಾಖೆ ವಿರುದ್ಧ ಹರಿಹಾಯ್ದರು.
ಬೆಳಿಗ್ಗೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ತಾಲ್ಲೂಕು ದಂಡಾಧಿಕಾರಿ ಹಾಗೂ ಕೊರಟಗೆರೆ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ರೈತರಿಗೆ ತಿಳಿಸಿದ್ದಾರೆ. ಇನ್ನಾದರೂ ಬೆಸ್ಕಾಂ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳುತ್ತಾರಾ ಕಾದು ನೋಡಬೇಕಾಗಿದೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz