nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026
    Facebook Twitter Instagram
    ಟ್ರೆಂಡಿಂಗ್
    • ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್
    • ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್
    • ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ
    • ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?
    • ಖಮೇನಿ  ಹತ್ಯೆ ಹಿನ್ನೆಲೆ ನಿಯಮ ಉಲ್ಲಂಘಿಸಿ ಪ್ರತಿಭಟನೆ ನಡೆಸುವವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಜಿ.ಪರಮೇಶ್ವರ್ ಎಚ್ಚರಿಕೆ
    • ಚಿಕ್ಕನಾಯಕನಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಲು ಶಾಸಕ ಸುರೇಶ್‌ ಬಾಬು ಸೂಚನೆ
    • ನಾಪತ್ತೆಯಾಗಿದ್ದ ಬೆಳ್ಳಾವಿ ಕಾರದೇಶ್ವರ ಮಠದ ಶ್ರೀಗಳು ಪತ್ತೆ: ಸ್ವಾಮೀಜಿ ಹೋಗಿದ್ದೆಲ್ಲಿಗೆ?
    • ತುಮಕೂರು: ಭೀಮಸಂದ್ರದಲ್ಲಿ ಹೊಸ ಸೇತುವೆ ನಿರ್ಮಾಣಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಪ್ರಾಣ ಬಿಟ್ಟ ಕಾಡಾನೆ
    ಜಿಲ್ಲಾ ಸುದ್ದಿ January 14, 2023

    ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಪ್ರಾಣ ಬಿಟ್ಟ ಕಾಡಾನೆ

    By adminJanuary 14, 2023No Comments1 Min Read
    saraguru

    ಸರಗೂರು: ಮೇವು ಅರಸಿ ಕಾಡಿನಿಂದ ಹೊರ ಬಂದ ಹೆಣ್ಣಾನೆಯೊಂದು ಕಾಡು ಪ್ರಾಣಿಗಳ ಹಾವಳಿ ತಡೆಗೆ ಜಮೀನಿನಲ್ಲಿ ಅಕ್ರಮವಾಗಿ ಅಳವಡಿಸಿದ್ದ ವಿದ್ಯುತ್ ತಂತಿಗೆ ಸಿಲುಕಿ ಮೃತಪಟ್ಟಿದೆ.

    ತಾಲೂಕಿನ ದೊಡ್ಡಬರಗಿ ಗ್ರಾಮದ ಗೋಪಾಲ ಎಂಬುವರು  ತಮ್ಮ ಜಮೀನಿನಲ್ಲಿ ಅಕ್ರಮವಾಗಿ  ವಿದ್ಯುತ್ ತಂತಿ ಬೇಲಿ ಅಳವಡಿಸಿದ್ದು, ಗುರುವಾರ ರಾತ್ರಿ ಮೇವು ಅರಸಿ ಬಂದ ಕಾಡಾನೆಗೆ ವಿದ್ಯುತ್ ತಂತಿ ತಗುಲಿ ಸಿಲುಕಿಕೊಂಡಿದೆ. ಇದರಿಂದ ಗಾಬರಿಗೊಂಡ ಆನೆ  ಬಿಡಿಸಿಕೊಳ್ಳಲು ಪ್ರಯತ್ನಿಸಿದರೂ ವಿಫಲವಾಗಿದ್ದು, ಸ್ಥಳದಲ್ಲೆ ಸಾವನ್ನಪ್ಪಿದೆ ಎನ್ನಲಾಗಿದೆ.


    Provided by
    Provided by

    saraguru

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಹೆಡಿಯಾಲ ಉಪ ವಿಭಾಗದ ಹೆಡಿಯಾಲ ವಲಯ ಅಂಚಿನಲ್ಲಿರುವ ಸರಗೂರು ಪ್ರಾದೇಶಿಕ ವಲಯ ವ್ಯಾಪ್ತಿಯ ಚಿಕ್ಕಬರಗಿ ಶಾಖೆಯ ಹೆಬ್ಬಳ್ಳ ಗಸ್ತಿನ  ದೊಡ್ಡಬರಗಿ ಗ್ರಾಮದ  ಜಮೀನಿನಲ್ಲಿ  ಸುಮಾರು 25ರಿಂದ 30 ವರ್ಷ ವಯಸ್ಸಿನ ಹೆಣ್ಣು ಕಾಡಾನೆಯೊಂದು ವಿದ್ಯುತ್ ತಂತಿಗೆ ಸಿಲುಕಿ ಸಾವನ್ನಪ್ಪಿದ ವಿಷಯ ತಿಳಿದ ಕೂಡಲೇ ಅರಣ್ಯಾಧಿಕಾರಿಗಳು  ಸ್ಥಳಕ್ಕೆ ಭೇಟಿ ನೀಡಿ ನೋಡಿದಾಗ ಹೆಣ್ಣು ಕಾಡಾನೆಯೊಂದು ವಿದ್ಯುತ್ ತಂತಿ ಸ್ಪರ್ಶಿಸಿ ಸಾವನ್ನಪ್ಪಿರುವುದು  ಕಂಡು ಬಂದಿದೆ. ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲಾಯಿತು.

    ನಂತರ ಮೃತ ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿ, ದೇಹದ ಕೆಲ ಭಾಗದ ತುಂಡುಗಳನ್ನು  ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಸ್ಥಳದಲ್ಲೇ ಹೆಣ್ಣು ಕಾಡಾನೆ ಮೃತದೇಹವನ್ನು ಗುಂಡಿಯನ್ನು ತೆಗೆದು ಹೂಳಲಾಯಿತು. ಈ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ದ ಕ್ಷೇತ್ರ ನಿರ್ದೇಶಕ, ಅರಣ್ಯ ಸಂರಕ್ಣಣಾಧಿಕಾರಿ ಡಾ.ರಮೇಶ್ ಕುಮಾರ್,  ಪಶು ವೈದ್ಯಾಧಿಕಾರಿ ಡಾ.ವಾಸೀಂ ಮಿರ್ಜಾ, ಎಸಿಎಫ್ ಪರಮೇಶ್,   ಹೆಡಿಯಾಲ ವಲಯ ಅಧಿಕಾರಿ ನಾರಾಯಣ್, ಸೆಸ್ಕಾಂ ಅಧಿಕಾರಿಗಳು‌, ಪೊಲೀಸರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ಮನುಕುಲದ ಉದ್ದಾರವೇ ಶ್ರೇಷ್ಟವೆಂದು ಕೈವಾರ ತಾತಯ್ಯ ನಂಬಿದ್ದರು: ಎಸ್.ಎನ್.ಚನ್ನಬಸಪ್ಪ

    March 4, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚುನಾವಣೆಗೆ ನಿಲ್ಲುತ್ತೇನೋ ಇಲ್ಲವೋ ಗೊತ್ತಿಲ್ಲ, ಸದ್ಯ ಹಾಲು ಮಾರೋ ಕೆಲಸ ಕೊಟ್ಟಿದ್ದಾರೆ:  ಡಿ.ಕೆ.ಸುರೇಶ್

    March 4, 2026

    ರಾಮನಗರ: ಮಾಗಡಿ ತಾಲೂಕಿನ ಚಕ್ರಬಾವಿ ಗ್ರಾಮದಲ್ಲಿ ನಡೆದ ವೈ.ಜಿ. ಗುಡ್ಡ ಏತ ನೀರಾವರಿ ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ…

    ನಾನೇನು ಎಂಬುದು ಸಿಎಂಗೆ ಚೆನ್ನಾಗಿ ಗೊತ್ತಿದೆ: ಡಿ.ಕೆ.ಶಿವಕುಮಾರ್

    March 4, 2026

    ರಾಜ್ಯ ಸರ್ಕಾರಕ್ಕೆ ಫೋನ್ ಕದ್ದಾಲಿಕೆ ಮಾಡುವ ಅಗತ್ಯವಿಲ್ಲ: ಸಚಿವ ರಾಮಲಿಂಗಾ ರೆಡ್ಡಿ

    March 4, 2026

    ವಿದೇಶಿ ಪ್ರವಾಸಕ್ಕೆ ಹೋಗಿದ್ದ ಶಾಸಕರು ವಾಪಸ್: ಯಾರ್ಯಾರು, ಏನೇನು ಅಧ್ಯಯನ ಮಾಡಿದ್ರು ?

    March 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.