ತುಮಕೂರು: ಕೆ.ಎನ್.ರಾಜಣ್ಣ ನಮ್ಮ ಪಕ್ಷದವರಲ್ಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದರು.
ಬೆಳ್ಳಾವಿ ಕಾರದ ಮಠದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯತ್ನಾಳ್ ಗೆ ನೋಟಿಸ್ ಕೊಡೋಕೆ ವಿಜಯೇಂದ್ರಗೆ ತಾಕತ್ ಇಲ್ಲ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಸಂಬಂಧ ಈ ಪ್ರತಿಕ್ರಿಯೆ ನೀಡಿದರು.
ಈಗಾಗಲೇ ಕೇಂದ್ರದ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ನಮ್ಮ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದ ವಿಜಯೇಂದ್ರ ನಕ್ಕು ಸುಮ್ಮನಾದರು.
20ನೇ ತಾರಿಕಿನೊಳಗೆ ಉತ್ತರ ಸಿಗುತ್ತೆ ಅಂತ ಅಂದೇ ಹೇಳಿದ್ದೇನೆ. ಜಿಲ್ಲಾಧ್ಯಕ್ಷರ ನೇಮಕ ಬಳಿಕ ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಯಾವಾಗ ಬೇಕಾದ್ರೂ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲಾ ಶಾಸಕರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡುತ್ತಾರೆ ಎಂದರು.
ಇನ್ನೂ ಒಂಬತ್ತು ವಿವಿಗಳ ಮುಚ್ಚುವ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದೊಂದು ಬಹಳ ದುರದೃಷ್ಟಕರ ವಿಚಾರ. ಬಿಜೆಪಿ ಸರ್ಕಾರದಲ್ಲಿ ಹೊಸ ವಿವಿಗಳಾಗಿದ್ವು. ಅದನ್ನ ಮುಚ್ಚುವಂತ ಕೆಲಸವನ್ನ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಇದಕ್ಕೆ ಕಾರಣ ಮುನ್ನೂರು ನಾಲ್ನೂರು ಕೋಟಿ ಅನುದಾನ ನೀಡ್ಬೇಕಾಗುತ್ತೆ ಅಂತ. ಅನುದಾದನ ನೀಡಿದ್ರೆ ವಿವಿಗಳು ಕೆಲಸ ಮಾಡಲು ಸಾಧ್ಯ. ಈ ನಿರ್ಧಾರ ಕಾಂಗ್ರೆಸ್ ಸರ್ಕಾರಕ್ಕೆ ಶೋಭೆ ತರುವಂತದ್ದಲ್ಲಾ, ಒಳ್ಳೆದು ಅಲ್ಲ, ಇದ್ರಿಂದ ಮಕ್ಕಳಿಗೆ ಅನಾನುಕೂಲವಾಗಲಿದೆ ಎಂದು ಅವರು ಹೇಳಿದರು.
ಈಗಲಾದ್ರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ನಿರ್ಧಾರ ಬದಲಿಸಲಿ. ಗ್ಯಾರಂಟಿಗಳಿಂದ ಎಲ್ಲವೂ ಸಾಧ್ಯ ಆಗ್ತಿಲ್ಲ. ಎಲ್ಲಾ ಬೆಲೆ ಏರಿಕೆಗಳಾಗುತ್ತಿವೆ. ಅನುದಾನವನ್ನೂ ಕೂಡ ಕೊಡುತ್ತಿಲ್ಲ ಎಂದವರು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4