nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026
    Facebook Twitter Instagram
    ಟ್ರೆಂಡಿಂಗ್
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    • ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು
    • ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ
    • ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ
    • ಗಣೇಶ ಚತುರ್ಥಿ ಹಬ್ಬದ ಮಹತ್ವ ಮತ್ತು ಪೂಜಾ ವಿಧಾನ
    • ಗೌರಿ — ಗಣೇಶ ಹಬ್ಬ: ಸಂಭ್ರಮ, ಸಡಗರ ಹಾಗೂ ಪರಿಸರ ಕಾಳಜಿಯ ಹಬ್ಬ
    • ಕೋಳಾಲ ಗ್ರಾಮದಲ್ಲಿ ಪ್ರಜಾಸೇವಾ ಅಭಿಯಾನ: ಜನಸಭೆಯಲ್ಲಿ 150 ಅರ್ಜಿ ಸ್ವೀಕಾರ
    • ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆಯ ಪದಗ್ರಹಣ ಮತ್ತು ಸನ್ಮಾನ ಕಾರ್ಯಕ್ರಮ ಯಶಸ್ವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಂತ್ಯಸಂಸ್ಕಾರವಾಗಿದ್ದ ದಲಿತನ ಮೃತದೇಹಕ್ಕೂ ಹಿಂಸೆ: ಗೃಹ ಸಚಿವರ ತವರಿನಲ್ಲಿ ಅಧಿಕಾರಿಗಳು ಆಡಿದ್ದೇ ಆಟವೇ?
    ತುಮಕೂರು January 6, 2024

    ಅಂತ್ಯಸಂಸ್ಕಾರವಾಗಿದ್ದ ದಲಿತನ ಮೃತದೇಹಕ್ಕೂ ಹಿಂಸೆ: ಗೃಹ ಸಚಿವರ ತವರಿನಲ್ಲಿ ಅಧಿಕಾರಿಗಳು ಆಡಿದ್ದೇ ಆಟವೇ?

    By adminJanuary 6, 2024No Comments3 Mins Read
    tumakuru

    ನಮ್ಮತುಮಕೂರು ವಿಶೇಷ ವರದಿ:

    ತುಮಕೂರು ಜಿಲ್ಲೆಯಲ್ಲಿ ಏನು ನಡೆಯುತ್ತಿದೆ? ದಲಿತರಿಗೆ ಸ್ಮಶಾನ ಇದೆ ಎನ್ನುವ ಜಿಲ್ಲಾಡಳಿತ, ಸ್ಮಶಾನಕ್ಕೆ ಮೂಲಭೂತ ಸೌಕರ್ಯವನ್ನೇ ಒದಗಿಸಿಲ್ಲ. ಒಂದು ಸ್ಮಶಾನಕ್ಕೆ ಮೂಲಭೂತ ಸೌಕರ್ಯ ಒದಗಿಸಲೂ ಸಾಧ್ಯವಾಗದಷ್ಟು ಜಿಲ್ಲಾಡಳಿತ ಗತಿಗೆಟ್ಟು ನಿಂತಿದ್ಯಾ? ಅನ್ನೋ ಪ್ರಶ್ನೆಗಳು ಸೃಷ್ಟಿಯಾಗಿವೆ. ಅಂತ್ಯಸಂಸ್ಕಾರ ಮಾಡಲಾಗಿದ್ದ ಮೃತದೇಹವನ್ನು ಮೃತರ ಕುಟುಂಬಸ್ಥರ ಗಮನಕ್ಕೂ ತಾರದೇ, ಮೃತದೇಹವನ್ನು ಹೊರತೆಗೆದು ಬೆಳ್ಳಂ ಬೆಳ್ಳಗೆ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.  ಮೃತದೇಹವನ್ನು ಸ್ಥಳಾಂತರಿಸಲು ಅಧಿಕಾರಿಗಳು ತೋರಿದ ಆತುರ, ಉತ್ಸಾಹ ದಲಿತರ ಸ್ಮಶಾನಕ್ಕೆ ಮೂಲಭೂತ ಸೌಕರ್ಯ ಒದಗಿಸುವಾಗ ಇರಲಿಲ್ಲವಲ್ಲ… ಅದೇ ನಿಜವಾದ ದುರಂತ, ನಾಚಿಕೆಗೇಡಿನ ಸಂಗತಿ.

    ತುಮಕೂರು ತಾಲೂಕು ಉರ್ಡಿಗೆರೆ ಹೋಬಳಿದುರ್ಗದ ಹಳ್ಳಿ ಗ್ರಾಮಕ್ಕೆ  ಜಿಲ್ಲಾಡಳಿತ ರುದ್ರಭೂಮಿಗೆಂದು 2 ಎಕರೆ ಜಮೀನು ಮಂಜೂರು ಮಾಡುತ್ತದೆ. ಈ ಜಾಗಕ್ಕೆ ಮೃತದೇಹಗಳನ್ನು ಕೊಂಡೊಯ್ಯಲು ಕನಿಷ್ಠ ಕಾಲು ದಾರಿಯೂ ಕೂಡ ಇರುವುದಿಲ್ಲ.  ಗ್ರಾಮದ ಕೆಲವರಿಗೆ ಈ ರುದ್ರಭೂಮಿ ಎಲ್ಲಿದೆ ಎಂಬ ಮಾಹಿತಿಯೇ ಇಲ್ಲ.  ಈ ಜಾಗದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ. ಹೀಗಿರುವ ಮಧ್ಯೆ ಗ್ರಾಮದ  ಡಿ.ಪಿ.ತಿಮ್ಮರಾಜು ಎಂಬವರು, ಅರೆಗುಜ್ಜನಹಳ್ಳಿ ಗ್ರಾಪಂ ಪಿಡಿಓ ಅವರಿಗೆ ಈ ರುದ್ರ ಭೂಮಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಲು. ಆಗಸ್ಟ್ 2, 2022ನೇ ಸಾಲಿನಲ್ಲಿ ಲಿಖಿತವಾಗಿ ಮನವಿಯನ್ನು ನೀಡಿದ್ದಾರೆ. ಆದರೂ, ಗ್ರಾಮ ಪಂಚಾಯತ್ ನವರು, ಈ ರುದ್ರಭೂಮಿಗೆ  ಕನಿಷ್ಠ ಕಾಲುದಾರಿಯೂ ಸೇರಿದಂತೆ ಯಾವುದೇ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿರುವುದಿಲ್ಲ.  ಇತ್ತೀಚೆಗೆ ಸುಮಾರು 15 ದಿನಗಳ ಹಿಂದೆ, ಇದೇ ಗ್ರಾಮದ ತಿಮ್ಮರಾಜು ಎಂಬವರ ತಂದೆ ಪೆದ್ದಯ್ಯನವರು ಮೃತಪಟ್ಟಿರುತ್ತಾರೆ. ಮೃತಪಟ್ಟ ಇದೇ ದಿನ ಮೃತರ ಮಗ ತಿಮ್ಮರಾಜುರವರು, ತುಮಕೂರು ತಹಶೀಲ್ದಾರ್ ಸಿದ್ದೇಶ್ ಇವರಿಗೆ ದೂರವಾಣಿ ಕರೆ ಮಾಡಿ. ನಮ್ಮ ತಂದೆಯವರು ಮೃತಪಟ್ಟಿದ್ದು, ನಮ್ಮ ಗ್ರಾಮದಲ್ಲಿರುವ ರುದ್ರಭೂಮಿಗೆ ನಮ್ಮ ತಂದೆಯ ಮೃತಹದೇಹವನ್ನು ಕೊಂಡೊಯ್ಯಲು ಕಾಲು ದಾರಿ ಸಹ ಇರುವುದಿಲ್ಲ, ದಯವಿಟ್ಟು ನಮಗೆ ಈ ತಕ್ಷಣ ಮೃತದೇಹ ಹೂಳಲು ರುದ್ರಭೂಮಿಗೆ ಕನಿಷ್ಠ ಕಾಲುದಾರಿಯನ್ನು ಮಾಡಿಕೊಡಿ ಅಂತ ಗೋಗರೆದಿದ್ದಾರೆ.  ಈ ವೇಳೆ ತಹಶೀಲ್ದಾರ್ ಅವರು, ಹಾರಿಕೆ ಉತ್ತರ ನೀಡಿ, ಫೋನ್ ಕರೆ ಸ್ಥಗಿತಗೊಳಿಸಿದ್ದಾರೆ.

    ನಂತರದಲ್ಲಿ ದಿಕ್ಕು ಕಾಣದೇ ಈ ಕುಟುಂಬವು ಅನಿವಾರ್ಯವಾಗಿ ರಸ್ತೆ ಬದಿಯ ಜಮೀನುವೊಂದರಲ್ಲಿ ತಮ್ಮ ತಂದೆಯ ಮೃತದೇಹವನ್ನು ಅಂತ್ಯಸಂಸ್ಕಾರ ನಡೆಸಿದ್ದಾರೆ. ಇದಾದ ನಂತರ  ದಿನಾಂಕ  5-1-2024ರಂದು  ಬೆಳಗ್ಗೆ ಸುಮಾರು 6 ಗಂಟೆಯ ಸಮಯದಲ್ಲಿ ಏಕಾಏಕಿ ತುಮಕೂರು ತಹಶೀಲ್ದಾರ್, ಇತರೆ ಅಧಿಕಾರಿಗಳೊಂದಿಗೆ  ರಸ್ತೆ ಬದಿಯಲ್ಲಿ ಹೂತಿದ್ದ ಪೆದ್ದಯ್ಯ ಅವರ ಮೃತದೇಹವನ್ನು ಈ ಕುಟುಂಬಸ್ಥರ ಗಮನಕ್ಕೆ ತರದೇ ಹೊರ ತೆಗೆದು ಸಾರ್ವಜನಿಕವಾಗಿ ಈ ಕುಟುಂಬಕ್ಕೆ ಅವಮಾನಿಸಿರುವುದಲ್ಲದೇ ಮೃತದೇಹಕ್ಕೆ ಕುಂದುಂಟು ಮಾಡಿದ್ದಾರೆ.

    ಪೆದ್ದಯ್ಯನವರ ಕುಟುಂಬಕ್ಕೆ  ಯಾವುದೇ ರಾಜಕೀಯ ಬಲವಿಲ್ಲ, ಹಣ ಬಲವಿಲ್ಲ. ಇವರ ಅಸಹಾಯಕತೆಯನ್ನು ತಿಳಿದು ಅಧಿಕಾರಿಗಳು ಸರ್ವಾಧಿಕಾರಿಗಳಂತೆ ವರ್ತಿಸಿದ್ದು, ಬೆಳ್ಳಂಬೆಳಗ್ಗೆ ಪೊಲೀಸರ ರಕ್ಷಣೆಯೊಂದಿಗೆ ಮೃತದೇಹವನ್ನು ಹೊರತೆಗೆದು ಬೇರೆಡೆ ಸ್ಥಳಾಂತರಿಸಿದ್ದಾರೆ. ಅಧಿಕಾರಿಗಳು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು, ಮೃತರ ಕುಟುಂಬಸ್ಥರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಿರುವುದು ಕಂಡು ಬಂದಿದೆ. ಜೊತೆಗೆ ದಲಿತರಾದ ಸಂತ್ರಸ್ತರ ಕುಟುಂಬದ ಘನತೆಯನ್ನೇ ಅವಮಾನಿಸಲಾಗಿದೆ.

    ಈ ಬಗ್ಗೆ ದೂರು ಕೊಡಲೆಂದು ಮೃತರ ಹಿರಿಯ ಸೊಸೆ ಮಂಜುಳಾ ಅವರು ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಗೆ ತೆರಳಿದಾಗ  ಸಬ್ ಇನ್ಸ್ ಪೆಕ್ಟರ್  ಚೇತನ್ ಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ರಾಮ್ ಪ್ರಸಾದ್ ದೂರು ಸ್ವೀಕರಿಸದೇ ಕರ್ತವ್ಯ ಲೋಪ ಎಸಗಿದ್ದು, ನೊಂದ ಮಂಜುಳಾ ಅವರನ್ನು ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ರಿಜಿಸ್ಟರ್ ಪೋಸ್ಟ್ ಮೂಲಕ ಪೊಲೀಸ್ ಉಪಾಧೀಕ್ಷಕರಿಗೆ ಮಂಜುಳ ಅವರು ದೂರು ನೀಡಿದ್ದು, ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

     ಉಪದ್ರವ ನಿವಾರಣಾ ಆದೇಶ!

    ಎಸಿಯವರು ಉಪದ್ರವ ನಿವಾರಣಾ ಆದೇಶ ಹೊರಡಿಸಿ, ಮೃತದೇಹವನ್ನು ಬೇರೆಡೆಗೆ ಸ್ಥಳಾಂತರಗೊಳಿಸಿದ್ದಾರೆ. ಆದ್ರೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರು ಇತ್ತೀಚೆಗೆ ಈ ಘಟನೆಯ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವುದೇ ಬೇರೆ. “ಕುಟುಂಬಸ್ಥರು ಒಪ್ಪಿದರೆ ವ್ಯಕ್ತಿಯ ಮೃತದೇಹವನ್ನು ಹೊರತೆಗೆದು ಬೇರೆಡೆ ಅಂತ್ಯಸಂಸ್ಕಾರ ಮಾಡಿ” ಎಂದು ಪರಮೇಶ್ವರ್ ಸೂಚಿಸಿದ್ದರೆ, ಅಧಿಕಾರಿಗಳು  ಉಪದ್ರವ ನಿವಾರಣಾ ಆದೇಶ ಹೊರಡಿಸಿ, ಕುಟುಂಬಸ್ಥರ ಒಪ್ಪಿಗೆ ಪಡೆಯದೇ ಬಲಾತ್ಕಾರವಾಗಿ ಮೃತದೇಹವನ್ನು ಬೇರೆಡೆಗೆ ಸ್ಥಳಾಂತರಗೊಳಿಸಿದ್ದಾರೆ ಎಂದು ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

    ರುದ್ರಭೂಮಿಗೆ ರಸ್ತೆ ಕಲ್ಪಿಸಿ ಸರ್ಕಾರಿ ಸೇವೆ ನೀಡದ, ದಲಿತರಿಗೆ  ಅವಮಾನವಾಗುವಂತೆ ಹೂತಿದ್ದ ದೇಹ ಹೊರತೆಗೆದ ಅಧಿಕಾರಿಗಳ ವಿರುದ್ದ FIR ಮಾಡಿಸಲು ಬೆಂಗಳೂರಿನ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರಿಗೆ ದೂರವಾಣಿ ಕರೆ ಮಾಡಿ ನಮ್ಮ ದಲಿತ ಕುಟುಂಬಕ್ಕೆ ನ್ಯಾಯ ಕೊಡಿಸಲು ಮನವಿ ಮಾಡಿದ ಮಂಜುಳ ಇವರಿಗೆ SP ರವರು ತುಮಕೂರು ಡಿಸಿ,ಎಸ್ ಪಿ  ಹತ್ತಿರ ಹೋಗಿ ಎಂದು ಹಾರಿಕೆ ಉತ್ತರ ನೀಡಿರುತ್ತಾರೆ. ದಲಿತರಿಗೆ ನ್ಯಾಯ ಕೊಡಿಸಬೇಕಾದ ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ಈ ರೀತಿ ನಮಗೆ ನಡೆದು ಕೊಂಡರೆ ಮತ್ಯಾರಲ್ಲಿ ನಾವು ನ್ಯಾಯ ಕೇಳಬೇಕು ಇದು ಮಂಜುಳ ಇವರ ಅಳಲು.

    ಈ ಬಗ್ಗೆ ಸರಿಯಾದ ಕಾನೂನು ಕ್ರಮಕೈಗೊಳ್ಳದೇ ಹೋದಲ್ಲಿ ಕಾನೂನಾತ್ಮಕ ಹೋರಾಟ ಮಾಡುತ್ತೇವೆ ಎಂದು ನೊಂದ ಕುಟುಂಬಸ್ಥರು ನಮ್ಮತುಮಕೂರಿಗೆ ತಿಳಿಸಿದ್ದಾರೆ.

    admin
    • Website

    Related Posts

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    ಪಾವಗಡದಲ್ಲಿ ಮರುಕಳಿಸಿದ ನಕ್ಸಲ್ ಭೀತಿ: ದೇವಣ್ಣ ದಳಂ ಹೆಸರಿನಲ್ಲಿ ರೈತನಿಗೆ 5 ಲಕ್ಷ ರೂ. ಬೇಡಿಕೆ!

    September 12, 2026

    ತುಮಕೂರು ಸ್ಕ್ವೇರ್‌, ಕಾರಂಜಿಗೆ ಡಿಸಿಎಂ ಶಿಲಾನ್ಯಾಸ:  ಎಸ್‌ ಎಸ್‌ ವೃತ್ತದ 4 ದಿಕ್ಕಿನಲ್ಲೂ ಬೃಹತ್‌ ಎಲ್‌ ಇಡಿ ಅಳವಡಿಕೆಗೆ ಚಾಲನೆ

    September 12, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!

    September 14, 2026

    ಮೈಸೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಶಕಗಳ ಕನಸು ಕೊನೆಗೂ ನನಸಾಗಿದ್ದು, ಮೈಸೂರಿನ ಕುವೆಂಪುನಗರದಲ್ಲಿ ನಿರ್ಮಿಸಲಾಗಿರುವ ನೂತನ ಮನೆಯ…

    ಗಣೇಶ ಚತುರ್ಥಿ ಪೆಂಡಲ್ ಹಾಕುವಾಗ ಚಪ್ಪರದಿಂದ ಬಿದ್ದು ವ್ಯಕ್ತಿ ಸಾವು

    September 14, 2026

    ಸಾಂವಿಧಾನಿಕ ಜವಾಬ್ದಾರಿಯಿಂದ ಶಾಸಕರ ಪಲಾಯನ: ತುರುವೇಕೆರೆಯಲ್ಲಿ ಕಾಂಗ್ರೆಸ್ ಮುಖಂಡರ ಆರೋಪ

    September 14, 2026

    ದೊಡ್ಡಗೊಲ್ಲರಹಟ್ಟಿಯಲ್ಲಿ ಶುದ್ಧ ನೀರಿನ ಘಟಕ ಸ್ಥಗಿತ:  ಜನರ ಪರದಾಟ

    September 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.