ಮಧುಗಿರಿ: ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಜುಲೈ 6ರ ಬುಧವಾರ ಸ್ವಯಂ ಉದ್ಯೋಗ ಮೇಳ ಮತ್ತು ಸಾಧನಾ ಸಮಾವೇಶ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗಡೆಯವರು ಆಗಮಿಸುತ್ತಿದ್ದಾರೆ.
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಜಿಲ್ಲಾ ನಿರ್ದೇಶಕರಾದ ದಿನೇಶ ಡಿ. ತಿಳಿಸಿದರು.
ಜುಲೈ 6ನೇ ತಾರೀಕು ನಡೆಯುವ ಕಾರ್ಯಕ್ರಮಕ್ಕೆ ವೇದಿಕೆಯ ಸಿದ್ಧತೆಗೆ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಇದೇ ವೇಳೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುರಳಿದರ ಹಾಲಪ್ಪ, ತುಂಗೋಟಿ ರಾಮಣ್ಣ, ಲಾಲಪೇಟೆ ಮಂಜುನಾಥ್, ದಿನೇಶ್ ಕುಮಾರ್ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನಾಧಿಕಾರಿಗಳು, ಬಿ.ಸಿ. ಟ್ರಸ್ಟ್ ಮಧುಗಿರಿ ಮತ್ತು ಕಲ್ಪನಾ ಗೋವಿಂದರಾಜು, ವೆಂಕಟೇಶ್, ನರಸಿಂಹಮೂರ್ತಿ.ಯತೀಶ್ ಬಾಬು, ಮಂಜುನಾಥ್, ಮತ್ತಿತರು ಹಾಜರಿದ್ದರು.
ವರದಿ: ದೊಡ್ಡೇರಿ ಮಹಲಿಂಗಯ್ಯ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz