nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025
    Facebook Twitter Instagram
    ಟ್ರೆಂಡಿಂಗ್
    • ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು
    • ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ
    • ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    • ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್
    • ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ
    • ಪ್ರತಿಭಾ ಕಾರಂಜಿ: ಸಹನಾ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
    • ಮೆಟ್ರೋ ರೈಲು ಹಳಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ!
    • ಶಿಕ್ಷಣದೊಂದಿಗೆ ಮೌಲ್ಯಗಳು ಸೇರಿ ಬಂದಾಗಲೇ ಜೀವನ ಯಶಸ್ವಿ: ಡಾ.ಸುರೇಶ್ ಬಿ.ಕೆ.
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ
    ಕೊರಟಗೆರೆ December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    By adminDecember 5, 2025No Comments2 Mins Read
    kavya

    ಕೊರಟಗೆರೆ : ಇತ್ತೀಚಿಗೆ ನಡೆದ ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಗೆದ್ದು ಸಾಧನೆ ಮಾಡಿದ ತಂಡದ ಆಟಗಾರ್ತಿ ಕಾವ್ಯಗೆ ತಾಲ್ಲೂಕಿನ ಜಟ್ಟಿ ಅಗ್ರಹಾರ ಗ್ರಾಮ ಪಂಚಾಯಿತಿಯಲ್ಲಿ ಗ್ರಾ.ಪಂ ಹಾಗೂ ತಾಲ್ಲೂಕು ಆಡಳಿತ ವತಿಯಿಂದ ತಹಶೀಲ್ದಾರ್ ಕೆ. ಮಂಜುನಾಥ್ ಹಾಗೂ ಇಓ ಅಪೂರ್ವ ಸಿ ಸನ್ಮಾನಿಸಿ ಗೌರವಿಸಿದರು.

    ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಮಂಜುನಾಥ್ ಮಾತನಾಡಿ, ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರಾ ಹೋಬಳಿಯ ನಾಯಕನಪಾಳ್ಯ ಗ್ರಾಮದ ಬಡ ಕುಟುಂಬದಲ್ಲಿ ಜನಿಸಿದ ಕಾವ್ಯ ಅವರ ಸಾಧನೆ ಇಡೀ ದೇಶವೇ ಮೆಚ್ಚುವಂತ ಸಾಧನೆ ಮಾಡಿದ್ದಾರೆ. ವಿಶೇಷ ಚೇತನರು ಆಗಿದ್ದರೂ ಸಹ ನಾವು ಕೂಡ ಸಾಧನೆ ಮಾಡಬಹುದು ಎಂದು ತೋರಿಸಿಕೊಟ್ಟಿದ್ದಾರೆ. ಇವರನ್ನ ಸ್ಪೂರ್ತಿಯಾಗಿ ಇಟ್ಟುಕೊಂಡು ಮಹಿಳೆಯರು ಹಾಗೂ ಇವತ್ತಿನ ಹೆಣ್ಣು ಮಕ್ಕಳು ವಿವಿಧ ರಂಗ ಕ್ಷೇತ್ರಗಳಲ್ಲಿ ಆರಿಸಿಕೊಂಡು ತಮ್ಮ ಕ್ಷೇತ್ರಗಳಲ್ಲಿ ಸಾಧನೆ ಮಾಡಬಹುದಾಗಿದೆ ಎಂದು ತಿಳಿಸಿದರು.


    Provided by
    Provided by

    ನಮ್ಮ ಜಿಲ್ಲೆಯಲ್ಲಿ ಇಬ್ಬರು ವಿಶೇಷ ಚೇತನರು ಸಾಧನೆ ಮಾಡಿ ನಮ್ಮ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇಂತಹ ಪ್ರತಿಭೆಗಳನ್ನ ಗುರಿತಿಸುವುದು ನಮ್ಮ ಕರ್ತವ್ಯ. ಮ್ಯಾರಥಾನ್ ಹಾಕಿ ಸೇರಿದಂತೆ ಇನ್ನಿತರ ಕ್ರೀಡೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನ ಪಡೆದುಕೊಂಡಿದ್ದು, ಇವರು ಇನ್ನಷ್ಟು ಅವಕಾಶಗಳು ದೊರೆತು ದೊಡ್ಡ ಸಾಧನೆ ಮಾಡಲಿ. ನಾನು ಕೂಡ ಇವರಿಗೆ ವೈಯಕ್ತಿಕವಾಗಿ ಸಹಾಯ ಮಾಡುತ್ತೇನೆ ಎಂದು ಹೇಳಿದರು.

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವ ಕಪ್ ಗೆದ್ದ ತಂಡ ಆಟಗಾರ್ತಿ ಕಾವ್ಯ ಮಾತನಾಡಿ, ನಾನು ಆರು ವರ್ಷ ಇರುವಾಗಲೇ ನಮ್ಮ ತಂದೆ ಕೂಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ನಾನು ಅಲ್ಲಿಗೆ ಹೋಗಿದ್ದೆ, ಅದೇ ಸಂದರ್ಭದಲ್ಲಿ ಯಾರಿಂದಲೋ ಆಕಸ್ಮಿಕವಾಗಿ ಕಲ್ಲೊಂದು ನನ್ನ ಕಣ್ಣಿಗೆ ತಾಗಿ ಕಣ್ಣಿನ ಸಮಸ್ಯೆಯಾಗಿತ್ತು. ನನ್ನ ಒಂದು ಕಣ್ಣು ದೃಷ್ಠಿ ಕಳೆದುಕೊಂಡಾಗ ಬಡತನದಲ್ಲಿದ್ದ ನನ್ನ ತಂದೆ ಆಸ್ಪತ್ರೆಗೆ ತೋರಿಸಲು ಶಕ್ತಿ ಇರಲಿಲ್ಲ. ಅಂತಹ ಸಂದರ್ಭದಲ್ಲಿ ಬೆಂಗಳೂರಿನ ಸಮಸ್ತಂ ಸಂಸ್ಥೆಯಲ್ಲಿ ನನಗೆ ಎಲ್ಲಾ ತರದ ವ್ಯವಸ್ಥೆಯನ್ನ ಮಾಡಿಕೊಟ್ಟಿರುವ ಕಾರಣ ಇಂದು ನಾನು ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ.ಡಿ.ಪ್ರಭಾಕರ್ ಮಾತನಾಡಿ, ಸಹೋದರಿ ಕಾವ್ಯ ಅವರ ತಂದೆ ನನ್ನ ಬಾಲ್ಯ ಸ್ನೇಹಿತ ಇವರ ಮಗಳ ಸಾಧನೆ ನನಗೆ ತುಂಬಾ ಖುಷಿ ತಂದಿದೆ. ನಮ್ಮ ಗ್ರಾಮದ ಪಕ್ಕದವರೇ ಆದ ಕಾವ್ಯ ಅವರ ಸಾಧನೆ ಕಂಡು ನಮ್ಮ ಮನೆಯ ಮಗಳು ಸಾಧನೆ ಮಾಡಿದಷ್ಟು ಸಂತಸ ತಂದಿದೆ. ಇಂತಹ ಸಾಧನೆಗಳು ನಮ್ಮ ಕಾವ್ಯಗೆ ಇನ್ನಷ್ಟು ಸಿಗಲಿ ಎಂದು ದೇವರಲ್ಲಿ ಕೇಳಿಕೊಳ್ಳತ್ತೇನೆ. ಅವರ ಸಾಧನೆಗೆ ನಮ್ಮ ಗ್ರಾ.ಪಂ. ಹಾಗೂ ತಾಲ್ಲೂಕು ಆಡಳಿತದಿಂದ ಸನ್ಮಾನಿಸಲಾಗಿದೆ ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ತಾ.ಪಂ ಇಓ ಅಪೂರ್ವ ಸಿ, ಪಿಡಿಓ ರಂಗನಾಥ್, ಕಾರ್ಯದರ್ಶಿ ಮುನಿಯಯ್ಯ, ಮುಖಂಡರಾದ ಮಂಜುನಾಥ್, ರಾಮಚಂದ್ರಯ್ಯ, ಪುಟ್ಟ ಹನುಮಂತರಾಯಪ್ಪ, ಚಿಕ್ಕರಂಗಯ್ಯ, ಲಕ್ಷೀಪತಿ, ಕಮಲಮ್ಮ, ಏರ್‌ ಟೆಲ್‌ ಗೋಪಿ, ಶಕ್ತಿ, ರಮೇಶ್, ಹರ್ಷ ಸೇರಿದಂತೆ ಇತರರು ಇದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲೆಂದು ವಿಶೇಷ ಪೂಜೆ

    December 2, 2025

    ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪ್ರತಿಭಾ ಕಾರಂಜಿ ಕಾರ್ಯಕ್ರಮ

    November 29, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ: ತಾಲ್ಲೂಕಿನ ಹಲವೆಡೆ ಕೋಟ್ಯಂತರ ರೂಪಾಯಿ ಸರ್ಕಾರಿ ಜಮೀನನ್ನು ಸುಳ್ಳು ದಾಖಲೆ ಸೃಷ್ಟಿಸಿ ಪರಭಾರೆ ಮಾಡಿರುವ ಸಂಬಂಧ ಬಂದಿರುವ ದೂರಿನ…

    ಕುಣಿಗಲ್: ಕಾರ್ಯಾರಂಭಕ್ಕೂ ಮುನ್ನವೇ ಶಿಥಿಲಾವಸ್ಥೆಗೆ ತಲುಪಿದ ಚಿತಾಗಾರ

    December 5, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ಜಲಮೂಲ ಬರಿದಾದರೆ ಮನುಕುಲ, ಜೀವ ಸಂಕುಲಕ್ಕೆ ಅಪಾಯ: ಕೆ.ಜೈಪ್ರಕಾಶ್

    December 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.