ಸರಗೂರು: ತಾಲ್ಲೂಕಿನ ಎಂ.ಸಿ. ತಳಲು ಗ್ರಾ.ಪಂ. ವ್ಯಾಪ್ತಿಯ ಚನ್ನಗುಂಡಿ ನಮ್ಮ ಮತಗಟ್ಟೆಯಲ್ಲೆ ನಾವು ಮತ ಹಾಕ್ತೀವಿ ಬೇರೆ ಊರಿಗೆ ಹೋಗುವುದಿಲ್ಲ. ನಮ್ಮೂರಲ್ಲೇ ನಮಗೆ ಮತಗಟ್ಟೆ ಕೊಡಿ ಇಲ್ಲದಿದ್ದರೆ ಲೋಕಸಭಾ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು ಹಾಡಿಯಲ್ಲಿರುವ ಆದಿವಾಸಿ ಜನರು ಎಚ್ಚರಿಕೆ ಹಿನ್ನೆಲೆಯಲ್ಲಿ ಶುಕ್ರವಾರ ತಾಲ್ಲೂಕು ಆಡಳಿತ ಅಧಿಕಾರಿಗಳು ಸಾರ್ವಜನಿಕರ ಮನವೊಲಿಸಿದರು.
ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಚಿಕ್ಕಕ್ಯಾತ ಮಾತನಾಡಿ, ನಮ್ಮ ಹಾಡಿಯಲ್ಲಿ ಮೂಲಸೌಕರ್ಯಗಳು ಇಲ್ಲದೆ ಪರದಾಡುವಂತಾದಾಗಿದೆ. ಎರಡು ಮೂರು ವರ್ಷಗಳಿಂದ ಪ್ರಕೃತಿ ವಿಕೋಪದಿಂದ ಮನೆಗಳನ್ನು ಕಳೆದುಕೊಂಡಿದ್ದೇವೆ. ಕಂದಾಯ ಇಲಾಖೆ ಅಧಿಕಾರಿಗಳು ಮನೆಗಳನ್ನು ಮಾಡಿಸಿಕೊಡುತ್ತೇವೆ ಎಂದು ಹೇಳಿ ಹೋಗಿದ್ದಾರೆ. ಇಲ್ಲಿಯವರೆಗೂ ಯಾವುದೇ ಮನೆಗಳು ಇತರೆ ಸೌಲಭ್ಯಗಳನ್ನು ನಮ್ಮ ಹಾಡಿಗೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ತಾತ ಮುತ್ತಾತನ ಕಾಲದಿಂದಲೂ ನಾವು ಚನ್ನಗುಂಡಿಹಾಡಿ ಗ್ರಾಮದಲ್ಲಿ ಮತವನ್ನು ಹಾಕಿ ಬರುತ್ತಿದ್ದೇವೆ. ನಮ್ಮೂರಲ್ಲಿ ಇದ್ದ ಮತಗಟ್ಟೆಯನ್ನು ತೆಗೆದು ಹಾಕಿ ಪಕ್ಕದ ಅರಳಹಳ್ಳಿ ಗ್ರಾಮಕ್ಕೆ ವರ್ಗಾಯಿಸಿದ್ದಾರೆ. ಅರಳಹಳ್ಳಿ ಗ್ರಾಮಕ್ಕೆ ಹೋಗಿ ಮತ ಹಾಕಬೇಕು ಎಂದು ಹೇಳುತ್ತಿದ್ದಾರೆ. ನಮ್ಮಲ್ಲಿ ವಯಸ್ಸಾದ ವೃದ್ಧರಿದ್ದಾರೆ. ಅಂಗವಿಕಲರಿದ್ದಾರೆ, ಗರ್ಭಿಣಿ ಬಾಣಂತಿಯರಿದ್ದಾರೆ , ಇದರಿಂದ ನಮಗೆ ಪ್ರತ್ಯೇಕವಾಗಿ ಮತಗಟ್ಟೆ ನೀಡಬೇಕು ಎಂದು ತಹಶೀಲ್ದಾರ್ ರವರಿಗೆ ತಿಳಿಸಿದರು.
ನಂತರ ತಹಶೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಮೂಲಸೌಕರ್ಯಗಳನ್ನು ಹಾಡಿಯಲ್ಲಿ ಕೊರತೆಗಳು ಇವೆ ಎಂದು ನಮ್ಮ ಮುಂದೆ ಹೇಳಿದ್ದೀರಿ. ಅದನ್ನು ವರದಿ ಮಾಡಿಕೊಂಡು ನಮ್ಮ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮಾ, ಸಬ್ ಇನ್ಸ್ಪೆಕ್ಟರ್ ಮಧು, ಉಪತಹಸೀಲ್ದಾರ್ ರವಿಂದ್ರ, ಪಿಡಿಓ ಪರಮೇಶ್, ರಾಜನೀಕ್ಷಕ ಶ್ರೀನಿವಾಸ, ಗ್ರಾಮಲೆಕ್ಕಿಗ ಮಂಜುನಾಥ್, ಮುಖಂಡ ನಾಗೇಂದ್ರಪ್ಪ, ವೆಂಕಟರಾಮು, ಸೋಮೇಶ್, ಚುನಾವಣಾಧಿಕಾರಿ ಹಾಗೂ ಇನ್ನೂ ಮುಖಂಡರು ಸೇರಿದಂತೆ ಇನ್ನಿತರ ಹಾಜರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296