ಕೊರಟಗೆರೆ: ತಾಲ್ಲೂಕು ಹೊಳವನಹಳ್ಳಿ ಹೋಬಳಿಯ ವೀರಯ್ಯನ ಪಾಳ್ಯ ಗ್ರಾಮದ ರತ್ನಮ್ಮ ಬಿನ್ ಅಂಜಿನಪ್ಪ ಎಂಬ ವೃದ್ಧೆಯ ಮೇಲೆ ವೈಯಕ್ತಿಕ ದ್ವೇಷದಿಂದ ಅದೇ ಊರಿನ ರವಿಕುಮಾರ್ ಬಿನ್ ನರಸಿಂಹಯ್ಯ, ನಾರಾಯಣ, ಶ್ವೇತಾ, ಲಕ್ಷ್ಮಮ್ಮ ಮತ್ತು ಸ್ವಪ್ನ ಎಂಬ ಆರೋಪಿಗಳು ದೊಣ್ಣೆ,ಕಲ್ಲು ಮತ್ತು ಮಚ್ಚಿನಿಂದ ತಲೆಯ ಭಾಗಕ್ಕೆ ಹೊಡೆದಿರುವ ಘಟನೆ ನಡೆದಿದೆ.
ಘಟನೆ ನಡೆದ ಮಾಹಿತಿ ತಿಳಿದ ಕೂಡಲೇ ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ ಐ ನಾಗರಾಜು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಸ್ಥಳ ಪರಿಶೀಲಿಸಿ ವೃದ್ದೆಯ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಐಪಿಸಿ ಸೆಕ್ಷನ್ 323, 324, 504, 307 ಕಾಲಂ ಅಡಿ ಎಫ್ ಐಆರ್ ದಾಖಲಿಸಿದ್ದಾರೆ.
ಹಲ್ಲೆಗೊಳಗಾದ ವೃದ್ದೆ ರತ್ನಮ್ಮ ಬಿನ್ ಅಂಜಿನಪ್ಪ ಸದ್ಯ ಕೊರಟಗೆರೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ..
ಒಬ್ಬಂಟಿ ವೃದ್ಧೆಯ ಮೇಲೆ ವಿನಾಕಾರಣ ಹಲ್ಲೆ ನಡೆಸಿ ವಿಕೃತಿ ಮೆರೆಯಲಾಗಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಆರೋಪಿಗಳ ಪತ್ತೆಗೆ ಕೊರಟಗೆರೆಯ ಪೊಲೀಸ್ ಅಧಿಕಾರಿಗಳು ಬಲೆ ಬೀಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5