ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಡುಗನಹಳ್ಳಿ ಗ್ರಾಮದ ವೀರಕ್ಯಾತಪ್ಪ ನವರ ಪತ್ನಿ ಲಕ್ಷ್ಮಮ್ಮ (70) ಎಂಬ ವೃದ್ದೆಯು ತನ್ನ ಜಮೀನಿಗೆ ಹೋಗಿ ವಾಪಸ್ ಬರುವ ಮಾರ್ಗ ಮಧ್ಯೆಯ ಸುವರ್ಣಮುಖಿ ನದಿ ಸೇರುವ ಹುಂಜಿನ ಹಳ್ಳದ ರಭಸಕ್ಕೆ ಕೊಚ್ಚಿ ಹೋಗಿ ನೆನ್ನೆ ಮಧ್ಯಾಹ್ನ ಮೃತಪಟ್ಟಿದ್ದರು.
ಸ್ಥಳಕ್ಕೆ ಕೊರಟಗೆರೆ ಆರಕ್ಷಕ ಠಾಣೆಯ ಸಿದ್ದರಾಮೇಶ್ವರ ಮತ್ತು ಸಿಬ್ಬಂದಿ ಭೇಟಿ ನೀಡಿ ಸ್ಥಳೀಯ ಗ್ರಾಮಸ್ಥರ ಸಹಕಾರದಿಂದ ಹೊರತೆಗೆದು ಮೃತ ದೇಹವನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದರು.
ಮಾಹಿತಿ ತಿಳಿದ ತಕ್ಷಣವೇ ಶಾಸಕ ಡಾ.ಜಿ ಪರಮೇಶ್ವರ್ ಮತ್ತು ತಹಶೀಲ್ದಾರ್ ನಹಿದಾ ಜಂ ಜಂ ಖುದ್ದು ಆಸ್ಪತ್ರೆಗೆ ಭೇಟಿ ನೀಡಿ ಮೃತ ವೃದ್ಧೆಯ ಕುಟುಂಬಕ್ಕೆ ಸರ್ಕಾರದ ಆದೇಶದಂತೆ 5 ಲಕ್ಷ ರೂ.ಗಳ ಪರಿಹಾರದ ಚೆಕ್ಕನ್ನು ನೀಡಿ ಧೈರ್ಯ ತುಂಬಿದರು.
ವರದಿ: ಮಂಜುಸ್ವಾಮಿ.ಎಂ.ಎನ್. , ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz