ಕೊರಟಗೆರೆ : ಯುಕ್ತ ಕೌಶಲ್ಯ ತರಬೇತಿ ಕೇಂದ್ರದ ವತಿಯಿಂದ ಕೊರಟಗೆರೆ ತಾಲ್ಲೂಕು ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಒಂದು ದಿನದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದ ಮಧುಗಿರಿ ದಿಲೀಪ್, ಗ್ರಾಮೀಣ ಭಾಗದ ವಿದ್ಯಾರ್ಥಿಗಳು msyep (Multi skill youth empowerment programme) ಪಡೆಯುವ ಮೂಲಕ ಉದ್ಯೋಗಕ್ಕೆ ಸಹಕಾರಿಯಾಗಿದೆ ಎಂದು msyep ತರಬೇತಿಯ ಬಗ್ಗೆ ಅರಿವು ಮೂಡಿಸಿದರು.
ತರಬೇತಿಯನ್ನು ಪಡೆದುಕೊಳ್ಳಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಒಂದು ಸುವರ್ಣ ಅವಕಾಶ. ಸರಕಾರಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಧರ್ ರವರು ವಿದ್ಯಾರ್ಥಿಗಳಿಗೆ msyep ತರಬೇತಿಯನ್ನು ನಮ್ಮ ಕಾಲೇಜಿನಲ್ಲಿ ನೀಡಬೇಕೆಂದು ಮನವಿ ಮಾಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮುಖ್ಯ ಕಾರ್ಯಕ್ರಮ ಅಯೋಜಕರಾದ ದೀಪಿಕಾ ವೆಂಕಟೇಶ್ ರವರು ತರಬೇತಿ ಯ ಅವಧಿ ಮತ್ತು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಿದರು.ಈ ಕಾರ್ಯಕ್ರಮದಲ್ಲಿ ಮುಖ್ಯ ಉಪವಿಭಾಗ ಆಯೋಜಕರು ತನುಜ, ಪೂಜಾ ಸಹನಾ, ಲೀಲಾವತಿ ಹಾಜರಿದ್ದರು.
ಪ್ರಾಥಮಿಕ ಕೃಷಿ ಪತ್ತಿನ ಸಂಘ ಸಹಕಾರ ಸಂಘದ ಅಧ್ಯಕ್ಷರಾದ ಯತಿಂದ್ರ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ಹರೀಶ್ , ಪತ್ರಕರ್ತರಾದ ಸಿದ್ದರಾಜು ಟಿ.ಹೆಚ್. ಹಾಜರಿದ್ದರು.
ವರದಿ: ಸಿದ್ದರಾಜು ಟಿ.ಹೆಚ್.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy