ತುರುವೇಕೆರೆ: ದಂಡಿನಶಿವರ ವಿ. ಎಸ್.ಎಸ್.ಎನ್. ಗೆ ಶುಕ್ರವಾರ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರಾಗಿ ಕೆ.ಸಿದ್ದಗಂಗಯ್ಯ ಹಾಗೂ ಉಪಾಧ್ಯಕ್ಷರಾಗಿ ಕುಮಾರ್ ಕೆ.ಆರ್. ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆಯ ಚುನಾವಣಾಧಿಕಾರಿ ಶಿವಕುಮಾರ್ ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಕೆ .ಸಿದ್ದಗಂಗಯ್ಯ, ಮಾಜಿ ಶಾಸಕರಾದ ಎಂ.ಟಿ.ಕೃಷ್ಣಪ್ಪನವರ ಹಾಗೂ ಸಂಘದ ಸದಸ್ಯರ ಬೆಂಬಲದಿಂದ ನಾನು ಇಂದು ಅಧ್ಯಕ್ಷನಾಗಿದ್ದು, ನನ್ನ ಆಯ್ಕೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳು. ಇಂದಿನಿಂದ ಸಂಘದ ವತಿಯಿಂದ ಸಿಗುವ ಸರ್ಕಾರಿ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪುವಂತೆ ಮಾಡುತ್ತೇವೆ. ಸಂಘವನ್ನು ಉತ್ತಮ ರೀತಿಯಲಿ ಅಭಿವೃದ್ಧಿ ಮಾಡಲು ಶ್ರಮಿಸುತ್ತೇನೆ ಎಂದರು .
ಬಳಿಕ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿಯನ್ನು ಹಂಚಿ, ಸಂಭ್ರಮ ಆಚರಿಸಿದರು.
ಈ ವೇಳೆ ಬೀಚನಹಳ್ಳಿ ರಾಮಣ್ಣ, ತೋವಿನಕೆರೆ ರಂಗಸ್ವಾಮಿ , ಮಾಜಿ ಅಧ್ಯಕ್ಷರಾದ ಶಿವರಾಜು, ಹೊನ್ನೆನಹಳ್ಳಿ ಕೃಷ್ಣಪ್ಪ , ಗಂಗಣ್ಣ,ರೋಹಿತ್, ಪದ್ಮರೋಹಿತ್ , ಮಾಚೆನಹಳ್ಳಿ ಲೋಕೇಶ್, ಸಿ. ಇ. ಓ.ಪ್ರಕಾಶ್ ಮತ್ತಿತರರು ಅಧ್ಯಕ್ಷ ಉಪಾಧ್ಯಕ್ಷರಿಗೆ ಪುಷ್ಪ ಮಾಲೆ ಹಾಕಿ ಅಭಿನಂದಿಸಿದರು.
ವರದಿ: ಸುರೇಶ್ ಬಾಬು ಎಂ.ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5