nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026
    Facebook Twitter Instagram
    ಟ್ರೆಂಡಿಂಗ್
    • ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ
    • ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ
    • ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ
    • ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ
    • ವೈ.ಎನ್.ಹೊಸಕೋಟೆ: ಶಾಲಾ ಆವರಣದಲ್ಲಿ ಮದ್ಯದ ಬಾಟಲಿಗಳ ರಾಶಿ: ಕುಡುಕರ ಅಡ್ಡೆಯಾದ ವಿದ್ಯಾಮಂದಿರ
    • ಏ.15ರ ನಂತರ ಮನೆ ಮನೆಗೆ ಜನ ಗಣತಿ ಕಾರ್ಯಕರ್ತರು ಭೇಟಿ | ನಾಗರಿಕರು ಸ್ವಯಂ ಗಣತಿಯಲ್ಲಿ ಭಾಗವಹಿಸಿ: ತಹಶೀಲ್ದಾರ್ ಮಂಜುನಾಥ್ ಕೆ. ಕರೆ
    • ತಿಪಟೂರು: ಕೃಷ್ಣ ಅವರಿಗೆ ಕೆಯುಡಬ್ಲೂಜೆ ರಾಜ್ಯ ಮಟ್ಟದ ಟಿ.ಕೆ.ಮಲಗೊಂಡ ದತ್ತಿ ಪ್ರಶಸ್ತಿ
    • ಚಿತ್ರೀಕರಣ ಪೂರೈಸಿದ ‘ಶಿಲ್ಪಾ ಶ್ರೀನಿವಾಸ್’: ಫ್ಯಾಮಿಲಿ ಸ್ಟಾರ್ ಅಭಿಜಿತ್ ನೃತ್ಯದೊಂದಿಗೆ ಕ್ಲೈಮ್ಯಾಕ್ಸ್ ಪೂರ್ಣ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ
    ತುಮಕೂರು February 15, 2026

    ನೀರು ಸರಬರಾಜು: ಅಧಿಕಾರಿಗಳ ವಿರುದ್ಧ ಸಚಿವ ಪರಮೇಶ್ವರ್ ಅಸಮಾಧಾನ: ನಿಮ್ಮನ್ನೇ ಜವಾಬ್ದಾರಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ

    By adminFebruary 15, 2026No Comments2 Mins Read
    parameshwar

    ತುಮಕೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ ಅಧ್ಯಕ್ಷತೆಯಲ್ಲಿ ಕುಡಿಯುವ ನೀರು ಸೇರಿದಂತೆ ವಿವಿಧ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

    ಸಭೆಯಲ್ಲಿ ಮಾತನಾಡಿದ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ, ನಗರ ಪ್ರದೇಶಗಳಲ್ಲಿ ಈಗಾಗಲೇ ಟ್ಯಾಂಕರ್ ನೀರು ಸರಬರಾಜು ಮಾಡುತ್ತಿರುವ ಕ್ರಮ ಸರಿಯಲ್ಲ, ಇಲ್ಲಿಯವರೆಗೆ ನೀರು ಸಂಗ್ರಹಕ್ಕೆ ನಗರಾಡಳಿತ ಯಾವ ಕ್ರಮ ತೆಗೆದುಕೊಂಡಿದೆ ಎಂದು ಪ್ರಶ್ನಿಸಿ ಬೇಸಿಗೆ ಬಂದ ಕೂಡಲೇ ಟ್ಯಾಂಕರ್ ಸರಬರಾಜು ಎಂಬ ಉತ್ತರ ಬರುವುದು ಸಮಾಧಾನಕರವಲ್ಲ. ಇದಕ್ಕೆ ಸರಿಯಾದ ವ್ಯವಸ್ಥೆ ಮಾಡಿಕೊಳ್ಳಬೇಕು. ಮುಂಜಾಗೃತ ಕ್ರಮದ ವ್ಯವಸ್ಥೆ ಮಾಡಿಕೊಳ್ಳದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


    Provided by
    Provided by

    ಜಾತ್ರೆಗೆ ಅನುಮತಿ ಕಡ್ಡಾಯ:

    ಬೇಸಿಗೆ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹಬ್ಬ ಜಾತ್ರೆಗಳು ಆಗುತ್ತವೆ. ಈ ಸಂದರ್ಭದಲ್ಲಿ ಜನರ ಕ್ಷೇಮ ಕಾಳಜಿಗೆ ಯಾವ ಕ್ರಮ ಅನುಸರಿಸಿದ್ದೀರಿ ಎಂದು ಉಪ ವಿಭಾಗಾಧಿಕಾರಿಗಳನ್ನು ಪ್ರಶ್ನಿಸಿದ ಅವರು, ಯಾವುದೇ ಜಾತ್ರೆ ಹಬ್ಬ ಆಚರಿಸಲು ಸ್ಥಳೀಯ ಆಡಳಿತದ ಅನುಮತಿ ಕಡ್ಡಾಯವಾಗಿ ಪಡೆಯಬೇಕು. ಒಂದೊಮ್ಮೆ ಅನುಮತಿ ಇಲ್ಲದೆ ನಡೆದ ಜಾತ್ರೆ ಹಬ್ಬಗಳ ಸಂಬಂಧ ಆಗುವ ಸಮಸ್ಯೆಗಳಿಗೆ ಆಯಾ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ನಗರ ಪ್ರದೇಶಗಳಿಗೆ ದಿನವೂ ಕುಡಿಯುವ ನೀರು ಸರಬರಾಜಾಗಲು ಕ್ರಮ ವಹಿಸುವಂತೆ ಸೂಚಿಸಿದ ಅವರು, ಕಳೆದ ವರ್ಷ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ, ಹೇಮಾವತಿ ನೀರಿನ ಸರಬರಾಜಿನಿಂದಲೂ ಕೆರೆಗಳಲ್ಲಿ ನೀರು ಇದೆ. ಆದರೂ ಜೂನ್ ತಿಂಗಳ ನಂತರ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಅಲ್ಲಿಯವರೆಗೆ ಜಿಲ್ಲೆಯ ಕೆಲವು ಭಾಗದಲ್ಲಿ ಕುಡಿಯುವ ನೀರಿಗೆ ತತ್ವಾರ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಬೇಸಿಗೆಯಲ್ಲಿ ಯಾವುದೇ ಸಮಸ್ಯೆ ತಲೆದೂರದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರಲ್ಲದೆ, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕುರಿತಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಪಶುಸಂಗೋಪನಾ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಅಧಿಕಾರಿಗಳನ್ನೇ ಹೊಣೆ ಮಾಡಬೇಕಾಗುತ್ತದೆ:

    ಅಧಿಕಾರಿಗಳ ನಿಧಾನ ಧೋರಣೆಯಿಂದ ನೀರು ಸಂಗ್ರಹಣೆ ಸಂಬಂಧಿತ ಕಾಮಗಾರಿಗಳು ವಿಳಂಬವಾಗಿವೆ ಎಂದು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಅವರು, ಸಾರ್ವಜನಿಕರಿಂದ ಸಮಸ್ಯೆ ಕೂಗು ಕೇಳಿಬಂದರೇ ತಮ್ಮನ್ನೇ ಹೊಣೆ ಮಾಡುವುದಾಗಿ ಸಚಿವರು ಎಚ್ಚರಿಕೆ ನೀಡಿದರು. ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಮೇಲಧಿಕಾರಿಗಳಿಗೆ ತಕ್ಷಣ ಮಾಹಿತಿ ನೀಡಬೇಕು ಹಾಗೂ ವಿಳಂಬ ನೀತಿಯನ್ನು ಸಹಿಸಲಾಗುವುದಿಲ್ಲ ಎಂದು ಅವರು ಸೂಚಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್ ತಿಪ್ಪೇಸ್ವಾಮಿ ಸೇರಿದಂತೆ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ತುಮಕೂರು: 20 ಸಾವಿರ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ: ಜಿಲ್ಲಾಧಿಕಾರಿ ಶುಭ ಕಲ್ಯಾಣ್‌

    April 6, 2026

    Leave A Reply Cancel Reply

    Our Picks

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026

    ದಾಖಲೆ ಬರೆದ ನರೇಂದ್ರ ಮೋದಿ: ಮುಖ್ಯಮಂತ್ರಿ, ಪ್ರಧಾನಿಯಾಗಿ ದೀರ್ಘಾವಧಿ ಆಡಳಿತ ನಡೆಸಿದ ನಾಯಕ

    March 23, 2026

    ದೇವೇಗೌಡರು ಹಾಗೂ ಕುಮಾರಸ್ವಾಮಿಯವರಿಗೆ ವಿಶಾಲ ಹೃದಯವಿರಲಿಲ್ಲ: ಡಿ.ಕೆ.ಶಿವಕುಮಾರ್ ವಾಗ್ದಾಳಿ

    March 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಶಿರಾ: ಕಾರ್ಯಕರ್ತರೇ ಶಾಶ್ವತ, ಬಿಜೆಪಿ ಅಧಿಕಾರದಲ್ಲಿ ಪುನಃ ಹಿಂದಿ ಜಾರಿ: ಬಿಜೆಪಿ 46ನೇ ವರ್ಷದ ಸಂಸ್ಥಾಪನಾ ದಿನ ಆಚರಣೆ

    April 7, 2026

    ಶಿರಾ/ತುಮಕೂರು: ದೇಶದಲ್ಲಿ ಸುಮಾರು 15 ಕೋಟಿ ಬಿಜೆಪಿ ಕಾರ್ಯಕರ್ತರು ಇದ್ದು, ಬಿಜೆಪಿ ಪಕ್ಷವನ್ನು ತಳ ಮಟ್ಟದಿಂದ ಕಟ್ಟುವುದು ನಮ್ಮ ಮೂಲ…

    ಬಿಜೆಪಿ ಇತಿಹಾಸ, ಸಿದ್ಧಾಂತ ಜನರಿಗೆ ತಿಳಿಸಿ: ಕಾರ್ಯಕರ್ತರಿಗೆ ಶಾಸಕ ಜ್ಯೋತಿ ಗಣೇಶ್ ಕರೆ

    April 7, 2026

    ಹೊನ್ನುಡಿಕೆಯಲ್ಲಿ ನರ ಮತ್ತು ಮನೋರೋಗ ತಪಾಸಣಾ ಶಿಬಿರ: ಮಾನಸಿಕ ಆರೋಗ್ಯದ ಬಗ್ಗೆ ಎಚ್ಚರಿಕೆ ಅಗತ್ಯ ಎಂದ ಮಾಜಿ ಶಾಸಕ ಎಚ್.ನಿಂಗಪ್ಪ

    April 7, 2026

    ಮಧುಗಿರಿ: ಸ್ಮಾರ್ಟ್ ಮೀಟರ್ ಅಳವಡಿಕೆಗೆ ರೈತ ಸಂಘದ ತೀವ್ರ ವಿರೋಧ; ಏಪ್ರಿಲ್ 13ಕ್ಕೆ ಪ್ರತಿಭಟನೆ

    April 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.