ಬೆಂಗಳೂರು: ಹಾಸನ ಲೋಕಸಭೆ ಫಲಿತಾಂಶ ಅನಿರೀಕ್ಷಿತ ಬೆಳವಣಿಗೆ. ಹಾಸನದಲ್ಲಿ ಮತ್ತೆ ಪಕ್ಷ ಕಟ್ಟುವ ಕೆಲಸ ಮಾಡುತ್ತೇವೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಹಾಸನ ಸೋಲಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಸನದ ಬೆಳವಣಿಗೆ ಅನಿರೀಕ್ಷಿತ. ಇಂತಹ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆ, ಚುನಾವಣೆಯಲ್ಲಿ ಗೆಲುವು, ಸೋಲು ಸಾಮಾನ್ಯ. ದೇವೇಗೌಡರು ಸೋತಿರೋ ಇತಿಹಾಸ ಇದೆ.
ಸೋತಿದ್ದಾರೆ ಅಂತ ಬೇಸರ ಮಾಡಿಕೊಂಡು ಮನೆಯಲ್ಲಿ ಕೂರೋದಿಲ್ಲ. ಸಾವಿರಾರು ಕಾರ್ಯಕರ್ತರು ಹಾಸನದಲ್ಲಿ ಇದ್ದಾರೆ. ಅವರಿಗಾಗಿ ನಾವು ಅವರ ಜೊತೆ ಇದ್ದೇವೆ. ಮತ್ತೆ ಪಕ್ಷ ಕಟ್ಟುವ ಕೆಲಸ ಹಾಸನದಲ್ಲಿ ಮಾಡುತ್ತೇವೆ ಎಂದರು. ಹಾಸನ ಸೋಲಿಗೆ ಕಾರಣ ಪಕ್ಷದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ. ಆತ್ಮ ವಿಮರ್ಶೆ ಮಾಡಿಕೊಳುತ್ತೇವೆ. ಪ್ರಜ್ವಲ್ ರಿಂದ ಸೋಲಾಯಿತು ಎಂದು ನಾನು ಮಾತಾಡಲ್ಲ. ಟಿಕೆಟ್ ಕೊಟ್ಟಿದ್ರು. ಚುನಾವಣೆ ಆಗಿದೆ, ಸೋಲಾಯ್ತು. ಅದರ ಬಗ್ಗೆ ನಾನೇನು ಮಾತಾಡಲ್ಲ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296