ತುಮಕೂರು: ಹೇಮಾವತಿ ಲಿಂಕ್ ಕಾಮಗಾರಿ ಯೋಜನೆ ವಿರೋಧಿಸಿ ನಡೆದ ಹೋರಾಟವು ಸ್ವಾರ್ಥಕ್ಕಾಗಿ ನಡೆದಿಲ್ಲ ಬದಲಾಗಿ ರೈತರ ನೀರಿಗಾಗಿ ಹೋರಾಟ ಮಾಡಿದ್ದೇವೆ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯದರು ಧರಣಿ ನಡೆಸುತ್ತಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅವೈಜ್ಞಾನಿಕವಾಗಿದೆ ಎಂದು ಹೋರಾಟ ಮಾಡಿದ್ದೇವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.
ಆದರೆ ಈ ಹೋರಾಟದಲ್ಲಿ ಭಾಗವಹಿಸಿದ್ದ ಸ್ವಾಮೀಜಿಗಳು ಹಾಗೂ ರೈತರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ. ಅಂದು ಶಾಂತ ರೀತಿಯಿಂದ ಹೋರಾಟ ಮಾಡಿದ್ದೆವು ಎಂದು ಹೇಳಿದ್ದಾರೆ.
ಯಾವುದೇ ಸರ್ಕಾರಿ ಆಸ್ತಿಪಾಸ್ತಿ ನಾಶಪಡಿಸಿಲ್ಲ. ಆದರೂ ರೈತರನ್ನು ಹಾಗೂ ಚಳುವಳಿಯನ್ನು ಹತ್ತಿಕ್ಕಬೇಕು ಎಂಬ ಉದ್ದೇಶದಿಂದ ಸರ್ಕಾರ ಈ ರೀತಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಸರ್ಕಾರ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಮ್ಮ ಹಕ್ಕನ್ನು ಹಾಗೂ ಹೋರಾಟವನ್ನು ದಮನ ಮಾಡಬೇಕೆಂಬ ಉದ್ದೇಶವನ್ನು ಹೊಂದಿದ್ದಾರೆ. ರಾಮನಗರಕ್ಕೆ ಅವೈಜ್ಞಾನಿಕವಾಗಿ ಹೇಮಾವತಿ ನೀರನ್ನು ತೆಗೆದುಕೊಂಡು ಹೋಗುತ್ತಿರುವುದಕ್ಕೆ ನಮ್ಮ ತಕರಾರಿದೆ ಎಂದು ಉಪಮುಖ್ಯಮಂತ್ರಿಯ ಡಿ.ಕೆ.ಶಿವಕುಮಾರ್ ಅವರಿಗೆ ಎಚ್ಚರಿಕೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————