ಅರಕಲಗೂಡು: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ತಾಲ್ಲೂಕು ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರಿ ನೌಕರರಲ್ಲಿ ಶೇ 40 ರಷ್ಟು ನೌಕರರು ಈ ಇಲಾಖೆಯವರೆ ಇದ್ದು, ವಾರ್ಷಿಕ ರೂ 50 ಸಾವಿರ ಕೋಟಿ ವೆಚ್ಚವಾಗುತ್ತಿದೆ. 7 ನೇ ವೇತನ ಆಯೋಗದ ಅನುಷ್ಠಾನದಿಂದ ಶಿಕ್ಷರ ವೇತನದಲ್ಲಿ ರೂ 6 ಸಾವಿರ ಕೋಟಿ ಹೆಚ್ಚಳವಾಗಿದೆ ಎಂದು ಅವರು ತಿಳಿಸಿದರು.
ಕಲ್ಯಾಣ ಕರ್ನಾಟಕದಲ್ಲಿ 6 ಸಾವಿರ ಶಿಕ್ಷಕರ ನೇಮಕಾತಿ ಬಾಕಿ ಇದ್ದು 5800 ಶಿಕ್ಷಕರನ್ನು ಒಂದುತಿಂಗಳಲ್ಲಿ ನೇಮಕಾತಿ ಮಾಡಲಾಗುವುದು. ರಾಜ್ಯದಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕಮಾಡಿ ಕೊಂಡಿದ್ದು ದೈಹಿಕ ಶಿಕ್ಷರು ಸೇರಿದಂತೆ ವಿವಿಧ ವಿಷಯಗಳನ್ನು ಬೋಧಿಸಲು ಹೆಚ್ಚುವರಿಯಾಗಿ 10 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದರು.
ಸರ್ಕಾರಿ ಶಾಲೆಯ ಮಕ್ಕಳಲ್ಲಿ ಅಪೌಷ್ಠಕತೆ ಹೊಗಲಾಡಿಸಲಿ ಈಗಾಗಲೇ ರಾಗಿ ಮಾಲ್ಟ ನೀಡಲಾಗುತ್ತಿದೆ. ವಾರದಲ್ಲಿ ಎರಡು ದಿನ ಕೋಳಿ ಮೊಟ್ಟೆ ನೀಡುವ ಯೋಜನೆ ಮಾಡಲಾಗಿತ್ತು. ಈ ಯೋಜನೆಗೆ ಅಜೀಂ ಪ್ರೇಮ್ ಜಿ ಪೌಂಡೇಷನ್ ರೂ. 1591 ಕೋಟಿ ದೇಣಿಗೆ ನೀಡಿದ್ದು ಇದರಲ್ಲಿ ವಾರದ 6 ದಿನಗಳೂ ಮೊಟ್ಟೆ ನೀಡುವ ಯೋಜನೆ ರೂಪಿಸಿದ್ದು ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296