ತುಮಕೂರು: ಎತ್ತಿನಹೊಳೆ ಕಾಮಗಾರಿ ಮೂಲಕ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಈಗ ಬಂದು ನೋಡಲಿ, ನಾವು ನೀರು ಹರಿಸುವ ವ್ಯವಸ್ಥೆಗೆ ಚಾಲನೆ ನೀಡಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಅವರು ಕಣ್ಣಿನಿಂದ ನೋಡಲಿ ಎಂದು ಇಂದು ಎತ್ತಿನಹೊಳೆ ಕಾಮಗಾರಿ ಮೂಲಕ ನೀರನ್ನು ಹರಿಸಿದ್ದೇವೆ ಎಂದು ಹೇಳಿದರು.
ಕಾಮಗಾರಿಗೆ ಪೂರಕವಾಗಿರುವಂತಹ ಅರಣ್ಯ ಭೂಮಿಯನ್ನು ಕೂಡ ಈಗಾಗಲೇ ಮಂಜೂರು ಮಾಡಲಾಗಿದೆ ಎಂದು ಹೇಳಿದರು.
ಎತ್ತಿನಹೊಳೆ ಕಾಮಗಾರಿ ಮೂಲಕ ಹರಿದು ಬರುತ್ತಿರುವ ಕನಿಷ್ಠ ಮೂರು ಟಿಎಂಸಿ ನೀರನ್ನು ಸಂಗ್ರಹಿಸಲು ಚಿಕ್ಕಬಳ್ಳಾಪುರ ಹಾಗೂ ಕೊರಟಗೆರೆ ಗಡಿಭಾಗದಲ್ಲಿ ಬೈರಗೊಂಡ್ಲು ಜಲಾಶಯ ನಿರ್ಮಾಣಕ್ಕೆ ಎದುರಾಗಿರುವ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಹೇಳಿದರು.
ಈ ರೀತಿ ನೀರು ಸಂಗ್ರಹಿಸಲು ಸಾಧ್ಯವಾಗದಿದ್ದರೆ ಚಿಕ್ಕಬಳ್ಳಾಪುರ ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರಕ್ಕೆ ನೀರು ಕೊಡಲು ಕಷ್ಟವಾಗಲಿದೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW