ಜಾತಿ ಗಣತಿ ಕುರಿತು ಅಮಿತ್ ಶಾ ಹೇಳಿಕೆಯನ್ನು RSS ತಿರಸ್ಕರಿಸಿದೆ. ಜಾತಿ ಗಣತಿ ದೇಶದ ಸಮಗ್ರತೆಗೆ ಧಕ್ಕೆ ತರಲಿದೆ ಎಂದು ಆರ್ ಎಸ್ ಎಸ್ ಹೇಳಿದೆ. ಜಾತಿ ಗಣತಿಯನ್ನು ವಿರೋಧಿಸುವುದಾಗಿ ಆರ್ ಎಸ್ಎಸ್ ಹೇಳಿದೆ. ಜಾತಿ ಆಧಾರಿತ ಜನಗಣತಿ ದೇಶದಲ್ಲಿ ಸಾಮಾಜಿಕ ಅಸಮಾನತೆಗಳನ್ನು ಸೃಷ್ಟಿಸುತ್ತದೆ ಎಂದು ಆರ್ ಎಸ್ ಎಸ್ ಮುಖಂಡರು ಹೇಳಿದ್ದಾರೆ.
ಜಾತಿ ಗಣತಿಯಲ್ಲಿ ನಾವು ಯಾವುದೇ ಲಾಭವನ್ನು ಕಾಣುತ್ತಿಲ್ಲ ಆದರೆ ಹಲವಾರು ಸಮಸ್ಯೆಗಳಿವೆ ಎಂದು ಹಿರಿಯ ಆರ್ ಎಸ್ ಎಸ್ ಪ್ರಚಾರಕ ಶ್ರೀಧರ ಗಾಡ್ಗೆ ಹೇಳಿದರು. ಮಹಾರಾಷ್ಟ್ರ ರಾಜ್ಯ ವಿಧಾನಸಭೆ ಮತ್ತು ಪರಿಷತ್ತಿನ ಬಿಜೆಪಿ ಮತ್ತು ಶಿವಸೇನೆ (ಶಿಂಧೆ ಬಣ) ಶಾಸಕರು ನಾಗ್ಪುರದಲ್ಲಿರುವ ಆರ್ ಎಸ್ ಎಸ್ ಪ್ರಧಾನ ಕಚೇರಿಯನ್ನು ತಲುಪಿದಾಗ ಸಂಘಟನೆಯು ತನ್ನ ನಿಲುವನ್ನು ಸ್ಪಷ್ಟಪಡಿಸಿತು.
ಬಿಜೆಪಿ ಮತ್ತು ಶಿವಸೇನೆ ನಾಯಕರು ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದಾಗ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿರಲಿಲ್ಲ.ಆರ್ ಎಸ್ ಎಸ್ ಕೇಂದ್ರ ಕಚೇರಿಗೆ ಭೇಟಿ ನೀಡಿದ ತಂಡದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇರಲಿಲ್ಲ.


