nammatumakuru

    Subscribe to Updates

    Get the latest creative news from FooBar about art, design and business.

    What's Hot

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025
    Facebook Twitter Instagram
    ಟ್ರೆಂಡಿಂಗ್
    • ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ
    • ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ
    • ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ
    • ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್
    • ಶಿಕ್ಷಕರ ಅರ್ಹತಾ ಪರೀಕ್ಷೆ: ಅಡೆತಡೆಗಳಿಲ್ಲದೇ ವ್ಯವಸ್ಥಿತವಾಗಿ ನಡೆಸಲು ಅಪರ ಜಿಲ್ಲಾಧಿಕಾರಿ ಸೂಚನೆ
    • ದತ್ತ ಜಯಂತಿ ಬ್ಯಾನರ್ ತೆರವು ವಿಚಾರ: ಕಾಂಗ್ರೆಸ್ ಗ್ರಾ.ಪಂ. ಸದಸ್ಯನ ಬರ್ಬರ ಹತ್ಯೆ
    • ಹಣಕಾಸಿನ ವಿಚಾರಕ್ಕೆ ಮಹಿಳೆಯ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
    • ಅಂಬೇಡ್ಕರ್ ಎಂದರೆ, ಮಹಾನ್ ಶಕ್ತಿ: ತಹಶೀಲ್ದಾರ್ ಮೋಹನಕುಮಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    ಕೊರಟಗೆರೆ July 4, 2025

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    By adminJuly 4, 2025No Comments2 Mins Read
    koratagere

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ ಕಲಿಕಾ ದಿನದ ಶುಭ ಹಾರೈಕೆಯನ್ನು ಕಾಲೇಜಿನ ಆಡಳಿತ ಮಂಡಳಿ ಮತ್ತು ಸಂಸ್ಥೆಯ ಅಧ್ಯಕ್ಷರಾದ ಗಂಗರಾಜು “ಗ್ರಾಂಡ್ ವೆಲ್ಕಮ್ ಡೇ” ಎಂಬ ವಿನೂತನ ಕಾರ್ಯಕ್ರಮವನ್ನು ಆಯೋಜಿಸಿದ್ದರು.

    ಜಿಲ್ಲೆಯ ಹೆಸರಾಂತ ಮುಖ್ಯ ಭಾಷಣಕಾರ, ಕವಿ–ಲೇಖಕರಾದ ಗಂಗಾಧರ್ ಕೊಡ್ಲಿರವರು ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಉದ್ಘಾಟಿಸಿ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.


    Provided by
    Provided by

    ಪ್ರಥಮ ಪಿಯುಸಿ ವಿದ್ಯಾರ್ಥಿ — ವಿದ್ಯಾರ್ಥಿನಿಯರಿಗೆ ವರ್ಷದ ಮೊದಲ ಕಲಿಕಾ ಚಟುವಟಿಕೆಗಳ  ಬಗ್ಗೆ ಸಮಗ್ರ ಮಾಹಿತಿ ನೀಡುವುದರ ಜೊತೆಗೆ ಮೌಲ್ಯಧಾರಿತ ಶಿಕ್ಷಣವನ್ನು ಕಾಲೇಜಿನ ಆಡಳಿತ ಮಂಡಳಿ ವತಿಯಿಂದ ನೀಡಲಾಗುವುದು. ವಿದ್ಯಾರ್ಥಿಗಳಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಮತ್ತು ಅಗತ್ಯವಾದ ಪ್ರಯೋಗೀಕ ಶಿಕ್ಷಣವನ್ನು ಸಂಸ್ಥೆಯು ಪೂರೈಸಲಾಗುವುದು ಎಂದು ಸಂಸ್ಥೆಯ ಕಾರ್ಯದರ್ಶಿಯಾದ ನಿರ್ಮಲಾ ತಿಳಿಸಿದರು.

    ನಂತರ ಮಾತನಾಡಿದ ಸುಭಾಷ್, ಪದವಿ ಪೂರ್ವ ಕಾಲೇಜಿನ ಅಧ್ಯಕ್ಷರಾದ ಗಂಗರಾಜು, ಪ್ರೌಢಶಾಲೆಯ 10ನೇ ತರಗತಿ ವ್ಯಾಸಂಗವನ್ನು ಮುಗಿಸಿ ಕಾಲೇಜು ಹಂತದ ಶಿಕ್ಷಣ ಪಡೆಯಲು ಬಂದಂತಹ ವಿದ್ಯಾರ್ಥಿ ವಿದ್ಯಾರ್ಥಿನಿಯರು ಹೊಸತನದ ಶಿಕ್ಷಣವನ್ನು ಶ್ರದ್ಧಾ ಏಕಾಗ್ರತೆ ವಿಶ್ವಾಸ ಮತ್ತು ಭಕ್ತಿಯಿಂದ ವಿದ್ಯಾಭ್ಯಾಸ ಕಲಿಯಬೇಕು ನಮ್ಮ ಸಂಸ್ಥೆಯು ಸಕಲ ಮೂಲಭೂತ ಸೌಕರ್ಯಗಳನ್ನು ನೀಡುವುದರ ಜೊತೆಗೆ ಮೌಲ್ಯ ಆಧಾರಿತ ಶಿಕ್ಷಣವನ್ನು ಸಹ ನೀಡಲಾಗುವುದು. ಈ ನಮ್ಮ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವುದರ ಜೊತೆಗೆ ಮುಂದಿನ ವೃತ್ತಿಪರ ಕೋರ್ಸ್ ಗಳಿಗೆ ಹೋಗಲು ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಭವಿಷ್ಯದ ಗುರಿಯನ್ನು ತಲುಪಲು ಶ್ರಮ, ಶಿಸ್ತು ಮತ್ತು ಸಂಯಮ ನಿಮ್ಮಲ್ಲಿದ್ದರೆ ಖಂಡಿತ ತಮ್ಮ ತಮ್ಮ ಗುರಿ ತಲುಪುತ್ತೀರಿ ಹಾಗೆಯೇ ಕಾಲೇಜಿನ ಆಡಳಿತ ಮಂಡಳಿಯು ಸದಾಕಾಲ ತಮ್ಮಗಳ ಜೊತೆ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಎಂದು ತಿಳಿಸಿದರು.

    ಭಾಷಣಕಾರ ಕವಿ, ಲೇಖಕರಾದ ಗಂಗಾಧರ್ ಕೊಡ್ಲಿ ಮಾತನಾಡಿ, ಸುಭಾಷ್ ಪದವಿ ಪೂರ್ವ ಕಾಲೇಜು ತಾಲ್ಲೂಕಿನಲ್ಲಿ ಉತ್ತಮವಾದ ಶಿಕ್ಷಣ ನೀಡುತ್ತಿದೆ. ನುರಿತ ಅನುಭವಿ ಉಪನ್ಯಾಸಕರಿಂದ ಒಳ್ಳೆಯ ಶಿಕ್ಷಣ ಮಕ್ಕಳಿಗೆ ದೊರಕುತ್ತಿದೆ. ಮೌಲ್ಯಧಾರಿತ ಶಿಕ್ಷಣದ ಜೊತೆಗೆ ಪ್ರಾಯೋಗಿಕ ತರಬೇತಿಗಳಿಗೆ ಹೆಚ್ಚಿನ ಹೊತ್ತು ನೀಡಲಾಗುತ್ತಿದೆ. ವಿದ್ಯಾರ್ಥಿಗಳು ಶ್ರದ್ಧೆ ಭಕ್ತಿ ವಿನಯದಿಂದ ಓದಿದರೆ ಭವಿಷ್ಯದಲ್ಲಿ ಒಳ್ಳೆಯ ಗುರಿ ತಲುಪುತ್ತಾರೆ ಎಂದರು.

    ಕಾಲೇಜಿನ ಪ್ರಾಂಶುಪಾಲರಾದ ನಿರ್ಮಲ ಗಂಗಾಧರ್, ಕನ್ನಡ ಪ್ರಾಧ್ಯಾಪಕರಾದ ದೊಡ್ಡನಾಗಪ್ಪ, ಉಪನ್ಯಾಸಕರಾದ ನವೀನ್, ದಯಾನಂದ್, ವಿವೇಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಕೊರಟಗೆರೆ | ಮೊದಲ ಬಾರಿಗೆ ಹಂಚಿಹಳ್ಳಿ ಗ್ರಾ.ಪಂಗೆ ಗಾಂಧಿ ಗ್ರಾಮ ಪುರಸ್ಕಾರ

    December 6, 2025

    ದೃಷ್ಠಿ ಚೇತನ ಮಹಿಳಾ ಟಿ20 ವಿಶ್ವಕಪ್: ಆಟಗಾರ್ತಿ ಕಾವ್ಯ ಅವರಿಗೆ ಸನ್ಮಾನ

    December 5, 2025

    ರಸ್ತೆ ಅಗಲಿಕರಣ: ಮುಲಾಜಿಲ್ಲದೆ ಅಕ್ರಮ ಕಟ್ಟಡ ತೆರವುಗೊಳಿಸಿ: ಸಿಇಓ ಪ್ರಭು ಜಿ. ಸೂಚನೆ

    December 3, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಧರ್ಮದ ಹೆಸರಿನಲ್ಲಿ ಬುಡಕಟ್ಟು ಆಚರಣೆ, ಪದ್ಧತಿ, ದೈವಾರಾಧನೆ ನಶಿಸುತ್ತಿದೆ: ಸಿ.ಜಿ.ಲಕ್ಷ್ಮೀಪತಿ

    December 7, 2025

    ತುಮಕೂರು: ಧರ್ಮಗಳ ಪ್ರಭಾವದಿಂದ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಆಚರಣೆಗಳು ಕ್ಷೀಣಿಸುತ್ತಿವೆ. ಆಹಾರ ಪದ್ಧತಿ, ದೈವಾರಾಧನೆ ನಶಿಸುತ್ತಿದೆ ಎಂದು ಬೆಂಗಳೂರು ಮಹಾರಾಣಿ…

    ಡಿಕೆಶಿ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಸಚಿವ ಕೆ.ಎನ್.ರಾಜಣ್ಣ

    December 6, 2025

    ವಿವಿಧ ಯೋಜನೆಯಡಿ ಮಹಿಳೆಯರಿಗೆ ಆರ್ಥಿಕ ನೆರವು: ಅರ್ಜಿ ಆಹ್ವಾನ

    December 6, 2025

    ಡಿಸೆಂಬರ್ 8ರಿಂದ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಆಹಾರ ಅದಾಲತ್

    December 6, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.