ಬೆಂಗಳೂರು: ಕಾಂಗ್ರೆಸ್ ಸರ್ಕಾರದ 60% ಕಮಿಷನ್ ಆರೋಪಕ್ಕೆ ದಾಖಲೆ ಕೊಡಿ ಎನ್ನುವ ಸಿಎಂ ಸಿದ್ಧರಾಮಯ್ಯ ಶೇ. 40 ರಷ್ಟು ಕಮಿಷನ್ ಆರೋಪಕ್ಕೆ ಯಾವ ದಾಖಲೆ ಕೊಟ್ಟಿದ್ದೀರಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, 60% ಕಮೀಶನ್! ಆಧಾರವಿಲ್ಲದೆ ಆರೋಪದ ಮಾತೆಲ್ಲಿ ಬಂತು ಮಾನ್ಯ ಮುಖ್ಯಮಂತ್ರಿಗಳೇ? ನಿಮ್ಮ ಪಕ್ಷದ ಪರವೇ ಇರುವ ಗುತ್ತಿಗೆದಾರರು, ತುಮಕೂರಿನ ನಿಮ್ಮ ಕಾಂಗ್ರೆಸ್ ಪಕ್ಷದ ಮುಖಂಡರೇ ಮಾಡಿದ ಆರೋಪ ಎಂದಿದ್ದಾರೆ.
ನಮ್ಮ ಪಕ್ಷದ ಸರಕಾರಕ್ಕಿಂತ ಹಿಂದಿನ ಬಿಜೆಪಿ ಸರ್ಕಾರವೇ ವಾಸಿ ಇತ್ತು ಎಂದು ಅಲವತ್ತುಕೊಂಡಿದ್ದರು. ನಿಮ್ಮ ಪಕ್ಷದ ಗುತ್ತಿಗೆದಾರರು! ಕಾಂಗ್ರೆಸ್ ಸರಕಾರದಲ್ಲೂ 40% ಕಮೀಶನ್ ಸುಲಿಗೆ ಮಾಡಲಾಗುತ್ತಿದೆ ಎಂಬುದು ಅವರ ನೇರವಾಗಿ ಆರೋಪ.
ಕಮೀಷನ್ ವ್ಯವಹಾರ ಇಲ್ಲ ಎಂದಾದರೆ, ‘ಯಾಕಪ್ಪಾ ಹಾಗೆ ಹೇಳಿದಿರಿ?’ ಎಂದು ಅವರನ್ನೇ ಕರೆದು ಕೇಳಬೇಕಿತ್ತು. ಕೇಳಲಿಲ್ಲ ಯಾಕೆ? ಪ್ರತಿ ಆರೋಪಕ್ಕೂ ಈಗ ದಾಖಲೆ ಕೇಳುವ ನೀವು, ಬಿಜೆಪಿ ಸರಕಾರದ ಮೇಲೆ 40% ಕಮೀಶನ್ ಆರೋಪ ಮಾಡಿ, ಪುಟಗಟ್ಟಲೇ ಜಾಹೀರಾತು ಕೊಟ್ಟರಲ್ಲಾ.. ಆಗ ಎಷ್ಟು ದಾಖಲೆ ನೀಡಿದ್ದೀರಿ? ನಿಮ್ಮ ರಾಜಕೀಯ ಜೀವನದಲ್ಲಿ ಎಂದಾದರೂ ದಾಖಲೆ ಇಟ್ಟು ಆರೋಪ ಮಾಡಿದ್ದೀರಾ? ಎಂದು ಎಚ್.ಡಿ ಕೆ ಪ್ರಶ್ನಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


