ಬೆಂಗಳೂರು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಹೆಚ್.ಡಿ ಕುಮಾರಸ್ವಾಮಿಯವರಿಂದ ರಾಜ್ಯಕ್ಕೆ ಕೊಡುಗೆ ಏನು ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಪ್ರಶ್ನಿಸಿದ್ದು, ತನ್ನ ಜೊತೆಗೆ ಈ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, NDA ಎಂದರೆ ನೇಷನ್ ಡೆಸ್ಟ್ರಾಯ್ ಅಲಾಯನ್ಸ್. ಕೇಂದ್ರ ಸಚಿವ ಜೋಶಿ ಮತ್ತು ಕುಮಾರಸ್ವಾಮಿಗೆ ರಾಜ್ಯದ ಮೇಲೆ ಪ್ರೀತಿ ಜಾಸ್ತಿಯಾಗಿದೆ. ಕಳೆದ 1 ವರ್ಷದಿಂದ ನೀವು ಇಬ್ಬರು ಕೇಂದ್ರದಲ್ಲಿ ಏನ್ ಕಡಿದು ಕಟ್ಟೆ ಹಾಕಿದ್ದೀರಾ? ಉತ್ತರ ಕೊಡಿ. ಆತ್ಮಸಾಕ್ಷಿ ಇದ್ದರೆ ಬಹಿರಂಗ ಚರ್ಚೆ ಇಬ್ಬರು ಬರಲಿ ಎಂದರು.
ಕೇಂದ್ರ ಸರ್ಕಾರ ಏನು ಮಾಡಿದೆ ಎಂದು ತಿಳಿಯುವ ಕುತೂಹಲವಿದೆ. ನಮ್ಮ ರಾಜ್ಯ ಸರ್ಕಾರ 2 ವರ್ಷ ಏನು ಮಾಡಿದೆ ಎಂದು ನಾನು ಹೇಳುತ್ತೇನೆ. ಮೊದಲು ನೀವು ರಾಜ್ಯಕ್ಕೆ ಏನು ಮಾಡಿದ್ದೀರಾ ಹೇಳಿ? ಬಹಿರಂಗ ಚರ್ಚೆಗೆ ಜೋಶಿ, ಕುಮಾರಸ್ವಾಮಿ ಬರಲಿ ಎಂದು ವಾಗ್ದಾಳಿ ನಡೆಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW