ತುಮಕೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭದಲ್ಲಿ ಅಪಾಯಕಾರಿಯಾಗಿ
ವೀಲಿಂಗ್ ಮತ್ತು ಡ್ರಾಗ್ ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಸ್ತೆಯಲ್ಲಿ ಮೋಟಾರ್ ಸೈಕಲ್ನ್ನು ಮತ್ತು ಕಾರನ್ನು ಅಪಾಯಕಾರಿಯಾಗಿ ಚಾಲನೆ ಮಾಡಬಾರದು. ಸಾರ್ವಜನಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ಕೆಣಕುವುದು ಮಾಡಬಾರದು ಮತ್ತು ಇತರರೊಂದಿಗೆ ಸಭ್ಯವಾಗಿ ನಾಗರೀಕತೆಯಿಂದ ವರ್ತಿಸಬೇಕು ಎಂದು ಹೇಳಿದರು.
ನಗರದ ಪ್ರಮುಖ ಯಾತ್ರಾ ಸ್ಥಳಗಳಾಗಿರುವ ನಾಮದ ಚಿಲುಮೆ, ದೇವರಾಯದುರ್ಗ ಹಾಗೂ ಬಸದಿಬೆಟ್ಟ ಸ್ಥಳಗಳು ಸಂರಕ್ಷಿತ ಅರಣ್ಯ ಪ್ರದೇಶಗಳು ಅಪಘಾತ ವಲಯಗಳಾಗಿರುವುದರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಹಿತ ದೃಷ್ಠಿಯಿಂದ ಈ ಪ್ರದೇಶಗಳ ವ್ಯಾಪ್ತಿಯಲ್ಲಿ ಡಿ 31 ರಿಂದ ಜ. 2ರವರೆಗೆ ಪ್ರವೇಶ ನಿಷೇಧಿಸಲಾಗಿದೆ.ಸಾರ್ವಜನಿಕರ ಪ್ರವೇಶವನ್ನು ನಿರ್ಭಂಧಿಸಲು ಪಿಕೇಟಿಂಗ್ ಪಾಯಿಂಟ್ಗಳನ್ನು ಹಾಕಲಾಗಿದೆ ಎಂದರು.
ಯಾವುದೇ ಸಾರ್ವಜನಿಕರ ಸ್ಥಳಗಳಲ್ಲಿ ಹಾಗೂ ಸ್ವಂತ ಫಾರಂ ಹೌಸ್ಗಳಲ್ಲಿ ಸಂಬಂಧಪಟ್ಟ ಪ್ರಾಧಿಕಾರಿಗಳಿಂದ ಅನುಮತಿಯಿಲ್ಲದೆ ರೇವ್ಪಾರ್ಟಿಗಳು ಇತರೆ ಮೋಜುಮಸ್ತಿ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದಿದ್ದಾರೆ.
ಮದ್ಯಪಾನ ಮಾಡಿ ಕಾರು ಅಥವಾ ಮೋಟಾರು ಸೈಕಲನ್ನು ಚಾಲನೆ ಮಾಡಬಾರದು. ಹೊಸವರ್ಷಾಚರಣೆಯನ್ನು ಅಪಘಾತ ಮುಕ್ತವನ್ನಾಗಿ ಮತ್ತು ಸಾರ್ವಜನಿಕ ಸ್ನೇಹಿಯಾಗಿ ಆಚರಿಸುವಂತೆ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx